ಸಯಾನ್‌ ಜಿಎಸ್‌ಬಿ ಮಂಡಲ: ಹರಿಸೇವೆ,ಗಣೇಶೋತ್ಸವದ ಪೂರ್ವಭಾವಿ ಸಭೆ


Team Udayavani, Jul 13, 2018, 4:46 PM IST

1207mum15.jpg

ಮುಂಬಯಿ: ಜಿಎಸ್‌ಬಿ ಸೇವಾ ಮಂಡಲ ಸಯಾನ್‌ ವತಿಯಿಂದ ಇತ್ತೀಚೆಗೆ ನಡೆದ ಭದ್ರಿನಾಥ್‌ ಯಾತ್ರೆಯ ಹರಿಸೇವೆ ಮತ್ತು ಮಂಡಲದ 64 ನೇ ವಾರ್ಷಿಕ ಗಣೇಶೋತ್ಸವದ ಪ್ರಥಮ ಪೂರ್ವತಯಾರಿ ಸಭೆಯು ಜು. 8 ರಂದು ಸಯಾನ್‌ ಪೂರ್ವದ ಸೇವಾ ಮಂಡಲದ ಗುರುಗಣೇಶ ಪ್ರಸಾದ ಸಭಾಗೃಹದಲ್ಲಿ ಜರಗಿತು.

ಬೆಳಗ್ಗೆ 9.30ರಿಂದ ಹರಿಸೇವೆಯ ಪೂಜೆಯನ್ನು ವೇದಮೂರ್ತಿ ಬಂಟ್ವಾಳ ಕೃಷ್ಣ ಭಟ್‌ ಇವರ ನೇತೃತ್ವದಲ್ಲಿ ನಡೆಸಲಾಯಿತು. ಭದ್ರಿನಾಥ್‌ ಕ್ಷೇತ್ರದ ಯಾತ್ರಿಗಳು ಮತ್ತು  ಇತರರು ತೀರ್ಥ ಪ್ರಸಾದ ಸ್ವೀಕರಿಸಿದರು. ಸೇವಾ ಮಂಡಳದ 64ನೇ ಗಣೇಶೋತ್ಸವವು ಸೆ. 13 ರಿಂದ ಸೆ. 17 ರವರೆಗೆ ಶ್ರೀ ಸುಕೃತೀಂದ್ರ ನಗರ, ಎ. ರಾಮ ನಾಯಕ್‌ ಹಾಲ್‌ ಮೈದಾನ ಮತ್ತು ಜಿಎಸ್‌ಬಿ ನ್ಪೋರ್ಟ್ಸ್ ಕ್ಲಬ್‌ ಮೈದಾನ ಕಿಂಗ್‌ ಸರ್ಕಲ್‌ನಲ್ಲಿ ಜರಗಲಿದ್ದು,   ಇದರ ಪೂರ್ಯತಯಾರಿಗಾಗಿ ಕಾರ್ಯಕರ್ತರು, ಸ್ವಯಂ ಸೇವಕರ ಸಭೆಯನ್ನು ಇದೇ ಸಂದರ್ಭದಲ್ಲಿ ಆಯೋಜಿಸಲಾಗಿತ್ತು.

ಶ್ರೀ ಗಣೇಶೋತ್ಸವ ಆಯೋಜನ ಸಮಿತಿಯ ಪ್ರಧಾನ ಸಂಚಾಲಕ ಡಾ| ಭುಜಂಗ ಪೈ ಅವರು ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಪ್ರದಾನ ಅರ್ಚಕ ವೇದಮೂರ್ತಿ ಬಂಟ್ವಾಳ ಕೃಷ್ಣ ಭಟ್‌ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಬಳಿಕ ಭುಜಂಗ ಪೈ ಅವರು ತನ್ನನ್ನು ಸಂಚಾಲಕನನ್ನಾಗಿ ನೇಮಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿ, ಕಳೆದ ಗಣೇಶೋತ್ಸವದಲ್ಲಿ ವಿವಿಧ ರೂಪದಲ್ಲಿ ಬಂದ ಧನ ಸಂಗ್ರಹದ ಬಗ್ಗೆ ವಿವರ ನೀಡಿದರು.

ಗಣೇಶೋತ್ಸವ ಆಯೋಜನ ಸಮಿತಿಯ ಸಹ ಸಂಚಾಲಕ ರಘುನಂದನ್‌ ಕಾಮತ್‌ ಅವರು ಮಾತನಾಡಿ, ಪ್ರಸಕ್ತ ವರ್ಷದ ಕಾರ್ಯಕ್ರಮಗಳು ಜರಗುವಲ್ಲಿ ಸರಕಾರಿ ನಿಯಮಗಳ ಬಗ್ಗೆ ತಿಳಿಸಿ, ನಿಯಮ ಪಾಲನೆಯೊಂದಿಗೆ ಗಣೇಶೋತ್ಸವ ಸಂದರ್ಭದಲ್ಲಿ ಸಮಾರಾಧನೆಯನ್ನು ಬಫೆ ಸಿಸ್ಟಂ ಮೂಲಕ ನಡೆಸಬೇಕು ಎಂದು ಸಲಹೆ ನೀಡಿದರು.

