ಪ್ರತಿಯೊಂದು ಹಬ್ಬದಲ್ಲೂ ತುಳುನಾಡಿನ ಸಾರವಿದೆ: ಮಹೇಶ್‌ ಎಸ್‌. ಶೆಟ್ಟಿ


Team Udayavani, Apr 18, 2021, 11:49 AM IST

Each festival has its own essence

ಮುಂಬಯಿ: ಯುಗಾದಿ ಹಬ್ಬ ವನ್ನು ಬಂಟರ ಸಂಘದಲ್ಲಿ ಪ್ರತೀವರ್ಷ ಬಹಳ ಅದ್ದೂರಿಯಿಂದ, ಉತ್ಸಾಹದೊಂದಿಗೆ ಸಂಪ್ರದಾಯ ಬದ್ಧವಾಗಿ ಆಚರಿಸಿಕೊಂಡು ಬಂದಿದ್ದೇವೆ. ಇದೀಗ ಕೊರೊನಾ ಹಿನ್ನೆಲೆ ಕಳೆದೆರಡು ವರ್ಷಗಳಿಂದ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ. ಆದರೂ ಕನ್ನಡ ವೆಲ್ಫೆàರ್‌ ಸೊಸೈಟಿಯ ಎಲ್ಲ ಸದಸ್ಯರು ಸೇರಿ ಹಬ್ಬವನ್ನು ಕೊರೊನಾ ಮಧ್ಯೆಯೂ ಅರ್ಥಪೂರ್ಣವಾಗಿ ಆಚರಿಸಿಕೊಂಡಿರುವುದು ನಿಜವಾಗಿಯೂ ಅಭಿಮಾನದ ಸಂಗತಿ. ಯುಗಾದಿ ಸಹಿತ ನಮ್ಮ ತವರೂರಿನ ಎಲ್ಲ ಹಬ್ಬ ಹರಿದಿನಗಳು ಹಬ್ಬಕ್ಕೆ ಮಾತ್ರ ಸೀಮಿತವಾಗಿಲ್ಲ. ಪ್ರತಿಯೊಂದು ಹಬ್ಬದಲ್ಲೂ ಅದರದ್ದೇ ಆದ ಒಂದು ವಿಶಿಷ್ಟತೆ ಇರುತ್ತದೆ. ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರಗಳು ಅಲ್ಲಿ ಅಡಕವಾಗಿರುತ್ತವೆ. ಈ ಎಲ್ಲ ಆಚಾರ, ವಿಚಾರಗಳನ್ನು ನಮ್ಮ ಮಕ್ಕಳಿಗೆ ತಿಳಿಯಪಡಿಸುವ ಅಗತ್ಯವಿದೆ ಎಂದು ಬಾಬಾ ಗ್ರೂಪ್ಸ್‌ನ ಆಡಳಿತ ನಿರ್ದೇಶಕ ಮಹೇಶ್‌ ಎಸ್‌. ಶೆಟ್ಟಿ ತಿಳಿಸಿದರು.

ಎ. 14ರಂದು ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ವತಿಯಿಂದ ಘಾಟ್‌ಕೋಪರ್‌ ಪೂರ್ವದಲ್ಲಿರುವ ಸಂಘದ ಮಹೇಶ್‌ ಶೆಟ್ಟಿ ಅಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ಯುಗಾದಿ ಹಬ್ಬದ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಕಳೆದ ಹಲವಾರು ವರ್ಷಗಳಿಂದ ಕಲೆ, ಸಂಸ್ಕೃತಿ, ನಾಡಿನ ಸಂಪ್ರದಾಯ, ಆಚಾರ, ವಿಚಾರಗಳನ್ನು ಉಳಿಸಿ- ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಶುಭ ಹಾರೈಸಿದರು.

ಅತಿಥಿಯಾಗಿ ಆಗಮಿಸಿದ ಜಯಲಕ್ಷ್ಮೀ ಶೆಟ್ಟಿ ಮಾತನಾಡಿ, ನಾವು ಚಿಕ್ಕವರಿದ್ದಾಗ ಊರಿನಲ್ಲಿ ಯುಗಾದಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿ ದ್ದೆವು. ಇದೀಗ ಬಹಳ ವರ್ಷಗಳ ಬಳಿಕ ಕನ್ನಡ ವೆಲ್ಫೆàರ್‌ ಸೊಸೈಟಿಯಲ್ಲಿ ಯುಗಾದಿಯನ್ನು ಆಚರಿಸುತ್ತಿರುವುದನ್ನು ಕಂಡು ಸಂತೋಷವಾಗುತ್ತಿದೆ. ಇಂದಿನ ಕಾರ್ಯಕ್ರಮವು ತವರೂರಿನ ನೆನಪನ್ನು ಮತ್ತೆ ಮರುಕಳಿಸುವಂತೆ ಮಾಡಿದೆ. ಕಾರ್ಯ ಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿದ ಎಲ್ಲರಿಗೂ ಅಭಾರಿಯಾಗಿದ್ದೇನೆ ಎಂದು ಕೋವಿಡ್‌ ಭಯದಿಂದ ಶೀಘ್ರ ಮುಕ್ತ ರಾಗೋಣ ಎಂದು ಶುಭ ಹಾರೈಸಿದರು.

