“ಕೋವಿಡ್ ಮಾರ್ಗಸೂಚಿಗಳನ್ನು ಕಡಾಯವಾಗಿ ಪಾಲಿಸಿ’


Team Udayavani, Dec 11, 2020, 8:13 PM IST

“ಕೋವಿಡ್ ಮಾರ್ಗಸೂಚಿಗಳನ್ನು ಕಡಾಯವಾಗಿ ಪಾಲಿಸಿ’

ಮುಂಬಯಿ, ಡಿ. 10: ಮೀರಾರೋಡ್‌ ಭಾರತಿ ಪಾರ್ಕ್‌ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಇದರ 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆಯು ಡಿ. 5ರಂದು ಸಂಜೆ ಮೀರಾರೋಡ್‌ ಪೂರ್ವದ ಭಾರತಿ ಪಾರ್ಕಿನ ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿಯ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಇದೇ ಸಂದರ್ಭದಲ್ಲಿ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರ ಪೌರೋಹಿತ್ಯದಲ್ಲಿ ಭಜನೆ, ಶ್ರೀ ಅಯ್ಯಪ್ಪ ಸ್ವಾಮಿಗೆ ಪಡಿಪೂಜೆ, ಕರ್ಪೂರಾರತಿ, ಶ್ರೀ ಲಕ್ಷ್ಮೀನಾರಾಯಣ ಹಾಗೂ ಮಂದಿರದ ಪರಿವಾರ ದೇವರಿಗೆ ಮಹಾಮಂಗಳಾರತಿ ನಡೆಯಿತು.

ಸೇವಾರ್ಥಿಗಳನ್ನು ಗೌರವಿಸಿ ಭಕ್ತರಿಗೆ ಪ್ರಸಾದ ವಿತರಿಸಿ ಮಾತನಾಡಿದ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರು, ಸರಕಾರದ ಷರತ್ತುಬದ್ಧ ಸೂಚನೆಯಿಂದ ಶಬರಿಮಲೆ ಶ್ರೀ ಸನ್ನಿಧಿಗೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಅನಾನುಕೂಲವಾಗಿದ್ದಲ್ಲಿ ಅಂಥವರು ಮೀರಾರೋಡ್‌ ಪೂರ್ವದ, ಅಯ್ಯಪ್ಪ ಮಾರ್ಗ, ಶಾಂತಿ ನಗರ ಸೆಕ್ಟರ್‌- 2ರ ಎದುರುಗಡೆ ಇರುವ ಅಯ್ಯಪ್ಪ ಮಂದಿರದಲ್ಲಿ 18 ಮೆಟ್ಟಲುಗಳನ್ನು ಹತ್ತಿ ತುಪ್ಪದ ಅಭಿಷೇಕ, ಅರವಣ ಪಾಯಸ, ಅಪ್ಪ ಪ್ರಸಾದ ಮೊದಲಾದ ಹರಕೆ ಸಲ್ಲಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬಹುದು. ಆಡಳಿತ ಮಂಡಳಿಯ ನಿರ್ದೇಶನದಂತೆ ಭಕ್ತರು ಮುಂಚಿತವಾಗಿ ಹೆಸರನ್ನು ನೊಂದಾಯಿಸಬೇಕು. ಬೆಳಗ್ಗೆ 7 ರಿಂದ 11ರ ತನಕ ಸಮಯ ನಿಗದಿಯಾಗಿದ್ದು, ಭಕ್ತರ ಸಂಖ್ಯೆ 50ಕ್ಕೆ ಮೀರಿರಬಾರದು. ಲಘು ಉಪಹಾರವನ್ನು ಮಂದಿರದ ವತಿಯಿಂದ ಕಲ್ಪಿಸಲಾಗಿದೆ ಎಂದು ಹೇಳಿದ ಅವರು ಪ್ರತಿ ಸಂದರ್ಭದಲ್ಲಿ ಸ್ವಚ್ಛತೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಇನ್ನಿತರ ಮಾರ್ಗಸೂಚಿಗಳನ್ನು ಅನುಸರಿಸಿಕೊಳ್ಳಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಸ್ವಾಮಿಗಳಾದ ಶೈಲೇಶ್‌ ಪಾಟೀಲ್, ಅಖೀಲೇಶ್‌ ಉಪಾಧ್ಯಾಯ, ಮಾಧವ ಸಿ. ಕೋಟ್ಯಾನ್‌, ಪ್ರವೀಣ್‌ ಶೆಟ್ಟಿ, ಸುಧೀರ್‌ ಪುತ್ರನ್‌, ಲೀಲಾಧರ್‌ ಅಂಚನ್‌, ಸಿ. ಎನ್‌. ಪೂಜಾರಿ, ಸಂತೋಷ್‌ ಶೆಟ್ಟಿ, ಗಣೇಶ್‌ ದೇವಾಡಿಗ, ಸತೀಶ್‌ ಸೇರಿಗಾರ್‌, ಸ್ವಪ್ನಿಲ್‌ ಸಿ. ಪೂಜಾರಿ, ಸಂತೋಷ್‌ ಶೆಟ್ಟಿ ವಿರಾರ್‌, ನವೀನ್‌ ಸಾಧುಲ್‌, ರಾಜೇಶ್‌ ಪೂಜಾರಿ, ಜಯಂತ್‌ ಶೆಟ್ಟಿ ಸಹಕರಿಸಿದರು. ಭಕ್ತರು ಸರಕಾರದ ನಿಯಮದಂತೆ ಪ್ರಸಾದ ಸ್ವೀಕರಿಸಿದರು.

ಶಬರಿಮಲೆ ಮಂದಿರದ ತದ್ರೂಪ :

ಮೀರಾರೋಡ್‌ ಪೂರ್ವದ ಶ್ರೀ ಅಯ್ಯಪ್ಪ ಮಾರ್ಗ, ಶಾಂತಿ ನಗರ ಸೆಕ್ಟರ್‌ 2ರ ಎದುರುಗಡೆ ಇರುವ ಅಯ್ಯಪ್ಪ ಮಂದಿರವು ಶಬರಿಮಲೆಯಲ್ಲಿರುವ ಶ್ರೀ ಸನ್ನಿಧಿಯ ಅಯ್ಯಪ್ಪ ಮಂದಿರದ ತದ್ರೂಪವಾಗಿ ವಾಸ್ತುಶಾಸ್ತ್ರದಂತೆ ನಿರ್ಮಾಣಗೊಂಡಿದೆ. ಅಯ್ಯಪ್ಪ ಸ್ವಾಮಿಯ ಮೂರ್ತಿ, ಧ್ವಜಸ್ತಂಭ, ಹದಿನೆಂಟು ಮೆಟ್ಟಲುಗಳು ಶ್ರೀಕ್ಷೇತ್ರದ ಮಣ್ಣಿನೊಂದಿಗೆ ರಚಿತವಾಗಿದೆ. ಸನ್ನಿಧಿಯ ತಂತ್ರಿಯವರೇ ಮೀರಾರೋಡ್‌ಗೆ ಆಗಮಿಸಿ ಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ. ಕಳೆದ ವರ್ಷ ಸುಮಾರು 200 ಮಂದಿ ಭಕ್ತರು ತುಪ್ಪದ ಅಭಿಷೇಕ ಮಾಡಿಸಿ ವ್ರತವನ್ನು ಪೂರ್ಣಗೊಳಿಸಿದ್ದಾರೆ.

 

-ಚಿತ್ರ – ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.