ದೇವಿ ಪ್ರಾರ್ಥನೆಯಿಂದ ಸಮೃದ್ಧಿ: ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿ


Team Udayavani, Oct 9, 2022, 11:15 AM IST

TDY-1ದೇವಿ ಪ್ರಾರ್ಥನೆಯಿಂದ ಸಮೃದ್ಧಿ: ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿ

ಬೊರಿವಲಿ: ಬೊರಿವಲಿ ಜೈರಾಜ್‌ ನಗರದ ಶ್ರೀ ಮಹಿಷಮರ್ದಿನಿ ದೇಗುಲದಲ್ಲಿ ಶರವನ್ನವರಾತ್ರಿಯ 8ನೇ ದಿನವಾದ ಅ. 3 ರಂದು ದುರ್ಗಾಷ್ಟಮಿ ಪ್ರಯುಕ್ತ ಸಾರ್ವ ಜನಿಕ ಚಂಡಿಕಾಯಾಗ ಅಸಂಖ್ಯಾಕ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರಗಿತು.

ಬೆಳಗ್ಗೆ ಬ್ರಹ್ಮಶ್ರೀ ಕೊಯ್ಯೂರು ನಂದಕು ಮಾರ ತಂತ್ರಿಯವರ ಮಾರ್ಗದರ್ಶನದಲ್ಲಿ ದೇವಿ ಶ್ಲೋಕ ಮಂತ್ರೋತ್ಪಟನೆ, ಮಂಡಲ ಮಟ್ಟದಲ್ಲಿ ಶ್ಲೋಕ, ದ್ರವ್ಯಾಧಿಗಳನ್ನು ಯಾಗ ಕುಂಡದಲ್ಲಿ ಅರ್ಪಿಸಿ ಪ್ರಸನ್ನ ಕಾಲದಲ್ಲಿ ಚಂಡಿಕಾಯಾಗವು ಪ್ರಾರಂಭಗೊಂಡಿತು. ಕೊನೆಯಲ್ಲಿ ಯಾಗ ಕುಂಡದಲ್ಲಿ ಭಕ್ತರು ನೀಡಿದ ಕಲ್ಪತರು ಕಾಯಿ, ವಸ್ತ್ರ, ದ್ರವ್ಯ ಅರ್ಪಿಸಿ ವಿವಿಧ ಪೂಜಾ ವಿಧಿ-ವಿಧಾನಗಳು ಪೂರೈಸಿ ಮಂಗಳಾರತಿ ಜರಗಿತು. ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿ ಆಶೀರ್ವಚನ ನೀಡಿ, ಬ್ರಹ್ಮನಿಂದ ಅಮರ ವರ ಪಡೆದ ರಾಕ್ಷಸರು ದೇವತೆಗಳಿಗೆ ಹಿಂಸೆ ನೀಡುತ್ತಿದ್ದ ಸಮಯದಲ್ಲಿ ದುಷ್ಟರ ನಾಶಕ್ಕಾಗಿ ಸಹಕಾರ ಮೂರ್ತಿಯಾಗಿ ಜನ್ಮತಾಳಿದ ಶ್ರೀದೇವಿಯನ್ನು ಮಾರ್ಕಂಡೇಯ ಪುರಾಣ, ಉಪಾಸನೆಯಿಂದ ಶುದ್ಧ ಮನಸ್ಸಿನಿಂದ ಶ್ಲೋಕ, ಭಕ್ತಿಯಿಂದ ಪ್ರಾರ್ಥಿಸುವ ಮೂಲಕ ಸರ್ವರಿಗೂ ಸಮೃದ್ಧಿ ದೊರೆಯಲಿ, ಪೂರ್ಣಾವತಿಯ ಪ್ರಸನ್ನ ಕಾಲದಲ್ಲಿ ನಾವು ಪ್ರಾರ್ಥಿಸುವ ಮೂಲಕ ಎಲ್ಲರಿಗೂ ಸುಖ, ಶಾಂತಿ, ಸಂತಾನ ಪ್ರಾಪ್ತಿ ದೊರೆಯಲಿ ಎಂದು ಶುಭ ಹಾರೈಸಿದರು.

ದೇಗುಲದ ಆಡಳಿತ ಮೊಕ್ತೇಸರ ಕಣಂ ಜಾರು ಕೊಳಕೆಬೈಲು ಪ್ರದೀಪ್‌ ಸಿ. ಶೆಟ್ಟಿ ಮಾತ ನಾಡಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಹಿಷಮರ್ದಿನಿ ದೇವಿಗೆ ವಿಶೇಷ ಪೂಜೆ ಮಂಗಳಾರತಿ ಜರಗಿತು. ಈ ಸಂದರ್ಭ ದೇವಸ್ಥಾನದಲ್ಲಿ ಸ್ಥಾಪಿಸಲ್ಪಟ್ಟ ಶ್ರೀ ಗಣಪತಿ ವೀರಾಂಜನೇಯ ರಕ್ತೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸ್ಥಾಪಿಸಲ್ಪಟ್ಟ ಶ್ರೀ ನಾಗದೇವರಿಗೆ ಮತ್ತು ಶ್ರೀ ಕೊಡಮಣಿತ್ತಾಯ ದೈವ ದೇವರಿಗೂ ವಿಶೇಷ ದೈನಂದಿನ ಪೂಜೆಗಳು ನೇರವೇರಿದವು.

