ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಗಲ್ಫ್ ರಾಷ್ಟ್ರಗಳ ವಿಶೇಷ ಸಭೆ


Team Udayavani, May 16, 2018, 4:32 PM IST

1505mum04.jpg

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಗಲ್ಫ್ ರಾಷ್ಟ್ರಗಳ ವಿಶೇಷ ಸಭೆಯು ಮೇ 12ರಂದು ಪದ್ಮಶ್ರೀ ಡಾ| ಬಿ. ಆರ್‌. ಶೆಟ್ಟಿ ಅವರ ಅಬುಧಾಬಿಯ ಅತಿಥಿಗೃಹದಲ್ಲಿ ಡಾ| ಬಿ. ಆರ್‌. ಶೆಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಒಮಾನ್‌, ಬಹರೇನ್‌, ಕತಾರ್‌, ಕುವೈಟ್‌, ಸೌದಿ ಅರೇಬಿಯಾ, ದುಬಾೖ, ಶಾರ್ಜಾದಿಂದ ಆಗಮಿಸಿದ ಗಲ್ಫ್ನ ಬಂಟರ ಸಂಘಗಳ ಪ್ರತಿನಿಧಿಗಳನ್ನು ಸ್ವಾಗತಿಸಿ ಮಾತನಾಡಿದ ಪದ್ಮಶ್ರೀ ಡಾ| ಬಿ. ಆರ್‌. ಶೆಟ್ಟಿ ಅವರು, ಐಕಳ ಹರೀಶ್‌ ಶೆಟ್ಟಿ ಅವರು  ಕ್ರಿಯಾಶೀಲ ವ್ಯಕ್ತಿತ್ವದ ಶ್ರೇಷ್ಠ ಸಂಘಟರಾಗಿದ್ದಾರೆ. ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯವಾಗಿವೆ. ಇದೀಗ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಾರಥ್ಯವನ್ನು ಸ್ವೀಕರಿಸಿರುವುದು ಗಲ್ಫ್ರಾಷ್ಟ್ರಗಳ ಬಂಟ ಸಮಾಜದ ಬಂಧುಗಳಾದ ನಮಗೆಲ್ಲ ಅತೀವ ಸಂತಸವಾಗಿದೆ. ಭರವಸೆಯ ಆಶಾಕಿರಣ ನಮ್ಮಲ್ಲಿ ಮೂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಂಟ ಸಮಾಜದ ಅಭಿವೃದ್ಧಿಯ ಜತೆ ತೀರಾ ಬಡತನದ ರೇಖೆಯಲ್ಲಿರುವ ಸಮಾಜದ ಬಂಧುಗಳನ್ನು ಕೈ ಹಿಡಿದು ಮೇಲಕ್ಕೆತ್ತುವ ಕಾರ್ಯ ಐಕಳ ಹರೀಶ್‌ ಶೆಟ್ಟಿ ಅವರಿಂದ ನಡೆಯಲಿ. ಅವರ ಸಮಾಮುಖೀ ಕಾರ್ಯಗಳಿಗೆ ನಮ್ಮೆಲ್ಲರ ಸಹಕಾರವಿದೆ ಎಂದರು.

ಒಕ್ಕೂಟವನ್ನು ಬಲಪಡಿಸೋಣ: ಐಕಳ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಮಾತ ನಾಡಿ, ಗಲ್ಫ್ ರಾಷ್ಟ್ರಗಳ ಬಂಟರ ಸಂಘಗಳ ಪ್ರತಿನಿಧಿಗಳು ಇಷ್ಟೊಂದು ಸಂಖ್ಯೆಯಲ್ಲಿ ಭಾಗವಹಿಸಿರುವುದನ್ನು ಕಂಡಾಗ ಸಂತಸ ವಾಗುತ್ತಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಒಕ್ಕೂಟದ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಆನಂತರ ಮುಂಬಯಿಯಲ್ಲಿ ಪ್ರಥಮ ವಿಶ್ವ ಬಂಟರ ಸಂಘಗಳ ಎಲ್ಲಾ ಪ್ರತಿನಿಧಿಗಳನ್ನು ಒಟ್ಟು ಸೇರಿಸಿ ಗ್ರಾಮೀಣ ಬಂಟ ಸಮಾಜದ ಅಭಿವೃದ್ಧಿಯ ಬಗ್ಗೆ ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದ ಬಂಧುಗಳಿಗೆ ಶಿಕ್ಷಣ, ವಿವಾಹ, ಆರೋಗ್ಯ, ಕ್ರೀಡೆಗೆ ಹೆಚ್ಚಿನ ಒತ್ತನ್ನು ನೀಡಲು ವಿಶೇಷ ಯೋಜನೆಯೊಂದನ್ನು ರೂಪಿಸಿ, ಸಮಾಜದ ಬಂಧುಗಳ ಸಮಸ್ಯೆಗಳಿಗೆ ಸ್ಪಂದಿಸುವ ಬಗ್ಗೆ ಮುಂಬಯಿ ಬಂಟರು, ದಾನಿಗಳು ವಿಶೇಷ ಸಹಕಾರವನ್ನು ನೀಡಿದ್ದಾರೆ. ತಾವೆಲ್ಲರೂ ಜಾಗತಿಕ ಬಂಟರ ಒಕ್ಕೂಟದ ಜತೆ ಕೈಜೋಡಿಸಿ ಸಂಘಟನೆಯನ್ನು ಬಲಪಡಿಸಬೇಕು. ಡಾ| ಬಿ. ಆರ್‌. ಶೆಟ್ಟಿ ಅವರ ಆತಿಥ್ಯಕ್ಕೆ ನಾವೆಂದೂ ಚಿರಋಣಿಯಾಗಿದ್ದೇವೆ. ಇಂದು ನಮಗೆ ಬಹಳಷ್ಟು ಭರವಸೆಯ ಆಶೀರ್ವಾದ ಸಿಕ್ಕಿದೆ. ನಾವೆಲ್ಲರೂ ಒಂದಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟವನ್ನು ಬಲಪಡಿಸೋಣ ಎಂದರು.

