ವಿ.ಪಿ.ಎಂ.ಕನ್ನಡ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ


Team Udayavani, Sep 5, 2017, 4:00 PM IST

02mum01.jpg

ಥಾಣೆ: ಸಮಾಜದಲ್ಲಿ  ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಜನರು ಬೇರೆ ಜನರ ಸಮಸ್ಯೆಗಳಿಗೆ ಹಾಗೂ ಆಶೋತ್ತರಗಳಿಗೆ ಸ್ಪಂದಿಸಬೇಕು. ಜೀವನಕ್ಕೆ ಬಡತನವಿರಬಹುದು ಮನಸ್ಸಿಗಲ್ಲ. ಕಲಿಯುವ ಆಸೆ-ಹೆಬ್ಬಯಕೆಯ ಪ್ರತಿಭೆಯಿದ್ದು, ಆರ್ಥಿಕ ಅಡಚಣೆಯಿಂದ ದುರ್ಬಲಗೊಂಡ, ಬಡತನ ರೇಖೆಗಿಂತ ಕೆಳಗಿರುವ ಮಕ್ಕಳಿಗೆ ಪ್ರತಿ ವರ್ಷ ವಿದ್ಯಾ ಪ್ರಸಾರಕ ಮಂಡಳವು ಉಚಿತ ಸಮವಸ್ತ್ರ ವಿತರಣಾ ಕಾರ್ಯವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸವಾಗಲು ವ್ಯಕ್ತಿತ್ವ ವಿಕಾಸವನ್ನು ಮಾಡಿಕೊಳ್ಳಲೇ ಬೇಕು. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ನಿರ್ಮಾಪಕರಾಗಿದ್ದಾರೆ. ವಿದ್ಯಾರ್ಜನೆಯೇ ಜೀವನದ ಮೂಲ ಬೇರು.

ಶಿಕ್ಷಣವು ಮನುಷ್ಯನಿಗೆ ಮನುಷ್ಯತ್ವ ವನ್ನು, ಮಾನವೀಯತೆಯ ಗುಣ-ಮೌಲ್ಯ ಗಳನ್ನು ಧಾರೆ ಎರೆಯುತ್ತದೆ. ಅಜ್ಞಾನದಿಂದ -ಸುಜ್ಞಾನದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಿಕ್ಷಣದ ದಿವ್ಯವಾದ ಹೊಂಬೆಳಕಿನಿಂದ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ, ರಾಷ್ಟ್ರದ ಸತøಜೆಗಳಾಗಿ ಗುರುತಿಸಿ ಕೊಂಡರೆ, ಸರ್ವೋದಯದ, ಸರ್ವತೋ ಮುಖದ ವ್ಯಕ್ತಿತ್ವದ ವೈಶಾಲ್ಯತೆಯನ್ನು  ಪ್ರಬುದ್ಧ ಗೊಳಿಸಬಹುದು ಎಂದು ವಿದ್ಯಾ ಪ್ರಸಾರಕ ಮಂಡಳದ ಅಧ್ಯಕ್ಷ  ಆರ್‌. ಎಸ್‌. ಪೈ ಅವರು  ನುಡಿದರು.

ಅವರು ಇತ್ತೀಚೆಗೆ ಇಲ್ಲಿನ ವಿಪಿಎಂ ಕನ್ನಡ ಶಾಲೆಯಲ್ಲಿ  ಜರಗಿದ ಉಚಿತ ಸಮವಸ್ತ್ರ ವಿತರಣ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡುತ್ತಿದ್ದರು.

ಉಚಿತ ಸಮವಸ್ತ್ರ  ವಿತರಿಸುತ್ತಿರುವ  ವಿದ್ಯಾ ಪ್ರಸಾರಕ ಮಂಡಳದ ಶೈಕ್ಷಣಿಕ ಕಾರ್ಯವನ್ನು ಶ್ಲಾಘಿಸಿದ ಅವರು, ನಮ್ಮ ಸಮಾಜದಲ್ಲಿ ನೊಂದು-ಬೆಂದು ಸೋತು- ಸವೆದು ಹೋದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು,  ಅವರನ್ನು ಶಿಕ್ಷಣವಂತರನ್ನಾಗಿ, ಹೊಸ ಸಮಾಜದ ನಿರ್ಮಾಣಕ್ಕಾಗಿ, ಭಾರತ  ದೇಶದ ಉತ್ತಮ ಸತøಜೆಯನ್ನಾಗಿ ಮಾಡುವ ಮಹದಾಸೆಯಿಂದ ಹುಟ್ಟಿಕೊಂಡಿರುವ ಈ ಸಂಸ್ಥೆಯ ಕಾರ್ಯ ಅತ್ಯದ್ಭುತ ಎಂದರು.

