ದಾನ-ಧರ್ಮಕ್ಕೆ ಕುಕ್ಯಾನರು ಸದಾ ಸ್ಮರಣೀಯರು: ಗೋಪಾಲ್‌ ವೈ. ಶೆಟ್ಟಿ


Team Udayavani, Feb 2, 2021, 7:49 PM IST

Gopal Y. Shetty

ಮುಂಬಯಿ, ಫೆ. 1: ನವ ಮುಂ ಬಯಿ ಕನ್ನಡ ಸಂಘ ವಾಶಿ ಇದರ ಬೆಳವಣಿಗೆಗೆ ಕಾರಣೀಭೂತರಾಗಿರುವ ಸಾಹಿತಿ, ಸಮಾಜ ಸೇವಕ ಎಂ. ಬಿ. ಕುಕ್ಯಾನ್‌ ಅವರ ನಡೆ-ನುಡಿ ನಮಗೆ ಸದಾ ಪ್ರೇರಣೆಯಾಗಿದೆ. ದಾನ, ಧರ್ಮ ತನ್ನ ಕರ್ತವ್ಯ ಎಂದು ಅಸಹಾಯಕರಿಗೆ ಸಹಾಯ ಮಾಡುತ್ತಿದ್ದ ಅವರು ಸದಾ ಸ್ಮರಣೀಯರು ಎಂದು ನವಿಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗೋಪಾಲ್‌ ವೈ. ಶೆಟ್ಟಿ ತಿಳಿಸಿದರು.

ಜ. 31ರಂದು ನವ ಮುಂಬಯಿ ಕನ್ನಡ ಸಂಘದ ಎಂ. ಬಿ. ಕುಕ್ಯಾನ್‌ ಸಭಾಗೃಹದಲ್ಲಿ ಜರಗಿದ ಇತ್ತೀಚೆಗೆ ನಿಧನ ಹೊಂದಿದ ಎಂ. ಬಿ. ಕುಕ್ಯಾನ್‌ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದ ಅವರು, ಎಂ. ಬಿ. ಕುಕ್ಯಾನ್‌ ಅವರು ಜೀವಿತಕಾಲದಲ್ಲಿ ಸಮಾಜ ಸೇವೆಯ ಮೂಲಕ ಸಾರ್ಥಕತೆಯ ಜೀವನವನ್ನು ನಡೆಸಿದವರು, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿ ಮೆರೆದವರು. ಅವರ ನಡೆನುಡಿ ನಮಗೆ ಯಾವಾಗಲೂ ಪ್ರೋತ್ಸಾಹದಾಯಕವಾಗಿದೆ ಎಂದರು.
ಸಂಘದ ಕಾರ್ಯಾಧ್ಯಕ್ಷ ಬಿ. ಎಚ್‌. ಕಟ್ಟಿ ಮಾತನಾಡಿ, ಎಂ. ಬಿ. ಕುಕ್ಯಾನ್‌ ಅವರು ಸಂಘವನ್ನು ತನ್ನದೇ ಸಂಸ್ಥೆಯ ಎಂಬಂತೆ ಪ್ರೀತಿಸುತ್ತಿದ್ದರು. ಶಿಕ್ಷಣಕ್ಕೆ ಅವರ ಕೊಡುಗೆ ತುಂಬಾ ಇದೆ. ಅವರ ಸಮಾಜ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾ ರಾವ್‌ ಮಾತನಾಡಿ, ಎಲ್ಲರನ್ನೂ ಪ್ರೀತಿ-ಗೌರವದಿಂದ ಕಾಣುವ ವ್ಯಕ್ತಿತ್ವ ಅವರದ್ದಾಗಿತ್ತು ಎಂದರು. ಉದ್ಯಮಿ ಬೋಂಬೆ ಬಂಟ್ಸ್‌ ಅಸೋಶಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಶೆಟ್ಟಿ ಮಾತನಾಡಿ, ನವಿಮುಂಬಯಿಯಲ್ಲಿ ಪ್ರಾರಂಭದಲ್ಲಿ ಉದ್ಯಮವನ್ನು ಬೆಳೆಸಿ ಎಲ್ಲರಿಗೂ ಪ್ರೋತ್ಸಾಹ ನೀಡುತ್ತಿ ದ್ದ ನಗುಮುಖದ ಎಂ. ಬಿ. ಕುಕ್ಯಾನ್‌ ಅವರು ನಮಗೆಲ್ಲ ರಿಗೂ ಪ್ರೇರಣಾ ಮೂರ್ತಿಯಾಗಿದ್ದಾರೆ ಎಂದರು.

