ಸ್ನೇಹ, ಒಡನಾಟಕ್ಕೆ ಎಂದೂ ಸಾವಿಲ್ಲ: ಶ್ರೀದೇವಿ ಸಿ. ರಾವ್‌


Team Udayavani, Jan 13, 2021, 7:43 PM IST

Friendship is never dead

ಮುಂಬಯಿ: ಚಂದ್ರಶೇಖರ ರಾವ್‌ ಮೆಮೋರಿಯಲ್‌ ಟ್ರಸ್ಟ್‌ ಮತ್ತು ಮುಂಬಯಿ ಚುಕ್ಕಿ ಸಂಕುಲದ ಲೇಖಕ ಕಲಾವಿದರ ಬಳಗದ ಸಹಯೋಗದೊಂದಿಗೆ ಶನಿವಾರ ಸಂಜೆ ಭಾಂಡೂಪ್‌ ಪಶ್ಚಿಮದಲ್ಲಿ ದಿ| ಚಂದ್ರಶೇಖರ ರಾವ್‌ ಜನ್ಮದಿನ ಸಂಸ್ಮರಣೆ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು.

ಸಂಸ್ಥೆಯ ಟ್ರಸ್ಟಿ ಶ್ರೀದೇವಿ ಚಂದ್ರಶೇಖರ ರಾವ್‌ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಕಾರ್ಯಕ್ರಮದಲ್ಲಿ ಅತಿಥಿ ಅಭ್ಯಾಗತರಾಗಿದ್ದ ಕವಿ, ಕಥೆಗಾರ ಡಾ| ಕೆ. ಗೋವಿಂದ ಭಟ್‌ ಅವರು ಟ್ರಸ್ಟ್‌ನ ಕಾರ್ಯಕ್ರಮಗಳ ಸವಿನೆನಪುಗಳ ಫೋಟೋ ಆಲ್ಬಮ್‌ ಬಿಡುಗಡೆಗೊಳಿಸಿ ಮಾತನಾಡಿ, ಕವಿತೆ ಬರೆಯುವ ತುಡಿತ, ಸೆಳೆತ ಇರುವ ಹೊಸಬರು ಅಂತರ್ಜಾಲ ಆಯೋಜಿಸುವ ಕಾವ್ಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು.

ಈಗ ಅಂತಹ ವಿಫುಲ ಅವಕಾಶಗಳು ಸಿಗುತ್ತಿವೆ. ಚಂದ್ರಶೇಖರ ರಾವ್‌ ಅವರು ಗುಣವಂತ, ಸೃಜನಶೀಲ ವ್ಯಕ್ತಿ ಆಗಿದ್ದರು ಎನ್ನುವುದಕ್ಕೆ ಇಂತಹ ಸಂಕಷ್ಟದ ಸಮಯದಲ್ಲೂ ಅವರ ಮೇಲಿನ ಪ್ರೀತಿಯಿಂದ ಇಲ್ಲಿ ಸೇರಿದ ನೀವೇ ಸಾಕ್ಷಿ ಎಂದು ತಿಳಿಸಿ, ಇತ್ತೀಚೆಗೆ ಬಹುಮಾನ ಪಡೆದ ತಮ್ಮ ಕವಿತೆಯೊಂದನ್ನು ವಾಚಿಸಿದರು.

ಶ್ರೀದೇವಿ ಸಿ. ರಾವ್‌ ಮಾತನಾಡಿ, ಟ್ರಸ್ಟ್‌ನ ಹುಟ್ಟು, ಧ್ಯೇಯ, ಉದ್ದೇಶಗಳನ್ನು ವಿವರಿಸಿದರು. ಪತಿಯ ಆಸೆಯಂತೆ ಸಾಹಿ ತ್ಯದ ಪರಿಚಾರಿಕೆ, ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ವಾರ್ಷಿಕವಾಗಿ ಕವಿಗೋಷ್ಠಿಯನ್ನು ಹಮ್ಮಿಕೊಳ್ಳುತ್ತಿದ್ದೇವೆ. ಬರಹಗಾರರ ಬಳಗಕ್ಕೆ, ಅವರ ಸ್ನೇಹ, ಒಡನಾಟಕ್ಕೆ ಎಂದೂ ಸಾವಿರುವುದಿಲ್ಲ ಎಂದು ಪತಿ ಹೇಳುತ್ತಿದ್ದರು. ಈ ಮಾತನ್ನು ನೀವು ಪ್ರತೀವರ್ಷದಂತೆ ಈ ಬಾರಿಯೂ ಪ್ರೀತಿಯಿಂದ ಬಂದು ನಿಜವಾಗಿಸಿದ್ದೀರಿ. ಭಾಗವಹಿಸಿದ ಕವಿಗಳು, ಸಾಹಿತ್ಯಾಸಕ್ತ ಬಂಧುಗಳಿಗೆ, ಚುಕ್ಕಿಸಂಕುಲದ ಕವಿ, ನಾಟಕಕಾರ ಸಾ. ದಯ, ಗೋಪಾಲ ತ್ರಾಸಿ, ಭೀಮರಾಯ ಚಿಲ್ಕಾ ಮೊದಲಾದವರ ನಿರಂತರ ಸಹಕಾರಕ್ಕೆ ತುಂಬು ಹೃದಯದಿಂದ ಕೃತಜ್ಞತೆ ಸಲ್ಲಿಸುವೆ ಎಂದರು.

ಇದನ್ನೂ ಓದಿ:ಟಾಟಾ ಆಲ್ಟ್ರೋಜ್‌ ಟರ್ಬೋ ಅನಾವರಣ : ನಾಳೆಯಿಂದ ಬುಕಿಂಗ್‌ಗೆ ಅವಕಾಶ

ಡಾ| ಜಿ. ಪಿ. ಕುಸುಮಾ ಅವರು ಚಂದ್ರಶೇಖರ ರಾವ್‌ ಅವರ ಕವಿತೆಗಳನ್ನು ಪ್ರಸ್ತುತಪಡಿಸಿದರು. ಆಮಂತ್ರಿತ ಕವಿಗಳಾದ ಡಾ| ಕರುಣಾಕರ ಶೆಟ್ಟಿ ಪಣಿಯೂರು, ಡಾ| ರಜನಿ ಪೈ, ಲಲಿತಾ ಪ್ರಭು ಅಂಗಡಿ, ಕುಸುಮಾ ಸಿ. ಅಮೀನ್‌, ಸರೋಜಾ ಅಮಾತಿ, ಶೋಭಾ ಶೆಟ್ಟಿ, ವಿಜಯಾ ಗೋವಿಂದ ಭಟ್‌ ಅವರು ತಮ್ಮ ಕವಿತೆಗಳನ್ನು ವಾಚಿಸಿದರು. ವಿಜಯಾ ಗೌಡ ಮತ್ತು ಸರೋಜಾ ಅಮಾತಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಪ್ರಭಾವತಿ ಶೆಣೈ, ಶೈಲಾ ಶೆಟ್ಟಿ, ಶಶಿಕಲಾ ಕತ್ರಿ ಮತ್ತಿತರರು ರಾವ್‌ ಪರಿವಾರದ ಜತೆಗಿನ ಮಿತೃತ್ವ ಬಾಂಧವ್ಯವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಾರ್ಷಿಕ ವಿದ್ಯಾರ್ಥಿವೇತನ ವಿತರಿಸಲಾಯಿತು.

ಕವಿ, ಕಥೆಗಾರ ಗೋಪಾಲ ತ್ರಾಸಿ ಪ್ರಸ್ತಾವಿಸಿ, ಗೆಳೆಯ ಚಂದ್ರಶೇಖರ ರಾವ್‌ ಅವರೊಂದಿಗಿನ ಸಾಹಿತ್ಯಿಕ ಒಡನಾಟದ ದಿನಗಳನ್ನು ಸ್ಮರಿಸಿ, ಚುಕ್ಕಿಸಂಕುಲದ ಆರಂಭದ ದಿನಗಳ ಚಟುವಟಿಕೆಗಳನ್ನು ಮೆಲುಕು ಹಾಕಿದರು. ಚಂದ್ರಶೇಖರ ರಾವ್‌ ಅವರ ಒಂದು ಹರಟೆ ಬರಹವನ್ನು ಪ್ರಸ್ತುತ ಪಡಿಸಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಚಿತ್ರ-ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.