ಸಮಾರಂಭದ ಅಧ್ಯಕ್ಷ, ವಿದ್ಯಾ ಪ್ರಸಾರಕ ಮಂಡಳದ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಪಿ.ಎಂ. ಕಾಮತ್‌ ಅವರು ಮಾತನಾಡುತ್ತ, ಸಮೃದ್ಧ, ಸಮರ್ಥ, ಸರ್ವೋದಯದ  ರಾಷ್ಟ್ರವನ್ನು ನಿರ್ಮಿಸಲು ವಿದ್ಯಾರ್ಥಿಗಳಲ್ಲಿ ಏಕತೆ, ಭಾವೈಕ್ಯತೆ, ರಾಷ್ಟ್ರೀಯ ಐಕ್ಯತೆಯ ಗುಣ ಮೌಲ್ಯಗಳನ್ನು ಬೆಳೆಸ
ಬೇಕು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯೇ ಸಂಸ್ಥೆಯ ಗುರಿ. ಪ್ರತಿವರ್ಷ ಅಂಗನವಾಡಿಯಿಂದ 10ನೇ ತರಗತಿಯವರೆಗೆ ಉಚಿತ ಪ್ರವೇಶ, ಪಠ್ಯಪುಸ್ತಕ, ನೋಟ್‌ಬುಕ್‌,ಸಮವಸ್ತ್ರ, ಸಂಗಣಕ, ಸ್ಮಾರ್ಟ್‌ಕ್ಲಾಸ್‌ ಬೋರ್ಡ್‌,ಶಾಲಾ ಬಸ್ಸಿನಲ್ಲಿ ರಿಯಾಯಿತಿ, ಗ್ರಂಥಾಲಯ, ಪ್ರಯೋಗಾಲಯಗಳನ್ನು ಒದಗಿಸಿಕೊಡ ಲಾಗುತ್ತಿದೆ. ವಿದ್ಯಾರ್ಥಿಗಳು ವಿದ್ಯೆಯನ್ನು ಪಡೆದು, ಶಾಲೆಯ ಕೀರ್ತಿಯನ್ನು ಹೆಚ್ಚಿಸಿ, ಉನ್ನತ ವ್ಯಕ್ತಿಗಳಾಗಿರೆಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ  ಕಾರ್ಯ ಕ್ರಮವು ಪ್ರಾರಂಭವಾಯಿತು. ವೇದಿಕೆಯಲ್ಲಿ ಗೌರವ ಕಾರ್ಯದರ್ಶಿ ಬಿ. ಎಚ್‌, ಕಟ್ಟಿ, ಮುಖ್ಯೋಪಾಧ್ಯಾಯಿನಿ ನೆಲ್ಸನ್‌, ಉಪ ಪ್ರಾಂಶುಪಾಲ ಸಾಯಿನಾಥ್‌ ಶೆಣೈ,  ಸುವಿನಾ ಶೆಟ್ಟಿ, ಅರುಣಾ ಭಟ್‌ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಕರು, ಶಿಕ್ಷಕೇತರ ಸಿಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರ್ವಹಣೆ, ಸ್ವಾಗತ ಭಾಷಣವನ್ನು ಶಿಕ್ಷಕಿ ಸುನಿತಾ ಮs… ಮತ್ತು ಲಕ್ಷ್ಮೀ ಕೆಂಗನಾಳ ನಿರ್ವಹಿಸಿದರೆ, ಅತಿಥಿ-ಗಣ್ಯರ ಪರಿಚಯವನ್ನು  ಸುಂದರಿ ಬಾಯಿ ಮಂಜುನಾಥ ಕಾಮತ್‌ ಕನ್ನಡ ಶಾಲೆಯ ಪರಿವೀಕ್ಷಕಿ ಗೌರಿ ದೇಶಪಾಂಡೆ ಮಾಡಿದರು. ಶಿಕ್ಷಕಿ ರೇಖಾ ರಾವ್‌ ಮತ್ತು ಶಿಕ್ಷಕ ಅಂಬಾಜೆಪ್ಪಾ ಕಾಟ್‌ಗಾಂವ್‌ ಅವರು ವಿದ್ಯಾರ್ಥಿಗಳ ಯಾದಿಯನ್ನು  ಓದಿದರು.  ಶಿಕ್ಷಕಿ ಪಿಂಟೂ ಅವರು ಧನ್ಯವಾದ ಗೈದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.