ಗೋಕುಲ ಸಯಾನ್‌ ವತಿಯಿಂದ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ


Team Udayavani, May 4, 2017, 5:04 PM IST

03-Mum05b.jpg

ಮುಂಬಯಿ: ಗೋಕುಲ ಸಯಾನ್‌ ಇದರ ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌ ಗೋಕುಲ ವತಿಯಿಂದ ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವವು ಬಿಎಸ್‌ಕೆಬಿ ಅಸೋಸಿಯೇಶನ್‌ ಮತ್ತು ಶ್ರೀ  ಸುಬ್ರಹ್ಮಣ್ಯ ಸೇವಾ ಸಂಘದ ಸಹಭಾಗಿತ್ವದಲ್ಲಿ ನೆರೂಲ್‌ನ ಆಶ್ರಯ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಎ. 30 ರಂದು ನಡೆಯಿತು.

ಬಾಲಾಲಯ ಶ್ರೀ ಕೃಷ್ಣ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ  ಬೆಳಗ್ಗೆ ನಿತ್ಯಪೂಜೆಯ ಅನಂತರ   ಶ್ರೀ ಶಂಕರ ಭಗವತ್ಪಾದರ ಭಾವಚಿತ್ರವನ್ನು  ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು.  ಉಡುಪಿಯಿಂದ  ಆಗಮಿಸಿದ ಬ್ರಹ್ಮಶ್ರೀ ವಾಗೀಶ ಶಾಸ್ತ್ರಿಯವರ ಪೌರೋಹಿತ್ವದಲ್ಲಿ  ಪುಣ್ಯಾಹ ವಾಚನ, ಪಂಚಗವ್ಯ,  ಗಣಹೋಮ, ವಾಗೀಶ್ವರಿ ಸರಸ್ವತಿ  ಹವನ,  ರುದ್ರಾಭಿಷೇಕ, ಶಂಕರಾಚಾರ್ಯರ  ಪೂಜೆ ಮತ್ತು ನಾಮಾರ್ಚನೆ ಮುಂತಾದ ಧಾರ್ಮಿಕ ಕೈಂಕರ್ಯಗಳು   ವೇದಮೂರ್ತಿ ಪ್ರತಾಪ್‌ ರಾವ್‌ ಹಾಗೂ  ನಾಗೇಶ್‌ ರಾವ್‌  ಅವರ ಸಹಯೋಗದಿಂದ ನೆರವೇರಿತು.

ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಅಮಿತ್‌  ಜನಾರ್ದನ್‌  ರಾವ್‌  ಮತ್ತು   ಅಮಿತಾ ರಾವ್‌,  ಸದಾಶಿವ ರಾವ್‌ ಮತ್ತು  ಮಮತಾ ರಾವ್‌, ಎಸ್‌.  ಸಿ. ರಾವ್‌ ಮತ್ತು  ಜ್ಞಾನಸುಂದರಿ ರಾವ್‌ ಹಾಗೂ ಯುಆರ್‌ ರಾವ್‌  ಮತ್ತು  ಇಂದ್ರಾಣಿ ರಾವ್‌  ದಂಪತಿಗಳು ಪಾಲ್ಗೊಂಡಿದ್ದರು. ಗೋಕುಲ ಕಲಾವೃಂದ ಭಜನಾ ಮಂಡಳಿಯಿಂದ ಆದಿ ಶಂಕರಾಚಾರ್ಯ ವಿರಚಿತ ಸ್ತೋತ್ರಗಳ ಪಠನ ಹಾಗೂ ಭಜನೆ  ಜರಗಿತು.  

ಹವನದ ಪೂರ್ಣಾಹುತಿಯಾದ ಅನಂತರ ನಡೆದ ಅಷ್ಟಾವಧಾನ ಸೇವೆಯಲ್ಲಿ  ಪುರೋಹಿತ ವರ್ಗದವರಿಂದ ವೇದ ಘೋಷ, ಇಂದ್ರಾಣಿ ರಾವ್‌ ಅವರಿಂದ  ಸಂಗೀತ,  ಪ್ರಿಯಾಂಜಲಿ ರಾವ್‌ ಅವರಿಂದ ನೃತ್ಯ ಸೇವೆಯ ಅನಂತರ ಸರ್ವವಾದ್ಯ ಸೇವೆಗಳು ಜರಗಿದವು. ಬ್ರಹ್ಮಶ್ರೀ ವಾಗೀಶ್‌ ಶಾಸ್ತ್ರಿಯವರು ಶ್ರೀ ಶಂಕರರ ಆಧ್ಯಾತ್ಮ ತತ್ವಗಳ ಬಗ್ಗೆ ಉಪನ್ಯಾಸ ನೀಡಿದರು.  ತೀರ್ಥ ಪ್ರಸಾದ ವಿತರಣೆ ಹಾಗೂ ಪ್ರಸಾದ ಭೋಜನದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು. ಕಾರ್ಯಕ್ರಮದಲ್ಲಿ  ಸಮಾಜ ಬಾಂಧವರು, ತುಳು-ಕನ್ನಡಿಗರು  ಹಾಗೂ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.