ಘೋಡ್‌ಬಂದರ್‌ ರೋಡ್‌ ಕನ್ನಡ ಅಸೋಸಿಯೇಶನ್‌ ವಾರ್ಷಿಕೋತ್ಸವ ಸಂಭ್ರಮ


Team Udayavani, Feb 13, 2018, 3:59 PM IST

1101mum06.jpg

ಮುಂಬಯಿ: ಸ್ತ್ರೀ  ಶಕ್ತಿ ಹಾಗೂ ಯುವ ಶಕ್ತಿಗಳನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಸಿಕೊಂಡಾಗ ಸಂಘಟನೆ ಯಾವ ರೀತಿಯಲ್ಲಿ ಬಲಿಷ್ಟವಾಗುತ್ತದೆ ಎಂಬುವುದಕ್ಕೆ ಇಲ್ಲಿ ಸೇರಿದ ಜನಸಮೂಹವೇ ಸಾಕ್ಷಿಯಾಗುತ್ತಿದೆ. ಕಠಿಣ ಶ್ರಮದ ತುಳು-ಕನ್ನಡಿಗರು ರಾಷ್ಟÅ ಕಂಡ ಅಪರೂಪದ ಸಮಾಜ ಸೇವಕರು. ಅವರ ಸಾಂಸ್ಕೃತಿಕ ಬದುಕಿನ ಮನೋಭಾವ ಮನುಕುಲದ ಶ್ರೇಯೋಭಿವೃದ್ಧಿಗೆ ಮುನ್ನುಡಿಯಾಗಿದೆ ಎಂದು ಥಾಣೆ ಮಹಾನಗರ ಪಾಲಿಕೆಯ ಮೇಯರ್‌ ಮೀನಾಕ್ಷೀ ಶಿಂಧೆ ನುಡಿದರು.

ಫೆ. 10 ರಂದು ಥಾಣೆ  ಪಶ್ಚಿಮದ ಹೀರಾನಂದಾನಿ ಮಿಡೋಸ್‌ನಲ್ಲಿರುವ ಡಾ| ಕಾಶೀನಾಥ್‌ ಗಾಣೇಕರ್‌ ಸಭಾಂಗಣದಲ್ಲಿ ನಡೆದ ಘೋಡ್‌ಬಂದರ್‌ ರೋಡ್‌  ಕನ್ನಡ ಅಸೋಸಿಯೇಶನ್‌ ಇದರ ವಾರ್ಷಿಕೋತ್ಸವ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಇವರು, ವಿವಿಧ ಸ್ಪರ್ಧೆಗಳ ಮೂಲಕ ಪ್ರತಿಭೆಗಳನ್ನು ಲೋಕಾರ್ಪಣೆಗೊಳಿಸುವ ಸಂಸ್ಥೆಯ ಸಾಧನೆ ಸ್ತುತ್ಯರ್ಹವಾಗಿದೆ. ಸಾಂಸ್ಕೃತಿಕ ಚಟುವಟಿಕೆಯೊಂದಿಗೆ ಭಾಷಾಭಿಮಾನ ವಿಜೃಂಭಿಸಲಿ ಎಂದು ಹೇಳಿದರು.

ಥಾಣೆ  ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ ಇವರು ಮಾತನಾಡಿ, ಸರ್ವವನ್ನು ಕನ್ನಡತನಕ್ಕೆ ಮೀಸಲಿಟ್ಟು, ಭಾಷೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ದಿ| ಪ್ರೊ| ಸೀತಾರಾಮ ಶೆಟ್ಟಿ ಇವರ ಹೆಸರಿನ ವೇದಿಕೆ ಅರ್ಥಪೂರ್ಣವಾಗಿದೆ. ಕನ್ನಡ ಸಂಘಗಳು ಜಾತಿಗಳ ಅಡ್ಡಗೋಡೆಗಳನ್ನು ಕೆಡವಿ ಸಮಾನ ಮನಸ್ಕರಾಗಿ ಬಾಳಬೇಕು ಎಂದು ನುಡಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅವರು ಮಾತನಾಡಿ, ಇಂದಿನ ಜನಾಂಗಕ್ಕೆ ಎಲ್ಲ ಅವಕಾಶಗಳನ್ನು ಕನ್ನಡ ಸಂಸ್ಥೆಗಳು ನೀಡುತ್ತಿವೆ. ಅದನ್ನು ಸದುಪಯೋಗಪಡಿಸಿಕೊಂಡು ಮುಂದುವರಿಯುವುದು ಯುವ ಪೀಳಿಗೆಯ ಜವಾಬ್ದಾರಿಯಾಗಿದೆ. ವಿಶಾಲವಾದ ಹವಾನಿಯಂತ್ರಿತ ವೇದಿಕೆಯಲ್ಲಿ ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರದರ್ಶನ ನೀಡುವ ತಾವು ಅದೃಷ್ಟವಂತರು ಎಂದರು.

