ಜಿಎಸ್‌ಬಿ ಸೇವಾ ಮಂಡಲ ಮುಂಬಯಿ: 67ನೇ ಗಣೇಶೋತ್ಸವದ 3ನೇ ಸಮಾಲೋಚನ ಸಭೆ


Team Udayavani, Aug 29, 2021, 2:45 PM IST

ಜಿಎಸ್‌ಬಿ ಸೇವಾ ಮಂಡಲ ಮುಂಬಯಿ: 67ನೇ ಗಣೇಶೋತ್ಸವದ 3ನೇ ಸಮಾಲೋಚನ ಸಭೆ

ಸಯಾನ್‌: ಜಿಎಸ್‌ಬಿ ಸೇವಾ ಮಂಡಲ ಮುಂಬಯಿ ಇದರ ವಿಶ್ವವಿಖ್ಯಾತ 67ನೇ ವಾರ್ಷಿಕ ಗಣೇಶೋತ್ಸವವು ಸೆ. 10ರಿಂದ ಸೆ. 14ರ ವರೆಗೆ ಐದು ದಿನಗಳ ಕಾಲ ಕಿಂಗ್‌ಸರ್ಕಲ್‌ನ ಶ್ರೀ ಸುಕೃತೀಂದ್ರ ನಗರದ ಎ. ರಾಮನಾಯಕ್‌ ಹಾಲ್‌ ಹಾಗೂ ಜಿಎಸ್‌ಬಿ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಜರಗಲಿದ್ದು, ಇದರ ಪೂರ್ವ ತಯಾರಿ ಸಭೆಯು ಆ. 21ರಂದು ಸಯಾನ್‌ನ ಶ್ರೀ ಗುರುಗಣೇಶ್‌ ಸಭಾಗೃಹದಲ್ಲಿ ನಡೆಯಿತು.

ವಾರ್ಷಿಕ ಗಣೇಶೋತ್ಸವವು ಶ್ರೀ ಕಾಶೀ ಮಠಾಧೀಶ ವೃಂದಾವನಸ್ಥ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀಮದ್‌ ಸಮ್ಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನದೊಂದಿಗೆ ನಡೆಯಲಿದ್ದು, ಮೂರನೇ ಪೂರ್ವಭಾವಿ ಸಭೆಯಲ್ಲಿ ಸೇವಾ ಮಂಡಲದ ಕಾರ್ಯಕಾರಿ ಸಮಿತಿ, ಸ್ವಯಂ ಸೇವಕರು ಉಪಸ್ಥಿತರಿದ್ದರು. ಗಣೇಶೋತ್ಸವ ಆಯೋಜನ ಸಮಿತಿಯ ಸಂಚಾಲಕ ಡಾ| ಭುಜಂಗ ಪೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಸೇವಾ ಮಂಡಲದ ಕಾರ್ಯದರ್ಶಿ ಶಿವಾನಂದ ಭಟ್‌ ಪ್ರಾರ್ಥನೆಗೈದರು.

ಡಾ| ಭುಜಂಗ ಪೈ ಅವರು ವಾಲ್ಕೇಶ್ವರ ಶ್ರೀ ಕಾಶೀ ಮಠದ ಉಭಯ ವೃಂದಾವನಸ್ಥ ಗುರುವರ್ಯರನ್ನು ಪ್ರಾರ್ಥಿಸಿ ಸ್ವಾಗತಿಸಿದರು. ಹಿಂದಿನ ಸಮಾಲೋಚನ ಸಭೆಯ ವರದಿಯನ್ನು ವಾಚಿಸಿ ಅನುಮೋದನೆ ಪಡೆಯಲಾಯಿತು. ಈ ವರ್ಷದ ಗಣೇಶೋತ್ಸವವು ಸರಕಾರಿ ಮಾರ್ಗ ಸೂಚಿಗಳಂತೆ ಜರಗಬೇಕು. ಕೋವಿಡ್‌ ಸಾಂಕ್ರಮಿಕದಿಂದ ರಕ್ಷಣೆ ಪಡೆಯಲು ಸರ್ವರು ಆದಷ್ಟು ಬೇಗ ಕೋವಿಡ್‌ ಲಸಿಕೆಯನ್ನು ಪಡೆಯಬೇಕು. ಸೇವಾ ಮಂಡಲವು ಇತ್ತೀಚೆಗೆ ದಾನಿಗಳ ಸಹಕಾರದಿಂದ ಮುಂಬಯಿಯ ವಿವಿಧ ಸ್ಥಳಗಳಲ್ಲಿ ಉಚಿತ ಕೊರೊನಾ ಲಸಿಕೆ ಅಭಿಯಾನವನ್ನು ಆಯೋಜಿಸಿ ಸಹಕರಿಸಿದೆ ಎಂದು ನುಡಿದು ಸರ್ವರ ಸಹಕಾರ ಅಗತ್ಯವಾಗಿದೆ ಎಂದರು.