ಯುಎಇ ಬಂಟರ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅವರು ಮಾತನಾಡಿ, ಐಕಳ ಹರೀಶ್‌ ಶೆಟ್ಟಿ ಅವರು ಸಮಾಜಮುಖೀ ಯಾವ ಕಾರ್ಯಕ್ಕೂ ಕೈ ಹಾಕಿದರೆ ಅದನ್ನು ಸಾಧಿಸಿಯೇ ಬಿಡುವ ಛಲವಾದಿ. ಮುಂಬಯಿ ಬಂಟರ ಸಂಘದಲ್ಲಿ ಅವರು ಮಾಡಿದ ಕಾರ್ಯ ಕಾರ್ಯ ಸಾಧನೆ ಅದ್ಭುತವಾಗಿದೆ. ಜಾಗತಿಕ ಬಂಕಟರ ಸಂಘಗಳ ಒಕ್ಕೂಟದ ತಮ್ಮ ಕಾರ್ಯದಲ್ಲಿ ಯುಎಇ ಯ ಎಲ್ಲಾ ಬಂಟರು ನಿಮ್ಮ ಜೊತೆಯಲ್ಲಿದ್ದಾರೆ ಎಂದರು.

ಒಮನ್‌ ಬಂಟರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ, ಬಹರೇನ್‌ ಬಂಟರ ಸಂಘದ ಅಧ್ಯಕ್ಷ ನಾಗೇಶ್‌ ಶೆಟ್ಟಿ, ಕುವೇಟ್‌ ಬಂಟ್ಸ್‌ನ ಅಧ್ಯಕ್ಷ ಡಾ| ಶೇಖರ್‌ ಶೆಟ್ಟಿ, ಸೌದಿ ಅರೇಬಿಯದ ನಿಕಟಪೂರ್ವ ಅಧ್ಯಕ್ಷ ಮಹೇಶ್‌ ಹೆಗ್ಡೆ, ಯುಎಇ ಎಕ್ಸ್‌ಚೇಂಜ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಧೀರ್‌ ಶೆಟ್ಟಿ, ಸಾಹಿತಿ ಡಾ| ಸುನೀತಾ ಶೆಟ್ಟಿ ಅವರು ಸಂದಭೋìಚಿತವಾಗಿ ಮಾತನಾಡಿದರು.

ಸಭೆಯಲ್ಲಿ ಅರಬ್‌ ಉಡುಪಿ ಹೊಟೇಲ್‌ ಸಮೂಹ ಸಂಸ್ಥೆಯ ನಿರ್ದೇಶಕ ಶೇಖರ್‌ ಶೆಟ್ಟಿ ಕಳತ್ತೂರು, ನಿಹಾಲ್‌ ರೆಸ್ಟೋರೆಂಟ್‌ನ ಸುಂದರ್‌ ಶೆಟ್ಟಿ, ಪ್ರೇಮ್‌ನಾಥ್‌ ಶೆಟ್ಟಿ, ಗಣೇಶ್‌ ರೈ, ಗುಣಶೀಲ್‌ ಶೆಟ್ಟಿ, ಜ್ಯೋತಿಕಾ ಶೆಟ್ಟಿ, ಭಾಗ್ಯಾ ಶೆಟ್ಟಿ, ಉಷಾ ಶೆಟ್ಟಿ, ನವೀನ್‌ ಶೆಟ್ಟಿ ಎಡೆ¾àರ್‌ ಸಹಿತ ಯುಎಇ ಬಂಟ್ಸ್‌ನ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಘಟಕ ಕರ್ನೂರು ಮೋಹನ್‌ ರೈ ವಂದಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.