ಘನ್ಸೋಲಿ ಮೂಕಾಂಬಿಕಾ ಮಂದಿರದಲ್ಲಿ ಸಾಧಕರಿಗೆ ಸಮ್ಮಾನ
Team Udayavani, Jul 11, 2019, 3:43 PM IST
ನವಿಮುಂಬಯಿ: ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳದ ವತಿಯಿಂದ 16ನೇ ವಾರ್ಷಿಕ ಉಚಿತ ಪುಸ್ತಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು. 7ರಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ನಡೆಯಿತು.
ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಚಲನಚಿತ್ರ, ರಂಗನಟ ಭೋಜರಾಜ್ ವಾಮಂಜೂರ್ ಮತ್ತು ಮಂಗಳೂರು ಮಹಾ
ನಗರ ಪಾಲಿಕೆಯ ನಗರ ಸೇವಕಿ ಹೇಮಲತಾ ರಾಘು ಸಾಲ್ಯಾನ್ ಅವರನ್ನು ದೇವಾಲಯದ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು.
ಅತಿಥಿಗಳಾಗಿ ಮಂಡಳದ ಅಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ,
ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್. ಶೆಟ್ಟಿ, ಆನಂದ ಆರ್ಟ್ಸ್ನ ಶೇಖರ್ ಶೆಟ್ಟಿ ಮಾಳ, ಶ್ರೀ ದೇವಿ ಕ್ಯಾಟರರ್ನ ಅಶೋಕ್ ಶೆಟ್ಟಿ, ಶ್ರೀದೇವಿ ಹಾಸ್ಪಿಟಾಲಿಟಿಯ ರಾಜೀವ್ ಶೆಟ್ಟಿ, ನಗರ ಸೇವಕಿ ಉಷಾ ತಾಯಿ ಪಾಟೀಲ್, ಉದ್ಯಮಿ ದೇವರಾಜ್ ಎಸ್. ದುಬೆ, ಮಂಡಳದ ಉಪಾಧ್ಯಕ್ಷ ದೆಪ್ಪುಣಿ ಗುತ್ತು ಚಂದ್ರಹಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಹರೀಶ್ ಶೆಟ್ಟಿ ಪಡುಬಿದ್ರೆ, ಜತೆ ಕೋಶಾಧಿಕಾರಿ ರತ್ನಾ ಟಿ. ಗೌಡ, ಸದಸ್ಯರಾದ ಹರೀಶ್ ಶೆಟ್ಟಿ ಕುರ್ಕಾಲ್, ತಾಳಿಪಾಡಿಗುತ್ತು ಭಾಸ್ಕರ್ ಎಂ. ಶೆಟ್ಟಿ, ಸತೀಶ್ ಎಸ್. ಪೂಜಾರಿ, ಪದ್ಮನಾಭ ಸಿ. ಶೆಟ್ಟಿ, ಉಪ ಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ್ ಕೆ. ಶೆಟ್ಟಿ, ಮಹಿಳಾ ಮಂಡಳಿಯ ಕಾರ್ಯಾಧ್ಯಕ್ಷೆ ವೀಣಾ ಸಿ. ಕರ್ಕೇರ ಅವರು ಉಪಸ್ಥಿತರಿದ್ದರು.
ಮಂಡಳದ ಅಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ ಅವರು ಅತಿಥಿ
ಗಳನ್ನು ಸ್ವಾಗತಿಸಿದರು. ಮಂಡಳದ ಉಪಾಧ್ಯಕ್ಷ ಸುರೇಶ್ ಎಸ್. ಕೋಟ್ಯಾನ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಹರೀಶ್ ಶೆಟ್ಟಿ ಪಡುಬಿದ್ರೆ ವಿದ್ಯಾರ್ಥಿಗಳ ಯಾದಿಯನ್ನು ಓದಿ ವಂದಿಸಿದರು. ಕೊನೆಯಲ್ಲಿ ಅನ್ನಸಂತರ್ಪಣೆ ನಡೆಯಿತು. ಶ್ರೀ ಸಂತೋಷಿ ಮಾತಾ ದೇವಾಲಯ ಟ್ರಸ್ಟ್, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆಯ ಸದಸ್ಯರು, ಉಪಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು