ಗೋವಾ ಶೈಲಿಯ ಬೀಚ್‌ ಶ್ಯಾಕ್‌ಗಳ ನಿರ್ಮಾಣಕ್ಕೆ ಸರಕಾರ ಅನುಮತಿ

ಮಹಾರಾಷ್ಟ್ರದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

Team Udayavani, Jun 28, 2020, 5:03 PM IST

ಗೋವಾ ಶೈಲಿಯ ಬೀಚ್‌ ಶ್ಯಾಕ್‌ಗಳ ನಿರ್ಮಾಣಕ್ಕೆ  ಸರಕಾರ ಅನುಮತಿ

ಸಾಂದರ್ಭಿಕ ಚಿತ್ರ

ಮುಂಬಯಿ, ಜೂ. 27: ಮಹಾರಾಷ್ಟ್ರದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದೊಂದಿಗೆ ರಾಜ್ಯ ಸರಕಾರವು ಗೋವಾ ಮತ್ತು ಇತರ ಅಂತಾರಾಷ್ಟ್ರೀಯ ಕಡಲತೀರಗಳ ಮಾದರಿಯಂತೆ ರಾಜ್ಯದಲ್ಲಿ ಬೀಚ್‌ ಶ್ಯಾಕ್‌ಗಳ (ಕಡಲತೀರದ ತಾತ್ಕಾಲಿಕ ಗುಡಿಸಲು) ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಪ್ರಾಯೋಗಿಕ ಯೋಜನೆಯಾಗಿ 8 ಕಡಲತೀರಗಳಲ್ಲಿ ಬೀಚ್‌ ಶ್ಯಾಕ್‌ಗಳ ಸ್ಥಾಪನೆಗೆ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.

ಪ್ರವಾಸೋದ್ಯಮ ವೆಬ್‌ಸೈಟ್‌ ಮೂಲಕ ಅರ್ಜಿ :  ರತ್ನಗಿರಿಯ ಗುಹಾಗರ್‌ ಮತ್ತು ಅರೆವರೆ, ಸಿಂಧುದುರ್ಗದ ಕುಂಕೇಶ್ವರ ಮತ್ತು ತಾರ್ಕರ್ಲಿ, ರಾಯಗಢದ ವೆಸೋìಲಿ ಮತ್ತು ದಿವೇಗರ್‌ ಹಾಗೂ ಪಾಲ್ಘರ್‌ ಜಿಲ್ಲೆಯ ಕೇಳ್ವೆ ಮತ್ತು ಬೋರ್ಡಿ ಕಡಲತೀರಗಳಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಠಾಕ್ರೆ ಹೇಳಿದ್ದಾರೆ. ಇಂತಹ ತಾತ್ಕಾಲಿಕ ಶ್ಯಾಕ್‌ಗಳನ್ನು ಸ್ಥಾಪಿಸಲು ಆಸಕ್ತಿ ಇರುವವರು 2021ರ ಆರ್ಥಿಕ ಸಾಲಿಗಾಗಿ ರಾಜ್ಯ ಪ್ರವಾಸೋದ್ಯಮ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಇತರ ಕಡಲ ತೀರಗಳಲ್ಲಿ ಈ ನೀತಿಯನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದವರು ನುಡಿದಿದ್ದಾರೆ.

