ಘನ್ಸೋಲಿ:ಯಕ್ಷಗಾನ ಮತ್ತು ಸಮ್ಮಾನ ಕಾರ್ಯಕ್ರಮ


Team Udayavani, Nov 2, 2017, 2:49 PM IST

31-Mum05a.jpg

ನವಿ ಮುಂಬಯಿ: ಯಕ್ಷತುಳು ಪರ್ಬ ಸಮಿತಿ ಮಂಗಳೂರು ಇವರ ಆಶ್ರಯದಲ್ಲಿ ಉದ್ಯಮಿಗಳಾದ ಕೌಡೂರು ಕೋರೊªಟ್ಟು ಎಳಿಯಾಳ ಗುಣಕರ ಶೆಟ್ಟಿ ಮತ್ತು ಧನಂಜಯ ಕೋಟ್ಯಾನ್‌ ಅವರ ಪ್ರಾಯೋಜಕತ್ವದಲ್ಲಿ ಗೆಜ್ಜೆದ ಪೂಜೆ ಯಕ್ಷಗಾನ ಪ್ರದರ್ಶನ ಹಾಗೂ ಸಾಧಕ ಕಲಾವಿದರಿಗೆ ಸಮ್ಮಾನ ಕಾರ್ಯಕ್ರಮವು ಅ. 28ರಂದು ಸಂಜೆ ಶ್ರೀ ಕ್ಷೇತ್ರ ಘನ್ಸೋಲಿಯ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೆರೂಲ್‌ ಶ್ರೀ ಶನೀಶ್ವರ ಮಂದಿರದ ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ ಅವರು, ಯಕ್ಷಗಾನವು ನಮ್ಮ ಸಂಸ್ಕೃತಿ, ಭಾಷೆ, ಸಂಸ್ಕಾರದ ಬೆಳವಣಿಗೆಗೆ ಸಹಕಾರಿಯಾಗಿದೆ. ಆದ್ದರಿಂದ ಈ ಕಲೆಯನ್ನು ಪ್ರೋತ್ಸಾಹಿಸುವುದಲ್ಲದೆ ಸಹಕರಿಸುವ  ಜವಾಬ್ದಾರಿ ನಮ್ಮ ಮೇಲಿದೆ. ಘನ್ಸೋಲಿ ಮೂಕಾಂಬಿಕಾ ಕ್ಷೇತ್ರದಲ್ಲಿ ಸಭಾಗೃಹವೊಂದರ ಆವಶ್ಯಕತೆಯಿದ್ದು, ಇದರ ನಿರ್ಮಾಣದ ಯೋಜನೆಯು ಸಾಕಾರಗೊಳ್ಳಲು ಎಲ್ಲರ ಸಹಕಾರದ ಅಗತ್ಯವಿದೆ. ಇಂತಹ ಕಲೆಯ ಪ್ರದರ್ಶನಗಳಿಗೆ ಸಭಾಗೃಹದ ಅಗತ್ಯ ಬಹಳಷ್ಟಿದೆ. ಕಲೆ-ಕಲಾವಿದರನ್ನು ಪ್ರೋತ್ಸಾಹಿಸಿದಾಗ ಮಾತ್ರ ಕಲೆ ಉಳಿದು ಮುಂದಿನ ಪೀಳಿಗೆಯು ಅರಿಯಲು ಸಾಧ್ಯವಾಗುತ್ತದೆ ಎಂದರು.

ಇದೇ ಸಂದರ್ಭ ಪ್ರಸಂಗಕರ್ತ, ಕಲಾವಿದ ಡಿ. ಮನೋಹರ್‌ ಕುಮಾರ್‌ ಅವರನ್ನು ಗಣ್ಯರ ಸಮ್ಮುಖ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಅಲ್ಲದೆ ಸ್ತ್ರೀಪಾತ್ರಧಾರಿ ಅಕ್ಷಯ್‌ ಕುಮಾರ್‌ ಮಾರ್ನಾಡ್‌ ಹಾಗೂ ಯಕ್ಷಗಾನದ ಪ್ರಾಯೋಜಕರಾದ ಗುಣಕರ ಶೆಟ್ಟಿ ಕೌಡೂರು, ಧನಂಜಯ ಕೋಟ್ಯಾನ್‌, ಅನ್ನದಾನ ನೀಡಿ ಮನೋಹರ ಆರ್‌. ಕೆ. ಹಾಗೂ ನೃತ್ಯ ಪ್ರದರ್ಶನಗೈದ ದೀಪ್‌ ಭುಜಂಗ ಶೆಟ್ಟಿ, ದೀಪೇಶ್‌ ದಿನೇಶ್‌ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಮನೋಹರ್‌ ಕುಮಾರ್‌, ಕಲಾಮಾತೆಯ ಅನುಗ್ರಹ, ಪ್ರೇಕ್ಷಕರ, ಕಲಾ
ಪೋಷಕರ ಬೆಂಬಲ ಪ್ರೋತ್ಸಾಹ ಸಿಕ್ಕಾಗ ಮಾತ್ರ ಕಲಾವಿದರು ರಂಗದಲ್ಲಿ ಉತ್ತಮ ಕಲಾವಿದರಾಗಿ ಬೆಳೆಯಲು ಸಾಧ್ಯ.
ದೇವಿಯ ಅನುಗ್ರಹದಿಂದ ಈ ಸಮ್ಮಾನ ಲಭಿಸಿದೆ. ನಿಮ್ಮೆಲ್ಲರ 
ಪ್ರೀತಿ, ಅಭಿಮಾನ, ಗೌರವಕ್ಕೆ ಋಣಿಯಾಗಿದ್ದೇನೆ ಎಂದರು.

ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಮಾತನಾಡಿ, ಡಿ. ಮನೋಹರ್‌ ಕುಮಾರ್‌ ಅವರು ಕಲಾವಿದನಾಗಿ, ಪ್ರಸಂಗಕರ್ತನಾಗಿ ಕಲೆಯನ್ನು ಉಳಿಸಿ-ಬೆಳೆಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರಿಗೆ ದೇವಿಯ ಅನುಗ್ರಹ ಸದಾಯಿರಲಿ ಎಂದು ಹಾರೈಸಿದರು.

ನೆರೂಲ್‌ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ, ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಮಾತನಾಡಿ,  ತುಳು
ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನಗೊಂಡಾಗ ಮಕ್ಕಳು
ಹೆಚ್ಚಿನ ಆಸಕ್ತಿ ತೋರಲು ಸಾಧ್ಯವಿದೆ. ಈ ದೇವಿಯ
ಅನುಗ್ರಹದಿಂದ ಇಲ್ಲಿ ಹೆಚ್ಚಿನಯಕ್ಷಗಾನ ಪ್ರದರ್ಶನಗೊಳ್ಳುತ್ತಿ
ರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ ಅವರು ಮಾತನಾಡಿ, ತುಳು ಪ್ರಸಂಗಕ್ಕೆ ಎಷ್ಟೊಂದು ಬೇಡಿಕೆ ಇದೆ ಎಂಬುದಕ್ಕೆ ಗೆಜ್ಜೆದ ಪೂಜೆ ಪ್ರಸಂಗವೇ ಸಾಕ್ಷಿಯಾಗಿದೆ. ಊರಿನಲ್ಲಿ ನಡೆಯುವ ಪ್ರದರ್ಶನಗಳಲ್ಲೂ ಇಷ್ಟೊಂದು ಸಂಖ್ಯೆಯಲ್ಲಿ ಪ್ರೇಕ್ಷಕರು ಕಾಣ ಸಿಗುವುದಿಲ್ಲ. ನಾವೆಲ್ಲರೂ ಯಕ್ಷಗಾನವನ್ನು ಉಳಿಸಿ-ಬೆಳೆಸುವ ಪಣ ತೊಡಬೇಕು ಎಂದು ನುಡಿದರು.
ಅತಿಥಿಗಳಾಗಿ ಪಾಲ್ಗೊಂಡ ಸಿಬಿಡಿ-ಬೇಲಾಪುರ ಉದ್ಯಮಿ, ಸಮಾಜ ಸೇವಕ ರಮೇಶ್‌ ಶೆಟ್ಟಿ, ಕಲಾವಿದ ಭೋಜ ಬಂಗೇರ, ನೆರೂಲ್‌ ಶ್ರೀ ಶನೀಶ್ವರ ಮಂದಿರದ ಉಪಾಧ್ಯಕ್ಷ ಗೋಪಾಲ್‌ ವೈ. ಶೆಟ್ಟಿ, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಉಪಾಧ್ಯಕ್ಷ ನಂದಿಕೂರು ಜಗದೀಶ್‌ ಶೆಟ್ಟಿ ಅವರು ಮಾತನಾಡಿದರು.

ವೇದಿಕೆಯಲ್ಲಿ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಸಮನ್ವಯಕ ತಾಳಿಪಾಡಿಗುತ್ತು ಭಾಸ್ಕರ ಶೆಟ್ಟಿ, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ, ನೆರೂಲ್‌ ಹೊಟೇಲ್‌ ಉದ್ಯಮಿ ಸತೀಶ್‌ ಪೂಜಾರಿ, ಪೆರ್ಮುದೆ ಕೊಕ್ಕರಗುತ್ತು ಅರುಣ್‌ ಶೆಟ್ಟಿ, ಉದ್ಯಮಿ ವಿಶ್ವನಾಥ ಶೆಟ್ಟಿ, ಯಕ್ಷಗಾನ ಪ್ರಾಯೋಜಕರಾದ ಕೋರೊªಟ್ಟು ಎಳಿಯಾಳ ಕೌಡೂರು ಗುಣಕರ ಶೆಟ್ಟಿ, ಧನಂಜಯ ಕೋಟ್ಯಾನ್‌, ವಿಶ್ವನಾಥ ಶೆಟ್ಟಿ ಡೊಂಬಿವಲಿ, ಅನ್ನದಾನ ಪ್ರಾಯೋಜಕ ಮನೋಹರ್‌ ಆರ್‌. ಕೆ. ಮೊದಲಾದವರು ಉಪಸ್ಥಿತರಿದ್ದರು.

ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಂಘಟಕ ಪ್ರಕಾಶ್‌ ಎಂ. ಶೆಟ್ಟಿ ಸುರತ್ಕಲ್‌, ಪತ್ರಕರ್ತ ದೇವಿ ಪ್ರಸಾದ್‌ ರೈ ಸಹಕರಿಸಿದರು. ಪ್ರಾರಂಭದಲ್ಲಿ ಬಾಲಪ್ರತಿಭೆಗಳಾದ ರೀತ್‌ ಭುಜಂಗ ಶೆಟ್ಟಿ, ದೀಪೇಶ್‌ ದಿನೇಶ್‌ ಶೆಟ್ಟಿ ಇವರಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.