ಮುಂಬಯಿ ಕನ್ನಡ ಸಂಘದ ಗೌರವ ಕೋಶಾಧಿಕಾರಿ ಅನಿಲ್‌ ಕುಮಾರ್‌ ಹೆಗ್ಡೆ ಮಾತನಾಡಿ, ಎಂ. ಬಿ. ಕುಕ್ಯಾನ್‌ ಅವರ ಆದರ್ಶ ನಮಗೆ ಮಾರ್ಗದರ್ಶಕವಾಗಿದೆ. ಮಿತಭಾಷಿಯಾಗಿದ್ದ ಅವರು ಮಾಡುತ್ತಿದ್ದ ಕಾರ್ಯ ಸದಾ ನಮಗೆ ನೆನಪಿನಲ್ಲಿ ಇರುವಂತಾಗಿದೆ ಎಂದರು

ಸಂಘದ ಉಪಾಧ್ಯಕ್ಷ ಮಧುಸೂದನ್‌ ರಾವ್‌ ಮಾತನಾಡಿ, ಸಂಘ-ಸಂಸ್ಥೆಗಳಿಗೆ ಅವರು ನೀಡಿದ ಕೊಡುಗೆಯೂ ಸದಾ ನಮಗೆ ನೆನಪಿನಲ್ಲಿ ಇರುವಂತಾಗಿದೆ ಎಂದು ಹೇಳಿ ಶ್ರದ್ಧಾಂಜಲಿ ಸಲ್ಲಿಸಿದರು. ಮುಂಬಯಿ ಕನ್ನಡ ಸಂಘದ ಪದಾಧಿಕಾರಿ ಗೋಪಿ ರಾವ್‌ ಮಾತನಾಡಿ, ನವಿಮುಂಬಯಿ ಕನ್ನಡ ಸಂಘದ ಸಭಾಭವನ ನವೀಕರಣದಲ್ಲಿ ಎಂ. ಬಿ. ಕುಕ್ಯಾನ್‌ ಅವರ ಕೊಡುಗೆ ತುಂಬಾ ಇದೆ ಎಂದರು.

ಇದನ್ನೂ ಓದಿ:ಕೇಂದ್ರ ಬಜೆಟ್‌: ನಿರೀಕ್ಷೆಗಳು ಹುಸಿ

ಅಕ್ಷಯ ಮಾಸ ಪತ್ರಿಕೆಯ ಸಂಪಾದಕ ಈಶ್ವರ ಅಲೆವೂರು ಮಾತನಾಡಿ, ಇನ್ನೊಬ್ಬರ ಕಷ್ಟಕ್ಕೆ ಸಹಾಯ ಮಾಡುವುದರಲ್ಲಿ ಸಂತೃಪ್ತಿ ಕಂಡುಕೊಂಡ ಸಾಹಿತಿ ಎಂ. ಬಿ. ಕುಕ್ಯಾನ್‌ ಅವರಾಗಿದ್ದಾರೆ ಎಂದರು. ಲೇಖಕಿ ಶಾರದಾ ಅಂಚನ್‌ ಮಾತನಾಡಿ, ತಾನು ಸಾಹಿತಿಯಾಗಿದ್ದು, ಇತರ ಸಾಹಿತಿಗಳನ್ನು ಬೆಳೆಸಿ ಪ್ರೋತ್ಸಾಹಿಸುವಲ್ಲಿ ಅವರ ಕೊಡುಗೆ ತುಂಬಾ ಇದೆ ಎಂದರು.

ನವ ಮುಂಬಯಿ ಕನ್ನಡ ಸಂಘದ ಗೌರವ ಕಾರ್ಯದರ್ಶಿ ಜಗದೀಶ್‌ ಡಿ. ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿ, ನವಿಮುಂಬಯಿ ಕನ್ನಡ ಸಂಘಕ್ಕೆ ಎಂ. ಬಿ. ಕುಕ್ಯಾನ್‌ ಅವರು ನೀಡಿದ ಕೊಡುಗೆಯನ್ನು ವಿವರಿಸಿದರು. ಎಂ. ಬಿ. ಕುಕ್ಯಾನ್‌ ಅವರ ಪುತ್ರ ವಿನೇಶ್‌ ತಂದೆಯವರು ಮಾಡಿದ ಸಮಾಜ ಸೇವೆ ಮತ್ತು ಅವರು ತೋರಿಸಿದ ದಾರಿಯನ್ನು ಎಂದಿಗೂ ನಾವು ಮರೆಯುವುದಿಲ್ಲ ಎಂದು ತಿಳಿಸಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂ. ಬಿ. ಕುಕ್ಯಾನ್‌ ಅವರ ಹಿರಿಯ ಪುತ್ರ ವಿನಯ್‌, ಸಾಹಿತಿ ಸಾ. ದಯಾ, ನವಿಮುಂಬಯಿ ಕನ್ನಡ ಸಂಘದ ಉಪಾಧ್ಯಕ್ಷರಾದ ದಿನೇಶ್‌ ಉಪಾರ್ಣ, ಜ್ಯೋತಿ ಪ್ರಸಾದ್‌, ಬಾಲಕೃಷ್ಣ ಶೆಟ್ಟಿ, ಸಮಿತಿ ಸದಸ್ಯರಾದ ವಿ. ಕೆ. ಸುವರ್ಣ, ಸವಿತಾ ನಾಯಕ್‌, ಪ್ರಭಾಕರ ದೇವಾಡಿಗ, ಶ್ರೀಕಾಂತಿ, ಶೇಖರ ಮೂಲ್ಯ, ಎನ್‌. ಜಿ. ಪೂಜಾರಿ, ಬೋಜ ಜಿ. ದೇವಾಡಿಗ, ಇತರ ಸಮಿತಿ ಸದಸ್ಯರು, ಸಾಹಿತಿ ಎಂ. ಬಿ. ಕುಕ್ಯಾನ್‌ ಅವರ ಅಭಿಮಾನಿ ಬಳಗದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.