ಫೆ.10,11:ಮುಂಬಯಿಯಲ್ಲಿ ಅ.ಭಾ.ಹೊರನಾಡ ಕನ್ನಡಿಗರ ಸಮಾವೇಶ


Team Udayavani, Jan 17, 2018, 2:41 PM IST

kannada.jpg

ಮುಂಬಯಿ: ನಗರದ ಕನ್ನಡ ಸಂಘ-ಸಂಸ್ಥೆಗಳು ಒಗ್ಗೂಡಿ ಕನ್ನಡ ಸಾಹಿತ್ಯ ಪರಿಷತ್‌ ಬೆಂಗಳೂರು ಸಂಸ್ಥೆಯ ಸಹಯೋಗ ದಿಂದಿಗೆ ಬೃಹನ್ಮುಂಬಯಿಯಲ್ಲಿ ಫೆ.  10 ಮತ್ತು ಫೆ. 11ರಂದು ಅಖೀಲ ಭಾರತ ಹೊರನಾಡ ಕನ್ನಡಿಗರ ಸಮಾವೇಶವನ್ನು ಆಯೋಜಿಸಲಾಗಿದೆ.

ಮುಂಬಯಿಯ ಮೊಟ್ಟ ಮೊದಲ ಕನ್ನಡ ಸಂಸ್ಥೆ  ಎಂಬ ಹೆಗ್ಗಳಿಕೆ ಪಡೆದಿರುವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳಿಸಿರುವ ಮೊಗವೀರ ವ್ಯವಸ್ಥಾಪಕ ಮಂಡಳಿ ತಮ್ಮ ಅಂಧೇರಿ ಪಶ್ಚಿಮದ ವೀರಾ ದೇಸಾಯಿ ರಸ್ತೆಯಲ್ಲಿರುವ ಮೊಗವೀರ ಭವನದಲ್ಲಿ ಅದ್ದೂರಿಯಾಗಿ ಹಮ್ಮಿಕೊಂಡಿರುವ ಸಮಾವೇಶವನ್ನು ಯಶಸ್ವಿಯಾಗಿ ನಡೆಸಲು ಕನ್ನಡ ಸಂಸ್ಥೆಗಳು ಸಹಯೋಗ ನೀಡಲು ಮುಂದೆ ಬಂದಿವೆ. ಜೊತೆಗೆ ಮುಂಬಯಿಯ ಹೆಸರಾಂತ ಹಾಗೂ ಅತಿ ಹಳೆಯ ಕನ್ನಡ ಸಂಸ್ಥೆಗಳಾದ ಮೈಸೂರು ಅಸೋಸಿಯೇಶನ್‌, ಬಿಎಸ್‌ಕೆಬಿ ಅಸೋಸಿಯೇಶನ್‌, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ, ಕರ್ನಾಟಕ ಸಂಘ ಮುಂಬಯಿ, ಬಂಟರ ಸಂಘ ಮುಂಬಯಿ, ಕನ್ನಡ ಸಂಘ ಮುಂಬಯಿ ಹಾಗೂ ನವಿಮುಂಬಯಿ ಕನ್ನಡ ಸಂಘಗಳು ಈ ಸಮಾವೇಶದ ಯಶಸ್ವಿಗಾಗಿ ತಮ್ಮ ಸಹಯೋಗ ನೀಡಿದ್ದು ಈಗಾಗಲೇ ಸಮಾವೇಶದ ರೂಪರೇಷೆಗಳು ರೂಪುಗೊಂಡಿವೆ.

ಸಮಾವೇಶವು ಮುಂಬಯಿ ಕನ್ನಡ ಶಾಲಾ ಮಕ್ಕಳು ಹಾಗೂ ಸಂಘ ಸಂಸ್ಥೆಗಳ ಸದಸ್ಯರೊಡಗೂಡಿ ಕನ್ನಡ ತಾಯಿ ಭುವನೇಶ್ವರಿ ಹಾಗೂ ಪಾಂಡುರಂಗ ವಿಠuಲನ ಮೆರವಣಿಗೆಯೊಂದಿಗೆ ಪ್ರಾರಂಭಗೊಂಡು ಆನಂತರ ಸಮಾವೇಶದ ಉದ್ಘಾಟನಾ ಸಮಾರಂಭ ನಡೆಯಲಿದೆ.  ಪ್ರತಿದಿನ ಮೂರು ವಿವಿಧ ವಿಚಾರ ಗೋಷ್ಠಿಗಳು ನಡೆಯಲಿದ್ದು,  ಮಧ್ಯೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಕೊನೆಗೆ ಸಮಾರೋಪದೊಂದಿಗೆ ಮುಕ್ತಾಯ ಕಾಣಲಿದೆೆ.

