50 ಅಡಿ ಆಳದ ಕೂಪಕ್ಕೆ ಬಿದ್ದ ಆನೆ ಮರಿಯ ರಕ್ಷಣೆ!
Team Udayavani, Jan 16, 2018, 3:19 PM IST
ಆನೇಕಲ್: ಅರಣ್ಯದಲ್ಲಿದ್ದ 50 ಅಡಿ ಆಳದ ಕೂಪಕ್ಕೆ ಬಿದ್ದು ಪರದಾಡುತ್ತಿದ್ದ ಆನೆ ಮರಿಯನ್ನು ಅರಣ್ಯ ಸಿಬಂದಿಗಳು ಕಾರ್ಯಾಚರಣೆ ನಡೆಸಿ ತಾಯಿಯ ಮಡಿಲು ಸೇರಿಸಿದ ಘಟನೆ ಕರ್ನಾಟಕ -ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪಾವಡಪಟ್ಟಿ ಎಂಬಲ್ಲಿ ನಡೆದಿದೆ.
ಆಹಾರ ಅರಸಿ ನಾಡಿನತ್ತ ಬಂದಿದ್ದ ಕಾಡಾನೆ ಹಿಂಡಿನಲ್ಲಿದ್ದ ಆನೆ ಮರಿ ಆಯ ತಪ್ಪಿ ಕೂಪಕ್ಕೆ ಬಿದ್ದಿದೆ. ಈ ವೇಳೆ ಜೊತೆಯಲ್ಲಿದ್ದ ಆನೆಗಳು ಮುಂದಕ್ಕೆ ಸಾಗಿದ್ದು ಮರಿ ಆನೆ ಮೇಲಕ್ಕೆ ಬರಲು ಸಾಧ್ಯವಾಗದೆ ರೋದಿಸುತ್ತಿತ್ತು.
ಮರಿಯಾನೆಯ ರೋದನ ಗಮನಿಸಿದ ಸಾರ್ವಜನಿಕರು ಮತ್ತು ತಮಿಳುನಾಡು ಅರಣ್ಯ ಇಲಾಖೆ ಸಿಬಂದಿಗಳು ಹಗ್ಗದಿಂದ ನೇಯ್ದ ಬಲೆಯನ್ನು ಬಳಸಿಕೊಂಡು ಕೂಪಕ್ಕೆ ಇಳಿದು ಆನೆ ಮರಿಯನ್ನು ಹರಸಾಹಸ ಪಟ್ಟು ಮೇಲಕ್ಕೆತರುವಲ್ಲಿ ಯಶಸ್ವಿಯಾಗಿದ್ದಾರೆ.ಕಾರ್ಯಾಚರಣೆ ವೇಳೆ ಆನೆ ಮರಿ ಹೆದರ ಬಾರದು ಎಂದು ಕಣ್ಣಿಗೆ ಬಟ್ಟೆಯನ್ನು ಕಟ್ಟಲಾಗಿತ್ತು.
ಸಾನಮಾವು ಅರಣ್ಯ ವ್ಯಾಪ್ತಿಯಲ್ಲಿ ಮರಿಯನ್ನು ತಾಯಿ ಜೊತೆ ಸೇರಿಸಿರುವುದಾಗಿ ಅರಣ್ಯ ಸಿಬಂದಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