3 ವರ್ಷಗಳ ಪರವಾನಿಗೆ :  ಮಹಾರಾಷ್ಟ್ರ ಕರಾವಳಿ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅನುಮೋದನೆಯೊಂದಿಗೆ ಪ್ರವಾಸೋದ್ಯಮ ಇಲಾಖೆಯಿಂದ ಗೊತ್ತುಪಡಿಸಿದ ಭೂಮಿಯಲ್ಲಿ ತಾತ್ಕಾಲಿಕ ಅಥವಾ ಕಾಲೋಚಿತ ಸ್ಥಳಗಳಿಗೆ 3 ವರ್ಷಗಳವರೆಗೆ ಪರವಾನಿಗೆ ನೀಡಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ. ಅರ್ಜಿ ಶುಲ್ಕ 15,000 ರೂ. ಹಾಗೂ ಮರುಪಾವತಿಸಲಾಗುವ 30,000 ರೂ.ಗಳ ಭದ್ರತಾ ಠೇವಣಿಯೊಂದಿಗೆ ಯೋಜನೆಗೆ ಅನುಮತಿ ಪಡೆಯುವ ಉದ್ಯಮಿಯೊಬ್ಬರು ಇಂತಹ ಗರಿಷ್ಠ 10 ಬೀಚ್‌ ಶ್ಯಾಕ್‌ಗಳನ್ನು ನಿರ್ಮಿಸಬಹುದು, ಪ್ರತಿಯೊಂದೂ 15×15 ವಿಸ್ತೀರ್ಣ ಮತ್ತು 12 ಅಡಿ ಎತ್ತರ, ಆಸನಕ್ಕಾಗಿ ಅನುಮತಿಸಲಾದ 20×15 ಅಡಿ ಛಾವಣಿ ವ್ಯವಸ್ಥೆಗಳನ್ನು ಹೊಂದಿರತಕ್ಕದ್ದು ಎಂದು ಅಧಿಕಾರಿ ತಿಳಿಸಿದ್ದಾರೆ. ಶ್ಯಾಕ್‌ಗಾಗಿ ಸರಕಾರಕ್ಕೆ ಪಾವತಿಸಬೇಕಾದ ವಾರ್ಷಿಕ ಶುಲ್ಕವು ಮೊದಲ ವರ್ಷದಲ್ಲಿ 45,000 ರೂ., ಎರಡನೇ ವರ್ಷದಲ್ಲಿ 50,000 ರೂ. ಮತ್ತು ಒಪ್ಪಂದದ ಅಂತಿಮ ವರ್ಷದಲ್ಲಿ 55,000 ರೂ. ಆಗಿರಲಿದೆ. ಶೇ. 80ರಷ್ಟು ಹಂಚಿಕೆಗಳನ್ನು ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸಲು ಮೀಸಲಿಡಲಾಗುವುದು ಮತ್ತು ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಕಾರ್ಯಾಚರಣೆ, ಧ್ವನಿ ಮಿತಿಗಳು, ಸಿಸಿಟಿವಿ ಕೆಮೆರಾಗಳ ಅಳವಡಿಕೆ ಮುಂತಾದ ಷರತ್ತುಗಳು ಅನ್ವಯವಾಗಲಿವೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳ ಅಭಿವೃದ್ಧಿಗಾಗಿ ಮಹಾರಾಷ್ಟ್ರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಲಿಮಿಟೆಡ್‌ (ಎಂಟಿಡಿಸಿ) ಒಡೆತನದ ಆಸ್ತಿಗಳನ್ನು ಖಾಸಗೀಕರಣಗೊಳಿಸುವ ನೀತಿಗೂ ರಾಜ್ಯ ಸರಕಾರವು ತಾತ್ವಿಕ ಅನುಮೋದನೆ ನೀಡಿದೆ. ಮೊದಲ ಹಂತದಲ್ಲಿ ಇದು ವಾರ್ಷಿಕ ಬಾಡಿಗೆಗಳೊಂದಿಗೆ ಸೀಮಿತ ಅವಧಿಗೆ ಉಪ-ಗುತ್ತಿಗೆಗೆ ಮಾಥೆರಾನ್‌, ಮಹಾಬಲೇಶ್ವರ, ಗಣಪತಿಫ‌ುಲೆ, ಹರಿಹರೇಶ್ವರ, ತಡೋಬಾ, ಫ‌ರ್ದಾಪುರದಲ್ಲಿರುವ ಎಂಟಿಡಿಸಿ ರೆಸಾರ್ಟ್‌ಗಳನ್ನು ಒಳಗೊಂಡಿರಲಿದೆ.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.