ಸಮಾವೇಶದ ಅಂಗವಾಗಿ ಹೊರನಾಡ ಕನ್ನಡ ಸಂಘ ಸಂಸ್ಥೆಗಳ ನಡೆದು ಬಂದ ದಾರಿಯ ಬಗೆಗೆ ಛಾಯಾ ಚಿತ್ರಪ್ರದರ್ಶನ, ಹೊರನಾಡ ಸಾಹಿತಿಗಳ ಪುಸ್ತಕ ಪ್ರದರ್ಶನ, ಕನ್ನಡ ಪುಸ್ತಕ ಪ್ರಾಧಿಕಾರದ ಮಾರಾಟ ಮಳಿಗೆ ಹಾಗೂ ನೆನಹೊತ್ತಿಗೆಯ ಬಿಡುಗಡೆ ಕಾರ್ಯಕ್ರಮ ಒಳಗೊಂಡಿವೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತದ ಎಲ್ಲ ನಗರಗಳಿಂದ ಸುಮಾರು 300 ಕ್ಕೂ ಅಧಿಕ ಕನ್ನಡ ಪ್ರತಿನಿಧಿಗಳು, ಖ್ಯಾತ ಸಾಹಿತಿಗಳು, ಚಿಂತಕರು ಆಗಮಿಸಲಿದ್ದಾರೆ. ಕರ್ನಾಟಕದ ಒಳನಾಡಿನಿಂದಲೂ ಹಿರಿಯ ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ನಗರದ 25ಕ್ಕೂ ಮಿಕ್ಕಿದ ಸಂಘಗಳು ಸಹಭಾಗಿಗಳಾಗಲು ಒಪ್ಪಿಕೊಂಡಿದ್ದು ಈ ವರೆಗೆ ಇನ್ನೂ ಸಹಭಾಗಿಗಳಾಗದ ಸಂಘ ಸಂಸ್ಥೆಗಳು  ಕೂಡಲೇ ಸಮಿತಿಯನ್ನು ಸಂಪರ್ಕಿಸಿ ತಾವೂ ಈ ವಿಶೇಷ  ಸಮಾವೇಶದಲ್ಲಿ ಪಾಲ್ಗೊಳ್ಳಲು ಮುಂದೆ ಬರುವಂತೆ ಮುಂಬಯಿ  ಸಮಾವೇಶ ಸಮಿತಿಯು ತಿಳಿಸಿದೆ. ಮೈಸೂರು ಅಸೋಸಿಯೇಶನ್‌ ಮುಂಬಯಿ ಇದರ ಡಾ| ಗಣಪತಿ ಶಂಕರಲಿಂಗ, ಮೊಗವೀರ ವ್ಯವಸ್ಥಾಪಕ ಮಂಡಳಿ  ಮುಂಬಯಿ ಅಧ್ಯಕ್ಷ ಕೆ. ಎಲ್‌. ಬಂಗೇರ, ಬಿಎಸ್‌ಕೆಬಿ ಅಸೋಸಿಯೇಶನ್‌ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌ ಕಟೀಲು, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಕರ್ನಾಟಕ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತಕುಮಾರ್‌ ಪೊಲಿಪು, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ  ನಿತ್ಯಾನಂದ ಡಿ. ಕೋಟ್ಯಾನ್‌    ಮತ್ತಿತರ ಸಂಸ್ಥೆಗಳ ಮುಖ್ಯಸ್ಥರು ಮುಂಬಯಿ ಸಮಾವೇಶ ಸಮಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸ್ಥಳೀಯ ಸಮಿತಿ ಮೈಸೂರು ಅಸೋಸಿಯೇಶನ್‌ ಮುಂಬಯಿ (24024647, 24037065) ಇಲ್ಲಿ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.