ಇದನ್ನೂ ಓದಿ:ಪಶ್ಚಿಮಘಟ್ಟದ ರಮಣೀಯ ತಾಣ ಕ್ಯಾತನಮಕ್ಕಿ

ಸೇವಾ ಮಂಡಲದ ಅಧ್ಯಕ್ಷ ರಮೇಶ್‌ ಭಂಡಾರ್ಕರ್‌ ಅವರು ಮಾತನಾಡಿ, ಗಣೇಶೋತ್ಸವದ ಮಂಟಪ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಜತೆ ಸಂಚಾಲಕ ಜಿ. ಡಿ. ರಾವ್‌ ಅವರು ಗಣೇಶ ವಿಗ್ರಹವು ಸರಕಾರಿ ನಿಯಮಂತೆ ನಾಲ್ಕು ಅಡಿ ಮಾತ್ರ ಎತ್ತರ ಇರಬೇಕು. ಕಳೆದ ವರ್ಷ ವಿಗ್ರಹವು ಅತೀ ಸುಂದರವಾಗಿ ಮೂಡಿ ಬಂದಿದೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತಿಗೆ ನಮ್ಮ ಮಂಡಳಿಯು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ನುಡಿದು ಶುಭಹಾರೈಸಿದರು.

ಗಣೇಶೋತ್ಸವ ಆಯೋಜನ ಸಮಿತಿಯ ಮಾಜಿ ಸಂಚಾಲಕ ಜಿ. ಜಿ. ಪ್ರಭು ಅವರು ಮಾತನಾಡಿ, ಬರುವ ದಿನಗಳಲ್ಲಿ ಸರಕಾರದ ನಿಯಮಾ ವಳಿಯಲ್ಲಿ ಸೂಕ್ತ ಮಾರ್ಪಾಡು ಮಾಡಿ ವಿಜೃಂಭಣೆಯಿಂದ ಗಣೇಶೋತ್ಸವ ಜಗರುವಂತಾಗಬೇಕು ಎಂದು ನುಡಿದು ಹಾರೈಸಿದರು. ಸೇವಾ ಮಂಡಲದ ಟ್ರಸ್ಟಿ ಆರ್‌. ಜಿ. ಭಟ್‌ ಅವರು ಮಾತನಾಡಿ, ಕಳೆದ ಒಂದೂವರೆ ವರ್ಷಗಳಿಂದ ಕೋವಿಡ್‌ ನಿಮಿತ್ತ ಲಾಕ್‌ಡೌನ್‌ ಸಮಯದಲ್ಲಿ ತೊಂದರೆಗೀಡಾದ ಅಪಾರ ಮಂದಿಗೆ ಧನ ಸಹಾಯ,ನಿತ್ಯ ಮನೆಯಲ್ಲಿ ಬೇಕಾಗುವ ಸಾಮಾ ಗ್ರಿಗಳ ಕಿಟ್‌, ಉಚಿತ ವ್ಯಾಕ್ಸಿನೇಶನ್‌, ಆಸ್ಪತ್ರೆ ಗಳಲ್ಲಿ ದಾಖಲಾದ ರೋಗಿಗಳ ಸಂಬಂಧಿಕರಿಗೆ ಉಚಿತ ಅನ್ನದಾನ, ಮಹಾರಾಷ್ಟ್ರ ನೆರೆ ಪೀಡಿತರಿಗೆ ನೆರವು ಇತ್ಯಾದಿ ಕಾರ್ಯಗಳಿಗೆ ಸೇವಾ ಮಂಡಲವು ಸಹಕರಿಸಿದೆ ಎಂದರು.

ಸತೀಶ್‌ ರಾಮ ನಾಯಕ್‌ ಅವರು ಸರಕಾರದ ಗಣೇಶೋತ್ಸವದ ನಿಯಮಾವಳಿಯಲ್ಲಿ ಸೂಕ್ತ ಬದಲಾವಣೆಗಾಗಿ ಬಿಎಂಸಿ ಸಮನ್ವಯ ಸಮಿತಿ ಪ್ರಯತ್ನಿಸುತ್ತಿದೆ ಎಂದರು. ಸೇವಾ ಮಂಡಲದ ಜತೆ ಕೋಶಾಧಿಕಾರಿ ವಿಷ್ಣು ಕಾಮತ್‌ ಅವರು ಗಣೇಶೋತ್ಸವ ಭಕ್ತರಿಗೆ ಪೂಜೆ, ಸೇವೆಯನ್ನು ಆ್ಯಪ್‌ ಮೂಲಕ ಬುಕ್‌ ಮಾಡಲು ಉತ್ತೇಜಿಸಬೇಕು ಎಂದರು. ಮಂಡಲದ ಅಧ್ಯಕ್ಷ ರಮೇಶ್‌ ಭಂಡಾರ್ಕರ್‌ ವಂದಿಸಿದರು.

ಟಾಪ್ ನ್ಯೂಸ್

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.