ಘಾಟ್‌ಕೋಪರ್‌ ಶ್ರೀ ಭವಾನಿ ಶನೀಶ್ವರ ದೇವಸ್ಥಾನ: ವಾರ್ಷಿಕ ಮಹಾಪೂಜೆ


Team Udayavani, Jan 24, 2021, 4:45 PM IST

Ghatkopar Shri Bhawani Saneeswara Temple

ಮುಂಬಯಿ: ಘಾಟ್‌ಕೋಪರ್‌ ಪಶ್ಚಿಮದ ಜಗದೂಶ ನಗರದ ರೈಫಲ್‌ ರೇಂಜ್‌, ಶಿಲ್ಪ ಬಿಲ್ಡಿಂಗ್‌ ಸಮೀಪದ, ಸಾರಂಗ್‌ ಚಾಲ್‌ ಇಲ್ಲಿನ ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿ ಸಂಚಾಲಕತ್ವದ ಶ್ರೀ ಭವಾನಿ ಶನೀಶ್ವರ ದೇವಸ್ಥಾನದಲ್ಲಿ 41ನೇ ವಾರ್ಷಿಕ ಮಹಾಪೂಜೆಯು ಡಿ. 16ರಂದು ಸರಳ ರೀತಿಯಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ಸ್ವಸ್ತಿ ಪುಣ್ಯಾಹ ವಾಚನ, ನಿತ್ಯಪೂಜೆ, ನವಕ ಕಲಶಪೂಜೆ, ಗಣಹೋಮ, ನವಗ್ರಹ ಶಾಂತಿ, ಕಲಶಾಭಿಷೇಕ, ಶ್ರೀ ಸತ್ಯನಾರಾಯಣ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಆಯೋಜಿಸಲಾಗಿತ್ತು. ಧಾರ್ಮಿಕ ವಿಧಿ-ವಿಧಾನಗಳನ್ನು ಪ್ರಧಾನ ಅರ್ಚಕ ರಮೇಶ್‌ ಶಾಂತಿ ಅವರು ನೆರವೇರಿಸಿದರು. ಸಹ ಅರ್ಚಕರಾದ ಶೇಖರ್‌ ಶಾಂತಿ, ಗಂಗಾಧರ ಕಲ್ಲಾಡಿ, ಸುದರ್ಶನ್‌ ಶಾಂತಿ, ಸಂಜೀವ ಶಾಂತಿ ಮೊದಲಾದವರು ಸಹಕರಿಸಿದರು.

ಸಮಿತಿಯ ಪ್ರಕಾಶ್‌ ಪೂಜಾರಿ ಮತ್ತು ಹೇಮಲತಾ ಪೂಜಾರಿ ದಂಪತಿ ಹಾಗೂ ಕೇಶವ ಸುವರ್ಣ ಕಿಲ್ಪಾಡಿ ಮತ್ತು ಗುಲಾಬಿ ಸುವರ್ಣ ದಂಪತಿ  ಸಂಜೆಯವರೆಗೆ ಶ್ರೀ ಶನಿಗ್ರಂಥ ಪಾರಾಯಣವು ಶ್ರೀ ಜೈ ಭವಾನಿ ಶನೀಶ್ವರ ಸಮಿತಿಯ ಸದಸ್ಯರಿಂದ ಹಾಗೂ ನಗರದ ವಿವಿಧೆಡೆಯ ಗ್ರಂಥ ವಾಚಕರ ಹಾಗೂ ಅರ್ಥದಾರಿಗಳ ಕೂಡುವಿಕೆಯಲ್ಲಿ ಜರಗಿತು.

ಇದನ್ನೂ ಓದಿ:ಬಿಎಸ್‌ವೈ-ಈಶ್ವರಪ್ಪ ರಾಜೀನಾಮೆ ನೀಡಲಿ

ಬಳಿಕ ಭಜನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್‌ ಪರ್ದೇಶಿ, ಉಪಾಧ್ಯಕ್ಷ ಸೋಮನಾಥ್‌ ಪೂಜಾರಿ, ಕಾರ್ಯದರ್ಶಿ ಪ್ರಕಾಶ್‌ ಪೂಜಾರಿ, ಜತೆ ಕಾರ್ಯದರ್ಶಿ ಪ್ರೇಮಾ ಕುಂದರ್‌, ಕೋಶಾಧಿಕಾರಿ ಸಂತೋಷ್‌ ಪಾವಸ್ಕರ್‌, ಜತೆ ಕೋಶಾಧಿಕಾರಿ ಅಮಯ್‌ ಮಯೇಕರ್‌, ಸಲಹೆಗಾರರಾದ ಶೇಖರ್‌ ಅಮೀನ್‌, ಬಪ್ಪನಾಡು ಕೂಸಪ್ಪ ಹಾಗೂ ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಕೋವಿಡ್‌ ಮಾರ್ಗಸೂಚಿಗಳಿಗೆ ಅನುಗುಣ ವಾಗಿ ಸರಳ ರೀತಿಯಲ್ಲಿ ಕಾರ್ಯಕ್ರಮ ನಡೆ ಯಿತು. ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಉದ್ಯಮಿಗಳು, ದಾನಿಗಳು, ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಗಣ್ಯರು, ತುಳು -ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಭಕ್ತಾದಿಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.