ಡಹಾಣೂವಿನ ಪ್ರಸಿದ್ಧ ಶ್ರೀ ಮಹಾಲಕ್ಷ್ಮೀ ಜಾತ್ರೆಗೆ ಚಾಲನೆ
Team Udayavani, Apr 21, 2019, 12:27 PM IST
ಮುಂಬಯಿ: ಡಹಾಣೂವಿನ ಪ್ರಸಿದ್ಧ ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿ ವಾರ್ಷಿಕ ಜಾತ್ರೋತ್ಸವವು ಎ. 19ರಂದು ಪ್ರಾರಂಭಗೊಂಡಿದೆ. ಮುಂಬಯಿ- ಅಹಮದಾಬಾದ್ ಹೈವೇ ಪಕ್ಕದ ಚಾರೋಟಿ ನಾಕಾದ ಸಮೀಪದಲ್ಲಿರುವ ಈ ಮಂದಿರದಲ್ಲಿ ಚೈತ್ರ ಪೂರ್ಣಿಮೆಯ ಹನುಮಾನ್ ಜಯಂತಿಯಂದು ಉತ್ಸವವು ಆರಂಭ ಗೊಂಡು ಹದಿನೈದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ.
ಸ್ಥಳೀಯ ಆದಿವಾಸಿಗಳ ಕುಲದೇವರೆಂದೇ ಪ್ರಸಿದ್ಧಿಯಲ್ಲಿರುವ ಆಯಿ ಮಾತಾ ದೇವಿಯ ಈ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆದಿವಾಸಿಗಳು ಹಾಗೂ ಪಕ್ಕದ ಹಳ್ಳಿಗಳಿಂದ ಜನರು ಆಗಮಿಸಿ ಉತ್ಸವದಲ್ಲಿ ದೊರೆಯುವ ವಿಶೇಷ ಹುಳಿ, ಒಣಗಿದ ಹಣ್ಣು, ಪಾತ್ರೆಗಳು ಹಾಗೂ ಒಣಮೀನು ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಮುಗಿಬೀಳುತ್ತಾರೆ.
ಸಾಮಾನ್ಯವಾಗಿ ಜಾತ್ರೆಯೊಂದರಲ್ಲಿರುವ ವೈವಿಧ್ಯಮಯ ಸ್ಟಾಲ್ಗಳು, ಮನೋರಂಜನಾ ಮಳಿಗೆಗಳು ಇಲ್ಲಿ ಕಾಣ ಸಿಗುತ್ತವೆ. ನಗರದ ದೂರದ ಪ್ರದೇಶಗಳಿಂದ ಭಕ್ತಾದಿಗಳು, ಮಕ್ಕಳು ಕಾಲ್ನಡಿಗೆಯಲ್ಲೇ ಮಂದಿರಕ್ಕೆ ಅಗಮಿಸುವ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮಂದಿರದ ಆವರಣದಲ್ಲಿ ಭಕ್ತಾದಿಗಳಿಗೆ ಅಗತ್ಯವಿರುವ ವಿದ್ಯುತ್, ನೀರು ಹಾಗೂ ಸುರಕ್ಷಾ ಕ್ರಮಗಳನ್ನು ಒದಗಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಡಹಾಣೂ ತಾಲೂಕು ಪ್ರಾಂತಾಧಿಕಾರಿ ಸೌರಭ್ ಕಟಿಮಾರ್ ಹಾಗೂ ಡಹಾಣೂವಿನ ತಹಶೀಲ್ದಾರ್ ರಾಹುಲ್ ಸಾರಂಗ್ ಅವರು ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಹಾಗೂ ಮಂದಿರದ ಟ್ರಸ್ಟ್ ವತಿಯಿಂದ ಯಾತ್ರಾರ್ಥಿಗಳಿಗೆ ಮೂರು ರೋಲಿಂಗ್ ಶೆಡ್, ದರ್ಶನಾ ಕಾಂಕ್ಷಿಗಳ ಸುವ್ಯವಸ್ಥೆಗೋಸ್ಕರ 60 ಸುರಕ್ಷಾ ರಕ್ಷಕರು, 20 ಸ್ವಯಂ ಸೇವಕರು ಹಾಗೂ 15 ಸ್ವತ್ಛತಾ ಕರ್ಮಚಾರಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಭದ್ರತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