ರೈತರ ಸಾಲಮನ್ನಾ ಯೋಜನೆ 26 ಲಕ್ಷ ಮಂದಿಗೆ ಲಾಭ: ಪಾಟೀಲ್‌


Team Udayavani, Aug 10, 2020, 5:44 PM IST

MUMBAI-TDY-1

ಸಾಂದರ್ಭಿಕ ಚಿತ್ರ

ಮುಂಬಯಿ, ಆ. 9: ರಾಜ್ಯದಲ್ಲಿ ಮಹಾವಿಕಾಸ್‌ ಅಘಾಡಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ 28 ಲಕ್ಷಕ್ಕಿಂತ ಅಧಿಕ ರೈತರನ್ನು ಸಾಲದ ಹೊರೆಯಿಂದ ಮುಕ್ತರನ್ನಾಗಿಸಲು ನಿರ್ಧರಿಸಿದ್ದು, ಇಲ್ಲಿಯ ತನಕ 26 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಲ್ಲಿ 16,000 ಕೋಟಿ ರೂ.ಗಳನ್ನು ಜಮಾ ಮಾಡಲಾಗಿದ್ದು, ಬಾಕಿ ಉಳಿದ 2.82 ಲಕ್ಷ ರೈತರ ಖಾತೆಗಳಿಗೆ 2 ಸಾವಿರ ಕೋಟಿ ರೂ. ಗಳನ್ನು 10 ದಿನಗಳಲ್ಲಿ ಜಮಾ ಮಾಡಲಾಗುವುದು ಎಂದು ಸಹಕಾರಿ ಮತ್ತು ಮಾರುಕಟ್ಟೆ ಖಾತೆ ರಾಜ್ಯ ಸಚಿವ ಬಾಳಾಸಾಹೇಬ್‌ ಪಾಟೀಲ್‌ ತಿಳಿಸಿದ್ದಾರೆ.

ರಾಜ್ಯದಲ್ಲಿಯ ರೈತರ 1.5 ಲಕ್ಷ ರೂ. ಗಳವರೆಗೆ ಸಾಲ ಮನ್ನಾ ಮಾಡಲು ಬಿಜೆಪಿ-ಶಿವಸೇನೆ ಮೈತ್ರಿ ಸರಕಾರವು 2017ರ ಜೂನ್‌ 24ರಂದು ಛತ್ರಪತಿ ಶಿವಾಜಿ ಮಹಾರಾಜ್‌ ಶೆತ್ಕರಿ ಸಮ್ಮಾನ ಯೋಜನೆಯನ್ನು ಜಾರಿಗೊಳಿಸಿತ್ತು. ಬಳಿಕ ಅಧಿಕಾರಕ್ಕೆ ಬಂದ ಮಹಾವಿಕಾಸ್‌ ಅಘಾಡಿ ಸರಕಾರವು ಹಿಂದಿನ ಸರಕಾರದ ಯೋಜನೆಯ ಹೆಸರನ್ನು ಮಹಾತ್ಮಾ ಜ್ಯೋತಿರಾವ್‌ ಫುಲೆ ಶೆತ್ಕರಿ ಸಾಲಮುಕ್ತ ಯೋಜನೆ ಎಂದು ಬದಲಾಯಿಸಿ, 2019ರ ಡಿಸೆಂಬರ್‌ 27ರಂದು ಜಾರಿಗೊಳಿಸಲಾಯಿತು. ಈ ಯೋಜನೆಯಡಿಯಲ್ಲಿ 2015ರ ಎಪ್ರಿಲ್‌ 1ರಿಂದ 2019ರ ಮಾರ್ಚ್‌ 31ರ ವರೆಗೆ ಸಾಲ ಹೊಂದಿರುವ ರೈತರ 2 ಲಕ್ಷ ರೂ.ವರೆಗಿನ ಬಾಕಿ ಸಾಲಮನ್ನಾ ಮಾಡಲು ನಿರ್ಧರಿಸಲಾಯಿತು. ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದಂತೆ ರಾಜ್ಯ ಸರಕಾರ ಮಾರ್ಚ್‌ನಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿತ್ತು.

ಇದರ ಪರಿಣಾಮವಾಗಿ ರಾಜ್ಯದ ಆರ್ಥಿಕ ಚಕ್ರ ಸ್ಥಗಿತಗೊಂಡಿತು. ನೌಕರರ ವೇತನವನ್ನು ಪಾವತಿಸಲು ಸರಕಾರದ ಬಳಿ ಸಾಕಷ್ಟು ಹಣವಿಲ್ಲದ ಕಾರಣ ರೈತರ ಸಾಲ ಮನ್ನಾ ಯೋಜನೆಗೂ ಸಮಸ್ಯೆ ಉಂಟಾಯಿತು. ಆದರೆ, ಅಂತಹ ಪರಿಸ್ಥಿತಿಯಲ್ಲಿಯೂ ರಾಜ್ಯ$ಸರಕಾರ 28.84 ಲಕ್ಷ ಸಾಲಮನ್ನಾಕ್ಕೆ ಅರ್ಹ ರೈತರ ಪೈಕಿ 26 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಲ್ಲಿ 16,000 ಕೋಟಿ ರೂ.ಗಳನ್ನು ಮಾಡಿದೆ. ಇನ್ನೂ ಬಾಕಿ ಉಳಿದ ರೈತರ ಖಾತೆಗಳಲ್ಲಿ ಸಾಲಮನ್ನಾದ ಮೊತ್ತವನ್ನು ಮುಂದಿನ 10 ದಿನಗಳಲ್ಲಿ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.