ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದಲ್ಲಿ ವಾರ್ಷಿಕ ಮಹೋತ್ಸವ
Team Udayavani, Feb 28, 2019, 1:40 AM IST
ನವಿ ಮುಂಬಯಿ: ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ 16ನೇ ವಾರ್ಷಿಕ ಪ್ರತಿಷ್ಠಾಪನಾ ವಾರ್ಷಿಕ ಮಹೋತ್ಸವದ ಅಂಗವಾಗಿ ಫೆ. 27 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ನಡೆದವು.
ಸೂರ್ಯೋದಯಕ್ಕೆ ಕವಾಟ ಉದ್ಘಾಟನೆ, ತೈಲಾಭ್ಯಂಗ, ಪಂಚಾಮೃತ ಅಭಿಷೇಕ, ದೇವಿಗೆ 49 ಕಲಶಾಭಿಷೇಕ, ಸಹಸ್ರ ನಾಮಾರ್ಚನೆ ಪೂರ್ವಕ ಮಹಾಪೂಜೆ, ಉತ್ಸವ ಬಲಿ, ಪಲ್ಲಪೂಜೆ, ಮಧ್ಯಾಹ್ನ 1ರಿಂದ ಮಹಾ ಅನ್ನಸಂತರ್ಪಣೆ, ಸಂಜೆ 5 ರಿಂದ ಸಂಕೀರ್ತನೆ, ಮಹಾಪೂಜೆ, ಮಹಾರಂಗಪೂಜೆ, ಉತ್ಸವ ಬಲಿ ಕಟ್ಟೆ ಪೂಜೆ, ಅವಭೃತ ಸ್ನಾನ, ಜಲಕದ ಬಲಿ, ಅನ್ನಪ್ರಸಾದ ನಡೆಯಿತು. ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಶ್ರೀ ಕ್ಷೇತ್ರದ ತಂತ್ರಿವರ್ಯರಾದ ವಿದ್ವಾನ್ ರಾಮಚಂದ್ರ ಬಾಯರಿ ಕಾರ್ಕಳ ಇವರ ನೇತೃತ್ವದಲ್ಲಿ ಮಂದಿರದ ಪ್ರಧಾನ ಅರ್ಚಕ ಗುರುಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ಹರೀಶ್ ತಂತ್ರಿ, ಪ್ರಸನ್ನ ಭಟ್, ಅಶೋಕ್ ಭಟ್, ರಾಜೇಶ್ ಭಟ್, ರಾಮಕೃಷ್ಣ ಭಟ್ ಮೊದಲಾದವರ ಸಹಕಾರದೊಂದಿಗೆ ವಿವಿಧ ಪೂಜಾಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಉತ್ಸವ ಬಲಿಯಲ್ಲಿ ಕುಂಠಾಡಿ ಸುರೇಶ್ ಭಟ್, ಚೆಂಡೆಯಲ್ಲಿ ತುಕಾರಾಮ್ ದೇವಾಡಿಗ, ರತ್ನಾಕರ ಪೂಜಾರಿ ಮತ್ತು ಬಳಗ ಹಾಗೂ ವಾದ್ಯದಲ್ಲಿ ದಿನೇಶ್ ಕೋಟ್ಯಾನ್ ತಂಡದವರು ಸಹಕರಿಸಿದರು.
ಫೆ. 26ರಂದು ಬೆಳಗ್ಗೆ 7ರಿಂದ ಶ್ರೀ ದೇವಿಗೆ ನವಕ ಪ್ರಧಾನ ಕಲಶಾಭಿಷೇಕ, ಗಣಪತಿ ದೇವರಿಗೆ ನವಕ ಪ್ರಧಾನ, ನಾಗದೇವರ ಸನ್ನಿಧಿಯಲ್ಲಿ ಅಶ್ಲೇಷ ಬಲಿ, ಮಹಾಪೂಜೆ, ಅನ್ನದಾನ, ಅಪರಾಹ್ನ 4 ರಿಂದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಶೀಲಾ ದೀದಿ ಇವರಿಂದ ಭಕ್ತಿ ಪ್ರವಚನ, ಸಂಜೆ 4.30ರಿಂದ ಅರಸಿನ ಕುಂಕುಮ ಕಾರ್ಯಕ್ರಮವು ಶ್ರೀ ಮೂಕಾಂಬಿಕಾ ಮಹಿಳಾ ಮಂಡಳಿಯ ವತಿಯಿಂದ ಜರಗಿತು. ಸಂಜೆ 5ರಿಂದ ಗಣಪತಿ ದೇವರಿಗೆ ರಂಗಪೂಜೆ, ಮಹಾಪೂಜೆ, ಉತ್ಸವ ಬಲಿ, ಅನ್ನಪ್ರಸಾದ, ಮಹಾಭೂತ ಬಲಿ, ಕವಾಟ ಬಂಧನ ಇನ್ನಿತರ ಪೂಜೆಗಳು ನಡೆದವು.