ಥಾಣೆ ಬಂಟ್ಸ್‌ನ ಕೋಶಾಧಿಕಾರಿ ಭಾಸ್ಕರ್‌ ಎನ್‌. ಶೆಟ್ಟಿ ಮಾತನಾಡಿ, ಅತೀ ಪುರಾತನ ಸುಮಾರು 15 ಭಾಷೆಗಳಲ್ಲಿ ಕನ್ನಡವು ಒಂದಾಗಿದೆ. ವಿದ್ಯಾಸಂಸ್ಥೆ, ಐದು ಪ್ರಭಾವಿ ಬ್ಯಾಂಕ್‌, ತಾಂತ್ರಿಕ ಹಾಗೂ ವೈದ್ಯಕೀಯ ಕಾಲೇಜುಗಳು ಇತ್ಯಾದಿಗಳನ್ನು ದೇಶಕ್ಕೆ ನೀಡಿದವರಲ್ಲಿ ಕನ್ನಡಿಗರು ಮೊದಲಿಗರು. ಕೋಮುವಾದ ಮತೀಯ ಗಲಭೆಗಳಿಂದ ದೂರವಿದ್ದು, ಶಾಂತಿ, ಸಹಬಾಳ್ವೆಯಿಂದ ಬಾಳಬೇಕು ಎಂದರು.

ಸಮಾರಂಭದಲ್ಲಿ ಹಿರಿಯ ಸದಸ್ಯರಾದ ಉಪಾಧ್ಯಕ್ಷ ಗೋಪಾಲ್‌ ಶೆಟ್ಟಿ ಮತ್ತು ಘೋಡ್‌ಬಂದರ್‌ ರೋಡ್‌ ಕನ್ನಡ ಅಸೋಸಿಯೇಶನ್‌ ಭಜನ ಮಂಡಳಿಯ ಸದಸ್ಯರನ್ನು ಗಣ್ಯರು ಸಮ್ಮಾನಿಸಿ ಶುಭಹಾರೈಸಿದರು.

ಕೋಶಾಧಿಕಾರಿ ಜಯ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಜತೆ ಕೋಶಾಧಿಕಾರಿ ಚಂದ್ರಶೇಖರ ಶೆಟ್ಟಿ ವರದಿ ವಾಚಿಸಿದರು. ಪದಾಧಿಕಾರಿಗಳಾದ ರವಿ ಪೂಜಾರಿ, ಕರುಣಾಕರ ಶೆಟ್ಟಿ, ಸತೀಶ್‌ ಶೆಟ್ಟಿ, ಪ್ರಶಾಂತ್‌ ನಾಯಕ್‌, ಅಶೋಕ್‌ ಮೂಲ್ಯ, ಸದಾಶಿವ ಮೊಲಿ ಅತಿಥಿಗಳನ್ನು ಗೌರವಿಸಿದರು.

ಸ್ಮಿತಾ ಶೆಣೈ, ಸುಜಾತಾ ಗೌಡ, ವಂದನಾ ಶೆಟ್ಟಿ, ಸೀಮಾ ಶೆಟ್ಟಿ ಅವರು ಪರಿಚಯಿಸಿದರು. ಜತೆ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಬೆಳುವಾಯಿ, ಮಾಯಾ ಮನೋಜ್‌ ಕುಮಾರ್‌, ಶ್ರೀನಾಥ್‌ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರತಿಭಾ ಎ. ಶೆಟ್ಟಿ ಅವರು ವಂದಿಸಿದರು.

ವೇದಿಕೆಯಲ್ಲಿ ಕಲಾಪೋಷಕ ಉದ್ಯಮಿ ಲಕ್ಷ್ಮಣ್‌ ಮಣಿಯಾಣಿ, ಕಾರ್ಯದರ್ಶಿ ಹರೀಶ್‌ ಡಿ. ಸಾಲ್ಯಾನ್‌ ಮೊದಲಾದವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿವಿಧ ತುಳು-ಕನ್ನಡಪರ ಸಂಘಟನೆಗಳಿಗೆ ಸಮೂಹ ನೃತ್ಯ ಸ್ಪರ್ಧೆ, ಸಪ್ತಸ್ವರ ಕಲಾವಿದರಿಂದ ಯುಮುನ ದಾನೆ ನಮೂನೆ ತುಳು ನಾಟಕ ಪ್ರದರ್ಶನಗೊಂಡಿತು. ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಬಿಡುವಿನ ಸಮಯವನ್ನು ಸಂಘಟನೆಗೆ ಮೀಸಲಾಗಿಡಬೇಕು. ಜನರು ಗುರುತಿಸುವ ಸೇವಾ ಕಾರ್ಯ ನಮ್ಮದಾಗಬೇಕು. ಇಂದಿನ ಸ್ಪರ್ಧೆಯಲ್ಲಿ ಎಲ್ಲ ಮಕ್ಕಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಸಹಕರಿಸಿದ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ, ಮಹಿಳಾ ವಿಭಾಗದವರಿಗೆ, ಯುವ ವಿಭಾಗದವರಿಗೆ ಹೃದಯಾಂತರಾಳದ ಕೃತಜ್ಞತೆಗಳು. ನಾವೆಲ್ಲರು ಭವಿಷ್ಯದಲ್ಲೂ ಒಗ್ಗಟ್ಟಿನಿಂದ ಕನ್ನಡ ನಾಡು-ನುಡಿಯ ಅಭಿವೃದ್ಧಿಯಲ್ಲಿ ತೊಡಗೋಣ. ಅದಕ್ಕಾಗಿ ತುಳು-ಕನ್ನಡಿಗರ ಪ್ರೋತ್ಸಾಹ, ಸಹಕಾರ ಸದಾಯಿರಲಿ
ವಿಕ್ರಮಾನಂದ ಶೆಟ್ಟಿ
 (ಅಧ್ಯಕ್ಷರು : ಘೋಡ್‌ಬಂದರ್‌ ರೋಡ್‌ ಕನ್ನಡ ಅಸೋಸಿಯೇಶನ್‌).

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.