ದುಬೈ ಅಲ್‌ ನಾಸರ್‌ನಲ್ಲಿ “ವಿಶ್ವ  ತುಳು ಸಮ್ಮೇಳನಕ್ಕೆ ಚಾಲನೆ


Team Udayavani, Nov 24, 2018, 5:10 PM IST

2311mum16.jpg

ದುಬೈ: ದೈವ-ದೇವರುಗಳೆಲ್ಲವೂ ನಮ್ಮ ತುಳುನಾಡಿನಲ್ಲೇ ನೆಲೆಯಾಗಿವೆ. ಆದ್ದರಿಂದ ತುಳುವರು ಸಂಪ್ರದಾಯಸ್ಥರಾಗಿ ಬದುಕು ಕಂಡು ಕೊಂಡವರಾಗಿದ್ದಾರೆ. ತುಳುನಾಡ ಹಿರಿಮೆ, ಗರಿಮೆ ಏನೆಂದು ತಿಳಿಯಬೇಕಾದರೆ ಹೊರನಾಡಿನಲ್ಲಿ ತಿಳಿಯಬೇಕು. ದುಬಾೖ ಅಂದರೆ ಬಂಗಾರದ ನಾಡು. ರಾಜ ಕುಟುಂಬಸ್ಥರು ಆಳಿದ ಈ ನಾಡಿಗೆ ತುಳುವರು ಬಂದು ಸಾಧಕರೆಣಿಸುತ್ತಿರುವುದು ತುಳುಮಾತೆಯ ಅನುಗ್ರಹವೇ ಸರಿ. ಇದು ಸ್ವರ್ಣಮಯ ದೇಶ ಎಂದೇ ಪ್ರಸಿದ್ಧಿ ಪಡೆದಿದ್ದು ಇಲ್ಲಿ ತುಳುನಾಡ ಸಂಸ್ಕೃತಿ, ಭಾಷೆ ಮೇಳೈಸುತ್ತಿರುವುದು ತುಳುನಾಡ ವೈಶಿಷ್ಟÂವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮಭೂಷಣ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನುಡಿದರು.

ಸಾಗರೋತ್ತರ ತುಳುವರ ಕೂಟವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖೀಲಭಾರತ ತುಳು ಒಕ್ಕೂಟದ ಸಹಯೋಗದೊಂದಿಗೆ ಅರಬ್‌ ಸಂಯುಕ್ತ ಸಂಸ್ಥಾನದ ದುಬಾೖಯ ಅಲ್‌ ನಾಸರ್‌ನ  ಲೀಸರ್‌ ಲ್ಯಾಂಡ್‌ ಐಸ್‌ ರಿಂಕ್‌ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವಿಶ್ವದ ತುಳುವರ ದ್ವಿದಿನಗಳ “ವಿಶ್ವ ತುಳು ಸಮ್ಮೇಳನ ದುಬಾೖ- 2018’ನ್ನು ಶುಕ್ರವಾರ ಅಪರಾಹ್ನ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಅವರು, ಬ್ರಹ್ಮಾಂಡದೊಳಗೆ ಅರಸಿ ಬಾಳಲು ತುಳುನಾಡೇ ವಾಸಿ ಎಂದು ಹೇಳಿದರೆ ಈ ಹೊರನಾಡ ತುಳು ಸಮ್ಮೇಳನದ ಉದ್ದೇಶ ಪರಿಪೂರ್ಣವಾಗುತ್ತದೆ. ತುಳುವರು ಮತ್ತಷ್ಟು ಸ್ವಾಭಿಮಾನಿಗಳಾಗಿ ಸಾಧನೆಗಳ ಮೂಲಕ ಮುನ್ನಡೆಯಬೇಕು ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದುಬಾೖಯ ಟಾಲರೆನ್ಸ್‌ ಮಿನಿಸ್ಟರ್‌  ಶೇಖ್‌ ಮಬರಕ್‌ ಆಲ್‌ ನಹ್ಯನ್‌ ಉಪಸ್ಥಿತರಿದ್ದು ಮಾತನಾಡಿ,  ಸಹನೆ- ಸಹಬಾಳ್ವೆಗೆ ತುಳುವರು ಮಾದರಿ. ತುಳುವರು ಎಲ್ಲಿದ್ದರೂ ಸಾಂಘಿಕವಾಗಿ ಜೀವನ ರೂಪಿಸಿ ಅನ್ಯರನ್ನು ಒಗ್ಗೂಡಿಸುವ ಸದ್ಗುಣರು. ಕಾಯಕ ನಿಮಿತ್ತ ದುಬಾೖಯಲ್ಲಿ ನೆಲೆಯಾದರೂ ತಮ್ಮ ಕೆಲಸ, ಸಾಧನೆಗಳಿಂದ ಸ್ವಂತಿಕೆಯ ಪ್ರತಿಷ್ಠೆಯನ್ನು ರೂಪಿಸಿದ ಕೀರ್ತಿ ತುಳುವರದ್ದು. ಭಾರತ ಮತ್ತು ಯುಎಇ ಸಂಬಂಧ ಅನ್ಯೋನ್ಯತೆಯಿಂದ ಮುಂದುವರಿದ ಕಾರಣ ಇಂತಹ ತುಳು ಸಮ್ಮೇಳನಕ್ಕೆ ಸಂಧಿಯಾಯಿತು ಎಂದು ಮಧ್ಯೆಮಧ್ಯೆ ತುಳುವಿನಲ್ಲೇ ಮಾತನಾಡಿ ತುಳುವರನ್ನು ಹುರಿದುಂಬಿಸಿದರು.

