ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ: ತುಳಸಿ ಪೂಜೆ
Team Udayavani, Nov 3, 2017, 1:54 PM IST
ನವಿಮುಂಬಯಿ: ಶ್ರೀ ಕ್ಷೇತ್ರ ಘನ್ಸೋಲಿಯ ಶ್ರೀ ಮೂಕಾಂಬಿಕಾ ಮಂದಿರದಲ್ಲಿ ತುಳಸಿ ಪೂಜೆ ಉತ್ಸವವು ನ. 1 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಕಾರ್ತಿಕ ಮಾಸದ ದ್ವಾದಶಿಯ ಪವಿತ್ರ ದಿನವಾದ ಬುಧವಾರ ಸಂಜೆ ಶ್ರೀ ಮೂಕಾಂಬಿಕಾ ಭಜನ ಮಂಡಳಿಯವರಿಂದ ಭಜನೆ, ವಿಶೇಷ ಪೂಜೆ, ರಾತ್ರಿ ಮಹಾಪೂಜೆ, ತುಳಸಿ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಿತು. ಆನಂತರ ಉದ್ಯಮಿ ಚಿದಾನಂದ ಶೆಟ್ಟಿ ಅವರ ಸೇವಾರ್ಥವಾಗಿ ಅನ್ನಸಂತರ್ಪಣೆ ನಡೆಯಿತು.
ತುಳಸಿ ಪೂಜೆಯನ್ನು ದೇವಾಲಯದ ಪ್ರಧಾನ ಅರ್ಚಕ ಗುರುಪ್ರಸಾದ್ ಭಟ್ ಅವರು ನೆರವೇರಿಸಿದರು. ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಮಂದಿರದ ಉಪಾಧ್ಯಕ್ಷರಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಸಮಿತಿಯ ಕಾರ್ಯಾಧ್ಯಕ್ಷರಾದ ರಾಘು ಆರ್. ಕೋಟ್ಯಾನ್, ಕುಟ್ಟಿ ಎ. ಕುಂದರ್, ವಿಶ್ವನಾಥ್ ಎಸ್. ಶೆಟ್ಟಿ, ಅಣ್ಣು ಎಂ. ಶೆಟ್ಟಿ, ಶ್ರೀಧರ ಬಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಶಕುಂತಳಾ ಎಸ್. ಶೆಟ್ಟಿ, ಸಮಿತಿಯ ಇತರ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯೆಯರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