ಗೋರೆಗಾಂವ್‌ ಕರ್ನಾಟಕ ಸಂಘ ವಾರ್ಷಿಕ ತುಳು ದಿನಾಚರಣೆ


Team Udayavani, Apr 28, 2019, 5:36 PM IST

2704MUM01

ಮುಂಬಯಿ: ವಿಶ್ವದಲ್ಲಿರುವ ಹಲವು ಭಾಷೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿರುವ ತುಳು ಭಾಷೆಯೂ ಒಂದು. ಅತೀ ಪ್ರಾಚೀನ ಭಾಷೆಗಳಲ್ಲೊಂದಾದ ತುಳುವಿಗೆ ತನ್ನದೇ ಆದ ಲಿಪಿ ಹಾಗೂ ಅಸ್ತಿತ್ವವಿದೆ. ಸಂಸ್ಕೃತಿ, ಸಂಸ್ಕಾರ, ಧರ್ಮ, ಪರಂಪರೆ ಮತ್ತು ಮೂಲ ನಂಬಿಕೆಗಳನ್ನು ಕ್ರಮಪ್ರಕಾರ ಪಾಲಿಸಿಕೊಂಡು ಬಂದ ಕಾರಣ, ಈ ಭಾಷೆಯು ಇನ್ನೂ ಮಾಸದೆ ಉಳಿದಿದೆ.

ಪಾಶ್ಚಾತ್ಯ ಭಾಷೆ ಹಾಗೂ ಸಂಸ್ಕೃತಿಯ ಒಲವು ಹೆಚ್ಚಾದ ಪ್ರಯುಕ್ತ ತುಳುಭಾಷೆಯ ಬೆಳವಣಿಗೆ ಕುಂಠಿತವಾಯಿತು. ಈ ನಿಟ್ಟಿನಲ್ಲಿ ಇದನ್ನು ಹತೋಟಿಯಲ್ಲಿ ಇಡಲು ನಾವೆಲ್ಲರೂ ಪ್ರಯತ್ನ ಮಾಡಬೇಕು ಎಂದು ರಂಗಕರ್ಮಿ, ಸಾಹಿತಿ ನಂದಳಿಕೆ ನಾರಾಯಣ ಶೆಟ್ಟಿ ಅವರು ನುಡಿದರು.

ಎ. 14ರಂದು ಗೋರೆಗಾಂವ್‌ ಕರ್ನಾಟಕ ಸಂಘದ ಬಾಕೂìರು ರುಕ್ಮಿಣಿ ಶೆಟ್ಟಿ ಸ್ಮಾರಕ ಮಿನಿ ಸಭಾಗೃಹದಲ್ಲಿ ನಡೆದ ತುಳು ದಿನಾಚರಣೆಯ ಸಂದರ್ಭದಲ್ಲಿ ಸುಧಾಕರ ಶೆಟ್ಟಿ ಮತ್ತು ಎಸ್‌. ಜೆ. ಶೆಟ್ಟಿ ಅವರು ಸ್ಥಾಪಿಸಿದ ದತ್ತಿನಿಧಿಯ ನಿಮಿತ್ತ ಉಪನ್ಯಾಸ ನೀಡಿದ ಅವರು, ತಾನೂ ಸಹ ಅಂತಹ ಸಂಸ್ಕೃತಿ, ಸಂಸ್ಕಾರ, ಧರ್ಮ, ಕಲೆ, ಪರಂಪರೆಗಳನ್ನು ಶಿಸ್ತುಬದ್ಧವಾಗಿ ಆಚರಿಸಿಕೊಂಡು ಬಂದಿರು
ವುದು ತನಗೆ ತೃಪ್ತಿ ಮತ್ತು ಸಂತೋಷನೀಡಿದೆ ಎಂದು ನುಡಿದು ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ತುಳುನಾಡಿನ ಸಾಂಸ್ಕೃತಿಕ ಪದ್ಧತಿಯಂತೆ ಅತಿಥಿಗಳನ್ನು ಬೆಲ್ಲ- ನೀರು ಕೊಟ್ಟು ಸ್ವಾಗತಿಸ ಲಾಯಿತು. ಕಾರ್ಯಕ್ರಮವು ಸಂಘದ ಮಾಜಿ ಕಾರ್ಯದರ್ಶಿ ವೇದಾ ಸುವರ್ಣ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭ ಗೊಂಡಿತು. ಸಂಘದ ಸದಸ್ಯೆ ಸುಜಾತಾ ಯು. ಶೆಟ್ಟಿ ಅವರು ರಚಿಸಿದ ಸಾದಿ ತೋಜುಜಿ ಕಿರು ನಾಟಕ ಪ್ರದರ್ಶನಗೊಂಡಿತು. ಸುಮತಿ ಶೆಟ್ಟಿ ಮತ್ತು ಜಯಕರ ಡಿ. ಪೂಜಾರಿ ಅವರು ಕವನ ವಾಚಿಸಿದರು.
ಗೋರೆಗಾಂವ್‌ ಕರ್ನಾಟಕ ಸಂಘದ ಅಧ್ಯಕ್ಷ ದೇವಲ್ಕುಂದ ಭಾಸ್ಕರ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರಾದ ರಮೇಶ್‌ ಶೆಟ್ಟಿ ಪಯ್ನಾರು, ಸಂಘದ ಉಪಾಧ್ಯಕ್ಷ ನಾರಾಯಣ ಆರ್‌. ಮೆಂಡನ್‌, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಜಯಕರ ಡಿ. ಪೂಜಾರಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪಾಧ್ಯಕ್ಷ ನಾರಾಯಣ ಆರ್‌. ಮೆಂಡನ್‌ ಅವರು ಸ್ವಾಗತಿಸಿ, ನಿಟ್ಟೆ ಸುಧಾಕರ ಶೆಟ್ಟಿ ಮತ್ತು ಎಸ್‌. ಜೆ. ಶೆಟ್ಟಿ ಅವರು ಸ್ಥಾಪಿಸಿದ ದತ್ತಿನಿಧಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘದ ವಜ್ರಮಹೋತ್ಸವ ಸಮಾರೋಪ ಸಮಾರಂಭಕ್ಕೆ ದೇಣಿಗೆ ನೀಡಿ ಸಹಕರಿಸಿದ ಎಲ್ಲ ಸದಸ್ಯರನ್ನು ಅಧ್ಯಕ್ಷರು ಮತ್ತು ಅತಿಥಿಗಳು ಸ್ಮರಣಿಕೆಯೊಂದಿಗೆ ಗೌರವಿಸಿದರು.

