ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ: ಕ್ರಿಕೆಟ್‌, ಹಗ್ಗಜಗ್ಗಾಟ 


Team Udayavani, Oct 31, 2018, 5:19 PM IST

554552.jpg

ನವಿಮುಂಬಯಿ: ಕ್ರೀಡೆಯಿಂದ ನಮ್ಮ ಶಾರೀರಿಕ ಕ್ಷಮತೆ ಹೆಚ್ಚುವುದರಿಂದ ಕ್ರೀಡಾಮನೋಭಾವ ಬೆಳೆಯುತ್ತದೆ. ಹಿಂದಿನ ಕಾಲದಲ್ಲಿ ದೈನಂದಿನ ಕೆಲಸ ಕಾರ್ಯಗಳಿಗೆ ನಮ್ಮ ಆರೋಗ್ಯಕ್ಕೆ ವ್ಯಾಯಾಮ ನೀಡುತ್ತಿದ್ದವು. ಆದರೆ ಇಂದಿನ ಆಧುನಿಕ ಯುಗದಲ್ಲಿ ನಮಗೆ ಶಾರೀರಿಕ ವ್ಯಾಯಾಮವು ದೊರೆಯಲು ನಾವು ಕ್ರೀಡೆ ಹಾಗೂ ಇತರ ವಿಧಾನಗಳನ್ನು ಅನುಸರಿಸಬೇಕಾಗುತ್ತದೆ. ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಇಂತಹ ಕ್ರೀಡೆಗಳನ್ನು ಆಯೋಜಿಸುವುದರಿಂದ ಯುವ ಜನರನ್ನು ಒಂದುಗೂಡಿಸುವ ಕೆಲಸ ಅಭಿನಂದ ನೀಯವಾಗಿದೆ ಎಂದು ಸ್ಥಳೀಯ ನೆರೂಲ್‌ ಶ್ರೀ ಶನೀಶ್ವರ  ಮಂದಿರದ ಅಧ್ಯಕ್ಷ, ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಅವರು  ನುಡಿದರು.

