ಜಿಎಸ್‌ಬಿ ಸಭಾ ಕುರ್ಲಾ ಬಾಲಾಜಿ ಮಂದಿರದಲ್ಲಿ ಗಣೇಶೋತ್ಸವ ಸಂಭ್ರಮ


Team Udayavani, Sep 7, 2018, 3:47 PM IST

1-aa.jpg

ಮುಂಬಯಿ: ಸುವರ್ಣ ಗಣೇಶೋತ್ಸವ ಸಂಭ್ರಮದಲ್ಲಿರುವ ಜಿಎಸ್‌ಬಿ ಸಭಾ ಕೆಸಿಜಿ ಕುರ್ಲಾ ಇದರ ಬಾಲಾಜಿ ಮಂದಿರದಲ್ಲಿ ಗಣೇಶೋತ್ಸವ ಸಂಭ್ರಮವು ಸೆ. 13 ರಿಂದ ಸೆ. 17 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಕಳೆದ ಒಂದು ವರ್ಷದಿಂದ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷಪೂರ್ತಿ ಭಜನೆ, ಹರಿಕಥೆ, ನಾಟಕ, ಯಕ್ಷಗಾನ, ಭಕ್ತಿ ಸಂಗೀತ ವೈಭವ, ಶಾಸ್ತಿÅàಯ ಸಂಗೀತ ಮತ್ತು ನೃತ್ಯ, ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಬಾಲಾಜಿ ಮಂದಿರದಲ್ಲಿ ಆಯೋಜಿಸಿ ಸುವರ್ಣ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲಾಗಿದ್ದು ಇದರ ಸಮಾರೋಪವಾಗಿ ಗಣೇಶೋತ್ಸವವು ನೆರವೇರಲಿದೆ. ಬಾಲಾಜಿ ಮಂದಿರದ ಕಾರ್ಯಾಧ್ಯಕ್ಷ ಗಣೇಶ್‌ ಕಾಮತ್‌, ಸುವರ್ಣ ಗಣೇಶೋತ್ಸವ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿವೇಕ್‌ ಭಂಡಾರಿ, ಜನಾರ್ದನ ಭಟ್‌, ಭಗೀರಥ ಶಾನ್‌ಭಾಗ್‌, ವಿನಾಯಕ ಬಾಳಿಗಾ, ಗಣೇಶ್‌ ಮಲ್ಯ, ಗಣೇಶ್‌ ಪೈ, ಆರ್‌. ಎಂ. ಬಾಳಿಗ, ಪಿ. ಆರ್‌. ಕಾಮತ್‌, ಗಜಾನನ, ವೇದಮೂರ್ತಿ ತ್ರಿವಿಕ್ರಮ ಆಚಾರ್ಯ ಹಾಗೂ ಇನ್ನಿತರ ಸಮಿತಿಯ ಸದಸ್ಯರ ನೆರವಿನಿಂದ ಸುವರ್ಣ ಮಹೋತ್ಸವ ಗಣೇಶೋತ್ಸವಕ್ಕೆ ಪೂರ್ವಸಿದ್ಧತಾ ಕ್ರಮಗಳು ಭರದಿಂದ ನಡೆಯುತ್ತಿದೆ.

ವರ್ಷದುದ್ದಕ್ಕೂ ಸಾರಸ್ವತ ಸಮಾಜದ ನೆಲೆಬೀಡಾದ ಗೋವಾ ಪ್ರವಾಸ, ವೈದ್ಯಕೀಯ ಶಿಬಿರ, ಸಂಧ್ಯಾವಂದನೆ ಶಿಬಿರ, ಪ್ರತಿಭಾ ಪುರಸ್ಕಾರ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಿಎಸ್‌ಬಿ ಸಮಾಜದ ಗುರುವರ್ಯರಾದ ಸಂಸ್ಥಾನ ಕವಳೆ ಗೋಕರ್ಣ ಪರ್ಥಗಾಳಿ ಹಾಗೂ ಕಾಶೀ ಮಠಾಧೀಶರ ದಿವ್ಯ ಅನುಗ್ರಹದೊಂದಿಗೆ ಪ್ರಸ್ತುತ ಐದು ದಿನಗಳ ಗಣೇಶೋತ್ಸವವನ್ನು ಆಚರಿಸಲು ಮುಂದಾಗಲಾಗಿದೆ. ಉತ್ಸವಕ್ಕೆ ಪೂರವಾಗಿ ಬಾಲಾಜಿ ಮಂದಿರ ಕುರ್ಲಾ ಹಾಗೂ ಪರಿಸರದ ವಾಸ್ತುವನ್ನು ನವೀಕರಿಸಲಾಗಿದ್ದು, ವಿದ್ಯುತ್‌ ದೀಪಾಲಂಕಾರದಿಂದ ಶೃಂಗರಿಸಲಾಗಿದೆ.

ಮಹಾಗಣಪತಿಯ ಉತ್ಸವಕ್ಕೆ ಸುವರ್ಣ ಮಹೋತ್ಸವದ ನೆನಪಿಗಾಗಿ ನೂತನ ಚಿನ್ನಾಭರಣ ಗಳ ಶೃಂಖಲೆ ಯನ್ನು ಸಜ್ಜುಗೊಳಿಸಲಾಗು ತ್ತಿದೆ. ಈ ನಿಟ್ಟಿನಲ್ಲಿ ಸುವರ್ಣ ಕವಚ, ಮಂಗಳ ಸೂತ್ರ, ಧಾರೀಮಣಿಯನ್ನು ಈಗಾಗಲೇ ಸಂಸ್ಥಾನ ಗುರುವರ್ಯ ಮಠಾಧೀಶ ಹಾಗೂ ಕಾಶೀ ಮಠಾಧೀಶರ ಹಸ್ತದಿಂದ ಬಾಲಾಜಿ ದೇವರ ಸನ್ನಿಧಿಯಲ್ಲಿರುವ ಶ್ರೀದೇವಿ- ಭೂದೇವಿಗೆ ಸಮರ್ಪಿಸಲಾಗಿದೆ.

ಐದು ದಿನಗಳ ಕಾಲ ನಡೆಯಲಿರುವ ಸುವರ್ಣ ಮಹೋತ್ಸವ ಗಣೇಶೋತ್ಸವ ದಲ್ಲಿ ದಿನಂಪ್ರತಿ ವಿಶೇಷ ಸೇವೆ, ಗಣಹೋಮ, ಮೂಢ ಗಣಪತಿ ಯಾಗ, ವಿಶೇಷ ಪೂಜಾ ಸೇವೆ, ಮಹಾಮೂಢಗಣಪತಿ, ದುರ್ವಾ ರ್ಚನೆ ಸೇವೆ ಇನ್ನಿತರ ಸೇವೆಗಳನ್ನು ಆಯೋಜಿಸಲಾಗಿದೆ. ಅಲ್ಲದೆ ಭಕ್ತಾದಿಗಳಿಗೆ ತುಲಾಭಾರ ಸೇವೆ, ಮಧ್ಯಾಹ್ನ ಪೂಜೆ, ಮಹಾಮಂಗಳಾರತಿ ನಡೆಯಲಿದೆ, ಸೆ. 17 ರಂದು ಸಂಜೆ ವಿಸರ್ಜನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಭಕ್ತರು ಪಾಲ್ಗೊಂಡು  ಉತ್ಸವದ ಯಶಸ್ಸಿಗೆ ಸಹಕರಿಸುವಂತೆ ಪ್ರಕಟನೆ ತಿಳಿಸಿದೆ.
 

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.