ಸಂಘದ ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ನಂದಳಿಕೆ ಅವರು ಯುಗಾದಿ ಹಬ್ಬದ ವಿಶೇಷತೆ, ಊರಿನಲ್ಲಿ ಹಿರಿಯರು ಆಚರಿಸುತ್ತಿದ್ದ ಪರಿ, ಹಬ್ಬದ ಮಹತ್ವ, ಉದ್ದೇಶಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ ಮಾತನಾಡಿ, ಯುಗಾದಿ ಹಬ್ಬವು ವಸಂತ ಋತುವಿನಲ್ಲಿ ಬರುವ ಬಹಳ ವಿಶೇಷ ಹಬ್ಬವಾಗಿದೆ. ಮನಸ್ಸಿಗೆ ಬಹಳಷ್ಟು ಮುದ ನೀಡುವ ಹಬ್ಬ ಇದಾಗಿದೆ. ಈ ಸಂದರ್ಭದಲ್ಲಿ ಮರಗಿಡಗಳು ಹೂ ಬಿಟ್ಟು, ಹಚ್ಚಹಸುರಾಗಿ ಕಂಗೊಳಿಸುವುದನ್ನು ನೋಡುವುದೇ ಸಂಭ್ರಮ. ನಮ್ಮ ಹಿರಿಯರು ಬಹಳ ಸಂಪ್ರ ದಾಯಬದ್ಧವಾಗಿ ಯುಗಾದಿ ಹಬ್ಬವನ್ನು ಆಚರಿಸುವುದನ್ನು ಕಾಣಬಹುದು. ಬೇವು- ಬೆಲ್ಲವನ್ನು ನೀಡಿ, ನಾವೆಲ್ಲರೂ ಕಷ್ಟ, ಸುಖಗಳನ್ನು ಸಮಾನವಾಗಿ ಹಂಚಿಕೊಳ್ಳುವ ಉತ್ತಮ ಸಂದೇಶ ಈ ಯುಗಾದಿ ಹಬ್ಬದ ಆಚರಣೆಯಲ್ಲಿ ಅಡಗಿದೆ. ಕೊರೊನಾ ಮಹಾಮಾರಿಯ ಕಠಿನ ವಾತಾವರಣದ ಮಧ್ಯೆಯೂ ಈ ನಮ್ಮ ಸಂಘದ ಸದಸ್ಯರೆಲ್ಲರೂ ಸೇರಿ ಯುಗಾದಿ ಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎನ್ನಲು ಸಂತೋಷವಾಗುತ್ತಿದೆ. ಈ ಕಾರ್ಯ ಕ್ರಮವನ್ನು ಆಯೋಜಿಸುವಲ್ಲಿ ಮಹೇಶ್‌ ಶೆಟ್ಟಿ ಅವರ ಸಹಕಾರ ಅವಿಸ್ಮರಣೀಯ. ಇಂತಹ ದಾನಿಗಳ ಪ್ರೋತ್ಸಾಹದಿಂದ ನಮ್ಮ ಸಂಸ್ಥೆಯ ಎಲ್ಲ ಕಾರ್ಯಕ್ರಮಗಳನ್ನು ಉತ್ಸಾಹದಿಂದ ಆಚರಿಸಲು ಸಾಧ್ಯವಾಗುತ್ತಿದೆ. ಅವರ ಸಹಕಾರ ನಿರಂತರವಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಹರಿಣಿ ಎಂ. ಶೆಟ್ಟಿ, ಸುಚಿತಾ ಶೆಟ್ಟಿ, ಸುಜಾಲಾ ಎ. ಶೆಟ್ಟಿ, ಪ್ರಮೀಳಾ ಆರ್‌. ಶೆಟ್ಟಿ, ಶಾಲಿನಿ ಶೆಟ್ಟಿ ಮೊದಲಾದವರು ಯುಗಾದಿ ಹಬ್ಬದ ಮಹತ್ವದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕೋಶಾಧಿಕಾರಿ ತಿಮ್ಮ ದೇವಾಡಿಗ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್‌. ಶೆಟ್ಟಿ, ಕೃಷ್ಣ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಶಂಕರ ಶೆಟ್ಟಿ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ನಂದಳಿಕೆ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.