ಅ.28 ರಂದು ಘನ್ಸೋಲಿ ಮೂಕಾಂಬಿಕಾ ಮಂದಿರದಲ್ಲಿ ಮೂಕಾಂಬಿಕಾ ದೇವಾಲಯದ ಉಪಸಮಿತಿ ಆಯೋಜಿಸಿದ್ದ ಮೂಕಾಂಬಿಕಾ ಟ್ರೋಫಿ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿ ತರಿದ್ದು ಮಾತನಾಡಿದ ಅವರು, ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಬಹಳ ಮುಖ್ಯ ವಾಗುತ್ತದೆ ಎಂದು ನುಡಿದು ವಿಜೇತ ತಂಡಗಳನ್ನು ಅಭಿನಂದಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಮಾತನಾಡಿ, ಶ್ರೀ ಕ್ಷೇತ್ರದ ಉಪಸಮಿತಿಯ ಯುವಕರು ಕಠಿಣ ಪರಿಶ್ರಮದಿಂದ ಇಂದಿನ ಕ್ರೀಡಾಕೂಟವನ್ನು ಆಯೋಜಿಸಿ ಯಶಸ್ವಿಯಾಗಿದ್ದಾರೆ. ಅವರ ಕಾರ್ಯ ನಿಜವಾಗಿಯೂ ಅಭಿನಂದನೀಯವಾಗಿದೆ. ಶ್ರೀ ಕ್ಷೇತ್ರದಲ್ಲಿ ನಡೆರುವ ಕಾರ್ಯಗಳಿಗೆ ಇದು ಪ್ರೇರಣೆ ಯಾಗಿದೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಯುವ ಜನರು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಇಂತಹ ಕ್ರೀಡೋತ್ಸವಗಳು ನಮ್ಮನ್ನು ಜಾತಿ, ಮತ, ಧರ್ಮವನ್ನು ಮರೆತು ಒಂದುಗೂಡಿಸುವ ಕಾರ್ಯವನ್ನು ಮಾಡುತ್ತದೆ. ಇಂತಹ ಕಾರ್ಯಕ್ರಮಗಳಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ಅತಿಥಿಯಾಗಿ ಆಗಮಿಸಿದ ಭಾಂಡೂಪ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ದಕ್ಷಿಣ ಭಾರತೀಯ ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಇವರು ಮಾತನಾಡಿ, ಕ್ಷೇತ್ರದ ತುಳು-ಕನ್ನಡಿಗರು ಸಂಘಟಿತರಾಗಿ ಇಂತಹ ಕಾರ್ಯಕ್ರಮವನ್ನು ನೋಡುವಾಗ ಸಂತೋಷವಾಗುತ್ತಿದೆ. ನಾವು ಸಂಘಟಿತರಾದಾಗ ನಮ್ಮ ಶಕ್ತಿ ಹೆಚ್ಚುತ್ತದೆ. ಕ್ರೀಡೆಯಿಂದಾಗಿ ಇಲ್ಲಿ ಯುವ ಜನತೆ ಒಟ್ಟು ಸೇರುತ್ತಾರೆ. ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ನುಡಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಶ್ರೀ ಮೂಕಾಂಬಿಕಾ ಮಂದಿರದ ಉಪಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು, ಉದ್ಯಮಿ ಸತೀಶ್‌ ಆರ್‌. ಶೆಟ್ಟಿ, ಶ್ರೀ ಗಣೇಶೋತ್ಸವ ಸಮಿತಿ ಅಲೆವೂರು ಅಧ್ಯಕ್ಷ ಉಮೇಶ್‌ ಜಿ. ಶೆಟ್ಟಿ, ಉದ್ಯಮಿಗಳಾದ  ಮೋಹನ್‌ ಮಜ್ಜಾರ್‌, ಪ್ರಮೋದ್‌ ಕರ್ಕೇರ, ಉದ್ಯಮಿ, ರಾಜಕೀಯ ನೇತಾರ ಜಯಪ್ರಕಾಶ್‌ ಶೆಟ್ಟಿ, ಉದ್ಯಮಿ ಗಿರೀಶ್‌ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ.  ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕ್ಷೇತ್ರದ ಕಾರ್ಯದರ್ಶಿ ಸುರೇಶ್‌ ಕೋಟ್ಯಾನ್‌ ಕಾರ್ಯಕ್ರಮ ನಿರ್ವಹಿಸಿದರು. ಶ್ರೀ ಮೂಕಾಂಬಿಕಾ ಚಾರಿಟೇಬಲ್‌ ಟ್ರಸ್ಟ್‌ನ ಕಾರ್ಯದರ್ಶಿ ಹರೀಶ್‌ ಶೆಟ್ಟಿ ಪಡುಬಿದ್ರೆ ವಿಜೇತ ತಂಡಗಳ ಹೆಸರು ಘೋಷಿಸಿದರು. ಉತ್ತಮ ಎಸೆತಗಾರರಾಗಿ ಸಂಜಯ್‌, ಉತ್ತಮ ದಾಂಡಿಗರಾಗಿ ವಿನೀತ್‌, ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ನಿಕಿಲ್‌ ಹಾಗೂ ಸರಣಿ ಶ್ರೇಷ್ಟ ಪುರಸ್ಕಾರವನ್ನು ಸಂಕೇತ್‌ ಅವರು ಪಡೆದುಕೊಂಡರು. ಸಮಾರಂಭದಲ್ಲಿ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಉದ್ಯಮಿ ಸತೀಶ್‌ ಶೆಟ್ಟಿ ದಂಪತಿ, ಉಪಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ್‌ ಕೆ. ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. 

ಬಾಕ್ಸ್‌ ಕ್ರಿಕೆಟ್‌ನಲ್ಲಿ ಸಾನ್ವಿ ಸ್ಟಾರ್‌ ಪ್ರಥಮ, ಶ್ರೀ ಗಣೇಶ್‌ ಎ. ತಂಡ ದ್ವಿತೀಯ ಬಹುಮಾನ ಪಡೆಯಿತು. ಮಹಿಳೆಯರ ಹಗ್ಗಜಗ್ಗಾಟ ವಿಭಾಗದಲ್ಲಿ ಟೀಮ್‌ ರುದ್ರ ಭಾಂಡೂಪ್‌ ತಂಡ ಪ್ರಥಮ, ಬಂಟ್ಸ್‌ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿ ದ್ವಿತೀಯ, ಪುರುಷರ ವಿಭಾಗದ ಹಗ್ಗಜಗ್ಗಾಟದಲ್ಲಿ ಬಂಟರ ಸಂಘ ಮುಂಬಯಿ ಯುವ ವಿಭಾಗ ಪ್ರಥಮ, ದೇವಾಡಿಗ ಜವನೆರ್‌ ದ್ವಿತೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.