ತುಳು ಸಮ್ಮೇಳನದ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಅವರ ಸಾರಥ್ಯದಲ್ಲಿ,  ಎನ್‌ಎಂಸಿ ಸಮೂಹ ಸಂಸ್ಥೆಯ ಸ್ಥಾಪಕ ಮತ್ತು ಕಾರ್ಯಾಧ್ಯಕ್ಷ ಡಾ| ಬಿ. ಆರ್‌. ಶೆಟ್ಟಿ ಘನಾಧ್ಯಕ್ಷತೆಯಲ್ಲಿ ಆರಂಭಗೊಂಡ ವಿಶ್ವ ತುಳು ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿ ಅಭ್ಯಾಗತರುಗಳಾಗಿ ರೋಮನ್‌ ಕ್ಯಾಥೋಲಿಕ್‌ ಮಂಗಳೂರು ಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ಅ| ವಂ| ಡಾ| ಪೀಟರ್‌ ಪಾವ್‌É ಸಲ್ದಾನ್ಹಾ, ಸಿಎಸ್‌ಐ ಪ್ರೊಟೆಸ್ಟೆಂಟ್‌ ಮಂಗಳೂರು ಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ವಂ| ಎಬಿನೆಜರ್‌ ಜತ್ತನ್ನ, ರೋಮನ್‌ ಕ್ಯಾಥೋಲಿಕ್‌ ಬಳ್ಳಾರಿ ಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್‌ ಅ| ವಂ| ಡಾ| ಹೆನ್ರಿ ಡಿಸೋಜಾ, ಮುಸ್ಲಿಂ ಧರ್ಮಶಾಸ್ತ್ರಜ್ಞ ಅಬ್ದುಸ್ಸಲಾಂ ಪುತ್ತಿಗೆ, ಕರ್ನಾಟಕದ ನಗರಾಭಿವೃದ್ಧಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಿ ಸಚಿವ ಯು. ಟಿ. ಖಾದರ್‌, ಕರ್ನಾಟಕದ ಮಹಿಳಾ-ಮಕ್ಕಳ ಕಲ್ಯಾಣ, ಕನ್ನಡ-ಸಂಸ್ಕೃತಿ ಖಾತೆ,  ಉಡುಪಿ ಜಿಲ್ಲಾ ಉಸ್ತುವರಿ ಸಚಿವೆ ಡಾ| ಜಯಮಾಲ ಹಾಗೂ ಗೌರವ ಅತಿಥಿಗಳಾಗಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ, ಆಳ್ವಾಸ್‌ ಎಜುಕೇಶನ್‌ ಟ್ರಸ್ಟ್‌  ಮೂಡಬಿದ್ರೆ ಇದರ ಕಾರ್ಯಾಧ್ಯಕ್ಷ ಡಾ| ಎಂ. ಮೋಹನ್‌ ಆಳ್ವ, ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್‌ ಕೋಟ್ಯಾನ್‌, ಅನಿವಾಸಿ ಭಾರತೀಯ ಉದ್ಯಮಿಗಳಾದ  ರೋನಾಲ್ಡ್‌ ಕೊಲಾಸೋ ಮತ್ತು ಸುಜಾತ್‌ ಶೆಟ್ಟಿ, ಬಸವ ಸಮಿತಿಯ ಅಧ್ಯಕ್ಷ ಬಸವ ಜತ್ತಿ, ಚಂದ್ರಕಲಾ ಬಿ. ಆರ್‌ ಶೆಟ್ಟಿ, ಸಂಗೀತ ನಿರ್ದೇಶಕ ಗುರು ಕಿರಣ್‌ ಹಾಗೂ ಕರ್ನಾಟಕರ ರಾಜ್ಯ ತುಳು ಅಕಾಡಮಿ ಅಧ್ಯಕ್ಷ ಎ. ಸಿ. ಭಂಡಾರಿ, ಅಖೀಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಧರ್ಮಪಾಲ್‌ ಯು. ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಶ್‌ವನ್‌ ಸಭಾಗೃಹದ ಮುಂಭಾಗ ಧ್ವಜಾರೋಹಣಗೈದು ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು. ರಾಣಿ ಅಬ್ಬಕ್ಕ, ಅಬ್ಬಗ ದಾರಗ, ಕೋಟಿ-ಚನ್ನಯ, ರೆವರೆಂಡ್‌ ಕಿಟ್ಟಲ್‌, ಅಗೋಲಿ ಮಂಜಣ್ಣ, ಡಾ| ಕಯ್ನಾರ ಕಿಂಜಣ್ಣ ರೈ ಅವರನ್ನು ಸ್ಮರಿಸಲಾಯಿತು. ತುಳು ಸಮ್ಮೇಳನದ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಸ್ವಾಗತಿಸಿ ಪ್ರಸ್ತಾವನೆಗೈದರು. ಭಾಸ್ಕರ್‌  ರೈ ಕುಕ್ಕುವಳ್ಳಿ ಮತ್ತು ಪ್ರಿಯಾ ಹರೀಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ| ಬಿ. ಆರ್‌. ಶೆಟ್ಟಿ ಅತಿಥಿಗಳನ್ನು ಗೌರವಿಸಿದರರು. ಗಳಿಗೆ ಪುಷ ಗುತ್ಛ, ಸಾಗರೋತ್ತರ ಕೊಲ್ಲಿ ರಾಷ್ಟ್ರದ ತುಳುವರ ಒಕ್ಕೂಟ ದುಬಾೖ ಮುಖ್ಯಸ್ಥ ಶೋಧನ್‌ ಪ್ರಸಾದ್‌ ವಂದಿಸಿದರು.

ಸಂಸ್ಥೆಯ  ಗೌ| ಪ್ರ| ಕಾರ್ಯದರ್ಶಿ ನಿಟ್ಟೆ ಶಶಿಧರ್‌ ಶೆಟ್ಟಿ, ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ, ಕೆನರಾ ಪಿಂಟೋ ಟ್ರಾವೆಲ್ಸ್‌ ಮಾಲೀಕ ಹಾಗೂ ಆಲ್‌ ಇಂಡಿಯಾ ಟ್ರಾನ್ಸ್‌ಪೊàರ್ಟ್‌ ಕಾಂಗ್ರೆಸ್‌ನ ಕರ್ನಾಟಕ ರಾಜ್ಯಧ್ಯಕ್ಷ ಸುನೀಲ್‌ ಪಾಯ್ಸ ಪುತ್ತೂರು, ಹೆಸರಾಂತ ವಾಸ್ತುತಜ್ಞ, ಪುರೋಹಿತ ಡಾ| ಎಂ. ಜೆ. ಪ್ರವೀಣ್‌ ಭಟ್‌ ಸಯಾನ್‌, ತೋನ್ಸೆ ವಿಜಯಕುಮಾರ್‌ ಶೆಟ್ಟಿ, ದುಬಾೖಯ ಉದ್ಯಮಿ ಪ್ರವೀಣ್‌ ಶೆಟ್ಟಿ ವಕ್ವಾಡಿ, ಸುಧೀರ್‌ಕುಮಾರ್‌ ಶೆಟ್ಟಿ, ಶೀಲಾ ಸುಧೀರ್‌ ಕುಮಾರ್‌, ಚಂದ್ರಶೇಖರ್‌ ಆರ್‌. ಬೆಲ್ಚಡ, ಕರ್ನೂರು ಮೋಹನ್‌ ರೈ, ನಾರಾಯಣ ಕಾಪು, ಅಜೆಕಾರು ಬಾಲಕೃಷ್ಣ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ತುಳು ಸಂಘ ಬರೋಡಾ, ತುಳುಕೂಟ ಅಂಕಲೇಶ್ವರ, ವಿಶ್ವ ತುಳುವೆರೆ ಆಯೋನದಿಂದ ನೂರಾರು ತುಳುವರು ಆಗಮಿಸಿದ್ದರು.   

