ಡಾ|ಜಿ.ಡಿ.ಜೋಶಿ ಪ್ರತಿಷ್ಠಾನದಿಂದ ಮನೆ ಮನೆಯಲ್ಲಿ ಸಾಹಿತ್ಯ ಸ್ಪಂದನ


Team Udayavani, Mar 17, 2017, 3:38 PM IST

16-Mum02.jpg

ಮುಂಬಯಿ: ಡಾ| ಜಿ. ಡಿ. ಜೋಶಿ ಪ್ರತಿಷ್ಠಾನ ಮುಂಬಯಿ ವತಿಯಿಂದ ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ ಕಾರ್ಯಕ್ರಮವು ಮಾ. 4 ರಂದು ನಗರದ ಕತೆಗಾರ್ತಿ, ಲೇಖಕಿ ಶಕುಂತಳಾ ಪ್ರಭು ಅವರ ನೇತೃತ್ವದಲ್ಲಿ ಗೋರೆಗಾಂವ್‌ನಲ್ಲಿ ನಡೆಯಿತು. ಸುಮಾರು ಮೂವತ್ತು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕನ್ನಡ ಕಲಾಕೇಂದ್ರ ಮುಂಬಯಿ ಅಧ್ಯಕ್ಷ ಬಾಲಚಂದ್ರ ರಾವ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ| ಜಿ. ಡಿ. ಜೋಶಿ, ಸಾಹಿತಿ ರವಿ ರಾ. ಅಂಚನ್‌, ಕವಿ, ರಂಗನಿರ್ದೇಶಕ ಸಾ. ದಯಾ ಅವರು ಉಪಸ್ಥಿತರಿದ್ದರು. ಅಪರ್ಣಾ ರಾವ್‌ ಅವರು ಪ್ರಾರ್ಥನೆಗೈದರು. ಆಯೋಜಕರಾದ ಶಕುಂತಳಾ ಪ್ರಭು ಅವರು ಸ್ವಾಗತಿಸಿದರು.

ಲಲಿತಾ ಅಂಗಡಿ ಅವರು ಕಾರ್ಮೋಡ, ಅಪರ್ಣಾ ರಾವ್‌ ಅವರು ಮಾಸ್ಟರ್‌ ಸ್ಟ್ರೋಕ್‌ ಕವನಗಳನ್ನು ವಾಚಿಸಿದರು. ಪದ್ಮಜಾ ಮಣ್ಣೂರ ಅವರು ನಿನ್ನ ನೀನು ಅರಿತುಕೋ…ಲೇಖನವನ್ನು ಪ್ರಸ್ತುತಪಡಿಸಿದರು. ಮೀನಾ ಕಾಳವಾರ ಅವರು ರಾಜಕೀಯ ನೆಲೆಯಲ್ಲಿ ಮಹಿಳೆಯರ ಸ್ಥಾನಮಾನ ಎಂಬ ಲೇಖನವನ್ನು ಪ್ರಸ್ತುತಪಡಿಸಿದರು. ರಮಾ ನಾಯಕ್‌ ಅವರು ಕುಮಾರಿ ಮಾತಾ ಕಥೆಯನ್ನು ಮಂಡಿಸಿದರು. ಡಾ| ಕೃಷ್ಣ ಶೆಟ್ಟಿ ಅವರು ವೈದ್ಯಕೀಯ ಮಾಹಿತಿ ನೀಡಿ ಸಹಕರಿಸಿದರು. ವಾಣಿ ಶೆಟ್ಟಿ ಅವರು ಪತಿವ್ರತೆ ಊರ್ಮಿಳೆಯ ಮಹಾತ್ಯಾಗದ ಬಗ್ಗೆ ಲೇಖನ ಮಂಡಿಸಿದರು.

ಸುಮಿತ್ರಾ ಗುಜರನ್‌ ಅವರು ರಾಮಾಯಣದಲ್ಲಿ  ಅಗಸನ ಪಾತ್ರದ ಮಹತ್ವದ ಬಗ್ಗೆ ಲೇಖನ ಪ್ರಸ್ತುತಪಡಿಸಿದರು. ಮೀರಾ ಕೃಷ್ಣ ಕಟಾ³ಡಿ ಅವರು ಅರಸಿನ ಕುಂಕುಮದ ಮಹತ್ವ, ಸುಗಂಧಿ ಶ್ಯಾಮ ಹಳೆಯಂಗಡಿ ಅವರು ಸ್ತ್ರೀ ಸಬಲೀಕರಣ ಕುರಿತು ಮಾತನಾಡಿದರು. ಆಶಾ ಶಿವಪುರ ಅವರು ಕನ್ನಡ ಮತ್ತು ಹಿಂದಿ ಕವನಗಳನ್ನು ವಾಚಿಸಿದರು.

ಸುಗುಣಾ ಬಂಗೇರ ಅವರು ಸ್ವರಚಿತ ಕವನ, ಲೀಲಾ ಗಣೇಶ್‌ ಅವರು  ನಾನು ಹೇಗಿರಲಿ ಕವನ, ಗುಣೋದಯ ಐಲ್‌ ಅವರು ಸತ್ಯಮೇವ ಜಯತೇ ಹಾಗೂ ಶಕುಂತಳಾ ಪ್ರಭು ವೃದ್ಧಾಶ್ರಮ ಕಥೆಯನ್ನು ಓದಿದರು. ರವಿ ರಾ. ಅಂಚನ್‌ ಅವರು ಶ್ರಮಶಕ್ತಿ, ಸ್ವಾಭಿಮಾನಿ ಕವನ ವಾಚಿಸಿದರು.

ಬಾಲಚಂದ್ರ ರಾವ್‌ ಅವರು ಮಾತನಾಡಿ, ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ ಕಾರ್ಯಕ್ರಮದ ಮಹತ್ವ ಹಾಗೂ ಅವರ ನಾಟಕಕೃತಿ ಗೆದ್ದು ಸೋತವಳ ಇದರ ಬಗ್ಗೆ ವಿಶ್ಲೇಷಿಸಿದರು. ಪ್ರತಿಷ್ಠಾನ ಕಾರ್ಯದರ್ಶಿ ಡಾ| ಕರುಣಾಕರ ಶೆಟ್ಟಿ ಪಣಿಯೂರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ರಾಮಕೃಷ್ಣ ಪ್ರಭು, ಲಲಿತಾ ಶೆಟ್ಟಿ, ರಮೇಶ್‌ ಶೆಟ್ಟಿ ಪಯ್ನಾರು, ಕಾರಂತ್‌, ಗೋಪಾಲ್‌ ತ್ರಾಸಿ, ರಮೇಶ್‌ ಶಿವಪುರ, ಸುನಿಲ್‌ ರಾವ್‌ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.