ದೇವಸ್ಥಾನದ ಆಡಳಿತ ವಂಶಸ್ಥರಾದ ಶ್ರೀಮತಿ ಮತ್ತು ಶ್ರೀ ಜಯರಾಜ ಶ್ರೀಧರ್‌ ಶೆಟ್ಟಿ, ಶಾಲಿನಿ ಪ್ರದೀಪ್‌ ಶೆಟ್ಟಿ, ಮೊಕ್ತೇಸರರಾದ ಜಯಪಾಲಿ ಅಶೋಕ್‌ ಶೆಟ್ಟಿ, ಅರ್ಚಕ ವೃಂದ, ಬೆಳ್ಮಣ್‌ ವೆಂಕಟರಮಣ ತಂತ್ರಿ ಮತ್ತು ದಂಪತಿ, ದೇಗುಲದ ಆಡಳಿತ ಮಂಡಳಿ, ಮಹಿಷ ಮರ್ದಿನಿ ಭಜನ ಮಂಡಳಿ, ಜಯಂತ್‌ ಶೆಟ್ಟಿ, ಅಮೃತಾ ಶೆಟ್ಟಿ, ಬಾಲಕೃಷ್ಣ ರೈ, ರಜನಿ ರೈ, ಭಾಸ್ಕರ್‌ ಶೆಟ್ಟಿ, ಚಂದ್ರಶೇಖರ್‌ ಶೆಟ್ಟಿ, ಪ್ರೇಮನಾಥ್‌ ಶೆಟ್ಟಿ, ಸದಾನಂದ ಶೆಟ್ಟಿ, ದಿವಾಕರ ಮ್ಹಾತ್ರೆ, ಗುರುದೇವ ಸೇವಾ ಬಳಗ ಮಹಾರಾಷ್ಟ್ರದ ಗೌರವ ಕಾರ್ಯದರ್ಶಿ ಪ್ರಕಾಶ್‌ ಶೆಟ್ಟಿ ಪೇಟೆಮನೆ, ಮಾತೃಭೂಮಿ ಕೋ – ಆಪರೇಟಿವ್‌ ಸೊಸೈಟಿಯ ಕಾರ್ಯಾಧ್ಯಕ್ಷ ಉಳೂ¤ ರು ಮೋಹನ್‌ದಾಸ್‌ ಶೆಟ್ಟಿ, ಸ್ಥಳೀಯ ಸಂಸದ ಗೋಪಾಲ್‌ ಸಿ. ಶೆಟ್ಟಿ ಇನ್ನಿತರ ಹಲವಾರು ಸ್ಥಳೀಯ ಧಾರ್ಮಿಕ ಮುಖಂಡರು, ಸ್ಥಳೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಹೊರ ವಲಯದ ಭಕ್ತರು ಶ್ರೀ ದೇವಿಯ ಚಂಡಿಕಾ ಯಾಗದ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ಕಳೆದ ಎರಡು ವರ್ಷಗಳ ಕಠಿನ ಪರಿಸ್ಥಿತಿಯಲ್ಲಿ ಭಕ್ತರ ಸಂಖ್ಯೆ ವಿರಳವಾಗಿ ಕಂಡುಬಂದರೂ ಪ್ರಸಕ್ತ ವರ್ಷದಲ್ಲಿ ಈ ಆಧ್ಯಾತ್ಮಿಕ ನೆಲೆಯಲ್ಲಿ ವಿವಿಧ ಪ್ರಾಂತೀಯ ಭಕ್ತರ ಸಂಖ್ಯೆ ವೃದ್ಧಿಯಾಗಿದೆ. ಇಂದು ದೇವಿಯ ದರ್ಶನಕ್ಕಾಗಿ ಅಪಾರ ಭಕ್ತರು ಆಗಮಿಸಿದ್ದಾರೆ. ಇದೆಲ್ಲ ದೇವಿಯ ಪವಾಡ. ಪ್ರತೀದಿನ ಭಕ್ತರಿಗೆ ದೇವಸ್ಥಾನದ ವತಿಯಿಂದ ಮಧ್ಯಾಹ್ನ ಮತ್ತು ರಾತ್ರಿ ವಿಶೇಷ ಅನ್ನಸಂತರ್ಪಣೆ, ಸತತ ವಿಧಿವತ್ತಾದ ಪೂಜೆ, ಅನುಷ್ಠಾನಗಳು, ಭಕ್ತರ ಸಂದರ್ಶನ ಇನ್ನಿತರ ಪುಣ್ಯ ಕಾರ್ಯಗಳು ನೆರವೇರಿವೆ. ಶ್ರೀದೇವಿಯು ಎಲ್ಲರ ಕಷ್ಟ ಕಾರ್ಪಣ್ಯಗಳನ್ನು ದೂರಗೊಳಿಸಿ ಆಯುರಾರೋಗ್ಯ ಭಾಗ್ಯ ಕರುಣಿಸಲಿ. -ಕಣಂಜಾರು ಕೊಳಕೆಬೈಲು ಪ್ರದೀಪ್‌ ಸಿ. ಶೆಟ್ಟಿ, ಆಡಳಿತ ಮೊಕ್ತೇಸರರು, ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೊರಿವಲಿ

ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.