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಗಲ್ಫ್ ರಾಷ್ಟ್ರದ ಸುಮಾರು ಆರು ತಂಡಗಳು ಸಮೂಹ ಜಾನಪದ ನೃತ್ಯಾವಳಿಗಳನ್ನು ಪ್ರಸ್ತುತ ಪಡಿಸಿದರು. ಚಕ್ರಪಾಣಿ ನೃತ್ಯ ಕೇಂದ್ರವು ಸುರೇಶ್‌ ಅತ್ತಾವರ ಮಂಗಳೂರು ಸಾರಥ್ಯದಲ್ಲಿ “ತುಳುನಾಡ ಪಬೊìಲು’ ನೃತ್ಯ ರೂಪಕ, ಯಕ್ಷ ಮಿತ್ರರು ದುಬಾೖ ಮಂಡಳಿಯಿಂದ  “ಜಾಂಬವತಿ ಕಲ್ಯಾಣ’ತುಳು ಯಕ್ಷಗಾನ ಪ್ರದರ್ಶನಗೊಂಡಿತು.  ದುಬಾೖಯ ಹವ್ಯಾಸಿ ಕಲಾವಿದರ ಕೂಡುವಿಕೆಯಲ್ಲಿ ಗಿರೀಶ್‌ ನಾರಾಯಣ್‌ ನಿರ್ದೇಶನದಲ್ಲಿ “ಪಿಲಿನಲಿಕೆ’, ಪ್ರಸನ್ನ ಕಾಪು ಬಳಗದ ಬಲೇ ತೆಲಿಪಾಲೆ ತಂಡ ಮತ್ತು ಉಮೇಶ್‌ ಮಿಜಾರು ತಂಡದಿಂದ ಹಾಸ್ಯ ಪ್ರಹಸನ, ಸತೀಶ್‌ ಶೆಟ್ಟಿ ಪಟ್ಲ ಮತ್ತು ತಂಡವು  “ಯಕ್ಷಗಾನ ನಾಟ್ಯ  ವೈಭವ’, ಮತ್ತು “ಯಕ್ಷಗಾನ ಹಾಸ್ಯ ವೈಭವ’ವನ್ನು ಪ್ರಸ್ತುತಪಡಿಸಿದರು. ಪ್ರಮೋದ್‌ ಕುಮಾರ್‌ ಬಳಗದ ವೆರಾಸಟೈಲ್ಸ್‌ ದುಬಾ  ತಂಡವು ರಸ ಮಂಜರಿಯನ್ನು ನಡೆಸಿಕೊಟ್ಟಿತು. ಕದ್ರಿ ನವನೀತ್‌ ಶೆಟ್ಟಿ  ಮತ್ತು ಸಾಹಿಲ್‌ ರೈ  ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು.

ತುಳುವ ಸಂಪ್ರದಾಯದಂತೆ  ಸ್ವಾಗತ
ಪಾಲ್ಗೊಂಡ ತುಳುವರನ್ನು ತುಳುವ ಸಂಪ್ರದಾಯದಂತೆಯೇ ಸ್ವಾಗತಿಸಲಾಯಿತು. ಕೃಷಿಕ  ಸಂಪ್ರದಾಯಸ್ಥ ತುಳುನಾಡ ಜನತೆಯ ತಿಂಡಿ-ತಿನಿಸುಗಳೂ, ಬಂದಂತಹ ಗಣ್ಯರಿಗೆ ಮಹಿಳೆಯಯರು ಪಾರಂಪರಿಕ ರುಚಿಕರ ಬಿಸಿಬಿಸಿಯಾದ ಫಲಾಹಾರ, ಊಟ ಉಣಬಡಿಸಿದರು. ದೇವೇಶ್‌ ಆಳ್ವ ದುಬಾೖ  ಇವರ ಉಸ್ತುವರಿಯಲ್ಲಿ ತುಳುನಾಡ ಶೈಲಿಯ ತುಳುನಾಡ ತಿಂಡಿ ತಿನಸುಗಳು ಗಮನ ಸೆಳೆಯಿತು. ಜುಬೇರ್‌ ಖಾನ್‌ ಮಂಗಳೂರು ಮತ್ತು ಬಳಗದವರು ತುಳುನಾಡ ಪರಂಪರೆಯ ವಸ್ತುಪ್ರದರ್ಶನ ಆಯೋಜಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. ನಿರೀಕ್ಷೆಗೂ ಮೀರಿ ತುಳುವರು ಪಾಲ್ಗೊಂಡಿರುವುದ ವಿಶೇಷತೆಯಾಗಿತ್ತು. 

ಚಿತ್ರ-ವರದಿ:ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.