ಕಾರ್ಯಕ್ರಮದಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಿದ ಸಂಘದ ಮಹಿಳಾ ಸದಸ್ಯೆಯರನ್ನು ಗೌರವಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ದೇವಲ್ಕುಂದ ಭಾಸ್ಕರ ಶೆಟ್ಟಿ ಅವರು ಮಾತನಾಡಿ, ಇಂದಿನ ತುಳು ದಿನಾಚರಣೆಯ ಸುಸಂದರ್ಭದಲ್ಲಿ ಸಾಹಿತಿ, ರಂಗಕರ್ಮಿ ನಾರಾಯಣ ಶೆಟ್ಟಿ ನಂದಳಿಕೆ
ಅವರು ಉತ್ತಮ ಉಪನ್ಯಾಸ ನೀಡಿ ದ್ದಾರೆ. ಅವರ ಹೆಸರು ಎಂದ
ಕೂಡಲೆ ನೆನಪಾಗುವುದು ನಂದಳಿಕೆ ಮುದ್ದಣ್ಣ ಮನೋರಮೆಯ ಸರಸಸಲ್ಲಾಪ ಕೃತಿ ಬರೆದ ನಂದಳಿಕೆ ಮದ್ದಣ್ಣನವರು. ಅಂತಹ ಅಭಿಮಾನದ ಸ್ಥಳದ ಹೆಸರನ್ನು ಈಗ ಪ್ರಸಿದ್ಧಗೊಳಿಸಿದ ನಂದಳಿಕೆ ನಾರಾಯಣ ಶೆಟ್ಟಿ ಅವರು ತನ್ನ ಉಪನ್ಯಾಸದಲ್ಲಿ ತಿಳಿಸಿದಂತೆ ತುಳು ಭಾಷೆ ಇದ್ದರೆ ತುಳು ಸಂಸ್ಕೃತಿ, ಸಾಹಿತ್ಯ, ಕಲೆ ಉಳಿಯುತ್ತದೆ. ಆ ನಿಟ್ಟಿನಲ್ಲಿ ಸಂಘವು ನೆರವೇರಿಸುತ್ತಿರುವ ತುಳು ದಿನಾಚರಣೆ ಗಮನಾರ್ಹಎಂದರು.
ಕಾರ್ಯಕ್ರಮವನ್ನು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಜಯಕರ ಡಿ. ಶೆಟ್ಟಿ ಅವರು ತುಳು ವಿನಲ್ಲಿ ಅರ್ಥಬದ್ಧವಾಗಿ ನಿರೂಪಿಸಿ
ದರು. ಜತೆ ಕಾರ್ಯದರ್ಶಿ ಶಿವಾನಂದಶೆಟ್ಟಿ ವಂದಿಸಿದರು. ಸಂಘದ ಪದಾಧಿ ಕಾರಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.