ದುಬೈ ಗೆ ಹಾರಿದ ಸಾಂಗ್ಲಿ ಜಿಲ್ಲೆಯ ತಡಾಸರ್ ರೈತರು ಬೆಳೆದ ಡ್ರ್ಯಾಗನ್ ಹಣ್ಣುಗಳು


Team Udayavani, Jun 28, 2021, 2:54 PM IST

Dragon Fruits

ಮುಂಬಯಿ,: ಹಣ್ಣಿನ ರಫ್ತಿಗೆ ಪ್ರಮುಖ ಉತ್ತೇಜನ ನೀಡುವಂತೆ ಕಮಲಂ ಎಂದೂ ಕರೆಯಲ್ಪಡುವ ಫೈಬರ್‌ ಮತ್ತು ಖನಿಜ ಸಮೃದ್ಧ ಡ್ರ್ಯಾಗನ್‌ ಹಣ್ಣುಗಳನ್ನು ದುಬೈ ಗೆ ರಫ್ತು ಮಾಡಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.  ಡ್ರ್ಯಾಗನ್‌ ಹಣ್ಣುಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ತಡಾಸರ್‌ ಗ್ರಾಮದ ರೈತರಿಂದ ಪಡೆಯಲಾಗಿದೆ ಮತ್ತು ಇದನ್ನು ಎಪಿಇಡಿಎ ಮಾನ್ಯತೆ ಪಡೆದ ರಫ್ತುದಾರ-ಕೇ ಬೀ ಯಲ್ಲಿ ಸಂಸ್ಕರಿಸಿ ಪ್ಯಾಕ್‌ ಮಾಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ವೈಜ್ಞಾನಿಕವಾಗಿ ಹೈಲೋಸೆರುಸುಂಡಾಟಸ್‌ ಎಂದು ಕರೆಯಲ್ಪಡುವ ಡ್ರ್ಯಾಗನ್‌ ಹಣ್ಣನ್ನು ಮಲೇಷ್ಯಾ, ಥೈಲ್ಯಾಂಡ್‌, ಫಿಲಿಪೈನ್ಸ್‌, ಯುಎಸ್‌ಎ ಮತ್ತು ವಿಯೆಟ್ನಾಂನಂತಹ ದೇಶಗಳಲ್ಲಿ ಬೆಳೆಯಲಾಗುತ್ತದೆ. ಡ್ರ್ಯಾಗನ್‌ ಹಣ್ಣು ಉತ್ಪಾದನೆಯು 1990ರ ದಶಕದ ಆರಂಭದಲ್ಲಿ ಭಾರತದಲ್ಲಿ ಪ್ರಾರಂಭವಾಗಿದ್ದು, ಮನೆ ತೋಟಗಳಾಗಿ ಬೆಳೆಸಲಾಯಿತು. ಡ್ರ್ಯಾಗನ್‌ ಹಣ್ಣು ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ. ಇದನ್ನು ವಿವಿಧ ರಾಜ್ಯಗಳ ರೈತರು ಕೃಷಿ ಮಾದರಿಯಲ್ಲೇ ಬೆಳೆಸಿಕೊಂಡಿದ್ದಾರೆ.

ಪ್ರಸ್ತುತ ಡ್ರ್ಯಾಗನ್‌ ಹಣ್ಣನ್ನು ಹೆಚ್ಚಾಗಿ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌, ಒಡಿಶಾ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ ಮತ್ತು ಅಂಡಮಾನ್‌  ನಿಕೋಬಾರ್‌ನಲ್ಲಿ ಬೆಳೆಯಲಾಗುತ್ತದೆ. ಈ ಹಣ್ಣಿನ ಕೃಷಿಗೆ ಕಡಿಮೆ ನೀರು ಬೇಕಾಗುತ್ತದೆ ಮತ್ತು ವಿವಿಧ ರೀತಿಯ ಮಣ್ಣಿನಲ್ಲಿ ಬೆಳೆಯಬಹುದು.  ಹಣ್ಣಿನಲ್ಲಿ ಮೂರು ಪ್ರಮುಖ ಪ್ರಭೇದಗಳಿವೆ.

ಪ್ರಧಾನಿ ನರೇಂದ್ರ ಮೋದಿ ಅವರು 2020ರ ಜುಲೈಯಲ್ಲಿ  ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಗುಜರಾತ್‌ನ ಶುಷ್ಕ ಕಚ್‌ ಪ್ರದೇಶದಲ್ಲಿ ಡ್ರಾÂಗನ್‌ ಹಣ್ಣು ಬೆಳೆಸುವ ಬಗ್ಗೆ ಪ್ರಸ್ತಾವಿಸಿದ್ದರು. ಉತ್ಪಾದನೆಯಲ್ಲಿ ಭಾರತದ ಸ್ವಾವಲಂಬನೆ ಖಾತ್ರಿಪಡಿಸಿದ್ದಕ್ಕಾಗಿ ಹಣ್ಣಿನ ಕೃಷಿ ಮಾಡಿದ ಕಚ್‌ ರೈತರನ್ನು ಅವರು ಅಭಿನಂದಿಸಿದ್ದರು. ಹಣ್ಣಿನಲ್ಲಿ ಫೈಬರ್‌, ವಿಟಮಿನ್‌, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತವೆ. ಇದು ಆಕ್ಸಿಡೇಟಿವ್‌ ಒತ್ತಡದಿಂದ ಉಂಟಾಗುವ ಜೀವಕೋಶದ ಹಾನಿಯನ್ನು ಸರಿಪಡಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಈ ಹಣ್ಣಿನಲ್ಲಿ ಕಮಲವನ್ನು ಹೋಲುವ ಸ್ಪೆçಕ್‌ಗಳು ಮತ್ತು ದಳಗಳು ಇರುವುದರಿಂದ ಇದನ್ನು ಕಮಲಂ ಎಂದೂ ಕರೆಯಲಾಗುತ್ತದೆ.

ಮೂಲ ಸೌಕರ್ಯ ಅಭಿವೃದ್ಧಿ, ಗುಣಮಟ್ಟ ಅಭಿವೃದ್ಧಿ ಮತ್ತು ಮಾರುಕಟ್ಟೆ ಅಭಿವೃದ್ಧಿ ಮೊದಲಾದ ವಿವಿಧ ಘಟಕಗಳ ಅಡಿಯಲ್ಲಿ ರಫ್ತುದಾರರಿಗೆ ನೆರವು ನೀಡುವ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತುಗಳನ್ನು ಎಪಿಇಡಿಎ ಉತ್ತೇಜಿಸುತ್ತದೆ. ಇದಲ್ಲದೆ ವಾಣಿಜ್ಯ ಇಲಾಖೆಯು ರಫ್ತು ಯೋಜನೆಗಾಗಿ ವ್ಯಾಪಾರ ಮೂಲ ಸೌಕರ್ಯ, ಮಾರುಕಟ್ಟೆ ಪ್ರವೇಶ ಉಪಕ್ರಮ ಮೊದಲಾದ ವಿವಿಧ ಯೋಜನೆಗಳ ಮೂಲಕ ರಫ್ತಿಗೆ ಸಹಕರಿಸಲಾಗುತ್ತದೆ.

 

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.