ಶ್ರೀ ಕ್ಷೇತ್ರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಸಮಿತಿಯ ಸರ್ವ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಯ ಸದಸ್ಯರು ಹಾಗೂ ಮಹಿಳಾ ಮಂಡಳಿಯ ಸದಸ್ಯೆಯರು ಪಾಲ್ಗೊಂಡು ಸಹಕರಿಸಿದರು.
ಫೆ. 28ರಂದು ಬೆಳಗ್ಗೆ 6ರಿಂದ ಮಹಾಸಂಪ್ರೋಕ್ಷಣೆ, ಚಂಡಿಕಾ ಯಾಗ, ಮಧ್ಯಾಹ್ನ ಮಹಾಪೂಜೆ, ಮಹಾಮಂತ್ರಾಕ್ಷತೆ, ಅನ್ನಪ್ರಸಾದ, ಅಪರಾಹ್ನ 4ರಿಂದ ಕೃತಿ ದಿನೇಶ್ ಚಡಗ ಇವರಿಂದ ಭರತನಾಟ್ಯ ಕಾರ್ಯಕ್ರಮ, ಅಪರಾಹ್ನ 4.30ರಿಂದ ಧಾರ್ಮಿಕ ಸಭೆ, ಸಂಜೆ 5.30ರಿಂದ ಬಾಲಚಂದ್ರ ರೈ ದಂಪತಿ ಹೊಟೇಲ್ ವರುಣ್ ಇವರ ಸೇವಾರ್ಥಕವಾಗಿ ಶ್ರೀ ಗೀತಾಂಬಿಕಾ ಯಕ್ಷಗಾನ ಕಲಾಮಂಡಳಿಯ ಕಲಾವಿದರಿಂದ ಶ್ರೀ ದೇವಿ ಮಹಾತೆ¾ ಯಕ್ಷಗಾನ ಬಯಲಾಟ ನಡೆಯಲಿದೆ. ಆನಂತರ ಅನ್ನಪ್ರಸಾದ ವಿತರಣೆಯಾಗಲಿದೆ.
ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ರಾಮಚಂದ್ರ ಬಾಯರಿ ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ದೇವಾಲಯದ ನೂತನ ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಅಣ್ಣಾವರ ಶಂಕರ ಶೆಟ್ಟಿ, ನೆರೂಲ್ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ ಧರ್ಮದರ್ಶಿ ರಮೇಶ್ ಎಂ. ಪೂಜಾರಿ, ಐರೋಲಿಯ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಕೃಷ್ಣ ವಿ. ಶೆಟ್ಟಿ, ನೆರೂಲ್ ಶ್ರೀ ಗಣಪತಿ, ದುರ್ಗಾದೇವಿ ಅಯ್ಯಪ್ಪ ಮಂದಿರದ ಉಪಾಧ್ಯಕ್ಷ ಸುರೇಶ್ ಜಿ. ಶೆಟ್ಟಿ, ನೆರೂಲ್ ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್ನ ಉಪ ಕಾರ್ಯಾಧ್ಯಕ್ಷ ಪ್ರಭಾಕರ ಹೆಗ್ಡೆ, ಉದ್ಯಮಿ ಪದ್ಮಾ ಭಾಸ್ಕರ್ ಶೆಟ್ಟಿ, ದೇವಾಲಯ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ, ಉಪಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ್ ಕೆ. ಶೆಟ್ಟಿ, ಮಹಿಳಾ ಮಂಡಳಿಯ ಕಾರ್ಯಾಧ್ಯಕ್ಷೆ ವೀಣಾ ಸಿ. ಕರ್ಕೇರ ಅವರು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಸದಸ್ಯರಾದ ಶ್ರೀಧರ ಬಿ. ಪೂಜಾರಿ ಮತ್ತು ಮಹಾಬಲ ಟಿ. ಶೆಟ್ಟಿ ದಂಪತಿಗಳನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.
ಚಿತ್ರ-ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