ಉದ್ಘಾಟಕ ಚಂದ್ರಹಾಸ ಕೆ. ಶೆಟ್ಟಿ ಅವರಿಗೆ ಆಮಂತ್ರಣ
ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಬಹಿರಂಗ ಅಧಿವೇಶನ
Team Udayavani, Sep 3, 2021, 2:26 PM IST
ಕುರ್ಲಾ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನವು ಸೆ. 5ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃ ಹದಲ್ಲಿ ಜರಗಲಿದ್ದು, ಸಮಾರಂಭವನ್ನು ಉದ್ಘಾಟಿಸಲಿರುವ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರನ್ನು ಭೇಟಿಯಾದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಆಮಂತ್ರಣ ಪತ್ರಿಕೆಯನ್ನಿತ್ತು ಸಮಾರಂಭಕ್ಕೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾರಂಭಕ್ಕೆ ಬಂಟರ ಸಂಘದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ, ಸಮಾರಂಭದ ಯಶಸ್ಸಿಗೆ ಶುಭ ಹಾರೈಸಿದರು.
ಇದನ್ನೂ ಓದಿ:ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ‘ಉದ್ಯೋಗಕ್ಕೆ ಮಾರಕ’ : ರಾಹುಲ್ ಗಾಂಧಿ ಗರಂ
ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳೂ¤ರು ಮೋಹನ್ದಾಸ್ ಶೆಟ್ಟಿ, ಒಕ್ಕೂಟದ ಪೋಷಕರಾದ ರತ್ನಾಕರ ಶೆಟ್ಟಿ ಮುಂಡ್ಕೂರು ಉಪಸ್ಥಿತರಿದ್ದರು.