ವೇದಮೂರ್ತಿ ಬಂಟ್ವಾಳ ಕೃಷ್ಣ ಭಟ್‌  ಇವರು ಮಾತನಾಡಿ, ಕಳೆದ ವರ್ಷ ಗಣೇಶೋತ್ಸವದ ಐದನೇ ದಿನ ವಿಸರ್ಜನೆಯಂದು ವಿಪರೀತ ಮಳೆಯಿಂದಾಗಿ ಮಂಟಪದಲ್ಲಿ ನೆರೆದಿದ್ದ ಸುಮಾರು ಎರಡು ಸಾವಿರಕ್ಕೂ ಅಧಿಕ ಜನರಿಗೆ ಇಡೀ ರಾತ್ರಿ ನಮ್ಮ ಮಂಡಲದ ಮುಖಾಂತರ ಊಟೋಪಚಾರ ಮತ್ತು ವಸತಿಯ ವ್ಯವಸ್ಥೆಯನ್ನು ಮಾಡಿ ಸರ್ವರ ಮೆಚ್ಚುಗೆಗೆ ಪಾತ್ರವಾಗಿದ್ದೇವೆ. ಮರುದಿನ ಪವಾಡ ಎಂಬಂತೆ ಬೆಳಗ್ಗೆಯಿಂದ ಮಳೆಯಿಲ್ಲದೆ, ಬಿಸಿಲು ಕಾದು ವಿಜೃಂಭಣೆಯಿಂದ ಗಣಪತಿ ವಿಸರ್ಜನೆ ವೈಭವದ ಮೆರವಣಿಗೆ ನಡೆಯಿತು. ವರ್ಲಿಯ ಸಮೀಪದಲ್ಲಿ ಸಾವಿರಾರು ಮಂದಿ ಭಕ್ತಾದಿಗಳು ಕಾದು ಕುಳಿತು ದೇವರ ದರ್ಶನ ಮಾಡಿದ್ದಾರೆ ಎಂದರು.

ಇನ್ನೋರ್ವ ಸಹ ಸಂಚಾಲಕ ಜಿ. ದಾಮೋದರ ರಾವ್‌ ಅವರು ಮಾತನಾಡಿ, ಕಳೆದ ಸಾಲಿನ ಧನ ಸಂಗ್ರಹದ ಬಗ್ಗೆ ವಿವರಿಸಿದರು. ಸಹ ಸಂಚಾಲಕ ಹಿರಿಯ ನ್ಯಾಯವಾದಿ ಎಂ. ವಿ. ಕಿಣಿ ಅವರು ಮಾತನಾಡಿ, ಸೇವಾ ಮಂಡಲದ ಪ್ರಾರಂಭದ ವರ್ಷಗಳಲ್ಲಿ ಬಟ್ಟೆ ಗಿರಣಿಗಳಲ್ಲಿ ಕೆಲಸ ಮಾಡುವ ನಮ್ಮ ಸಮಾಜದವರು ಒಂದಾಣೆ, ಎರಡಾಣೆ ದೇಣಿಗೆ ಸಂಗ್ರಹಿಸಿ ಉತ್ಸವ ಆಚರಿಸುತ್ತಿದ್ದರು. ಅಂದಿನ ನಮ್ಮ ಸಮಾಜ ಬಾಂಧವರ ಶ್ರಮ ಇಂದಿನವರಿಗಿಂತ ಹೆಚ್ಚು ಮಹತ್ವದ್ದಾಗಿದೆ ಎಂದರು.

ಸಹ ಸಂಚಾಲಕ ಗಣೇಶ್‌ ಪ್ರಭು ಇವರು ಮಾತನಾಡಿ, ಸೇವಾ ಮಂಡಲವು ಇತ್ತೀಚೆಗೆ ಆಯೋಜಿಸಿದ ಭದ್ರಿನಾಥ ಯಾತ್ರೆಯಲ್ಲಿ ಊಟೋಪಹಾರ ಇತರ ವ್ಯವಸ್ಥೆಯನ್ನು ಕೈಗೊಂಡು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ನುಡಿದರು.
ಸೇವಾ ಮಂಡಲದ ಮಾಜಿ ಅಧ್ಯಕ್ಷ ಆರ್‌. ಜಿ. ಭಟ್‌ ಇವರು ಮಾತನಾಡಿ, ಸೇವಾ ಮಂಡಳದ ಮುಂದಿರುವ ಯೋಜನೆಗಳು ಕ್ಲಪ್ತ ಸಮಯದಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು. ಸೇವಾ ಮಂಡಲದ ಜೊತೆ ಕೋಶಾಧಿಕಾರಿ ವಿಷ್ಣು ಕಾಮತ್‌ ಅವರು ಮಾತನಾಡಿ, ಗಣೇಶೋತ್ಸವದಲ್ಲಿ ಭಕ್ತರು ಪೂಜಾ ಸೇವೆ, ದೇಣಿಗೆ ಇತ್ಯಾದಿಗಳನ್ನು ಸೇವಾ ಮಂಡಳದ ಮೊಬೈಲ್‌ ಆ್ಯಪ್‌ ಮೂಲಕ ನೋಂದಾಯಿಸಿಕೊಳ್ಳಬಹುದು. ಇದರಿಂದ ಕಾರ್ಯಕರ್ತರ, ಸ್ವಯಂ ಸೇವಕರ ಶ್ರಮ ಹಾಗೂ ಸಮಯ ಉಳಿತಾಯವಾಗುತ್ತದೆ ಎಂದು ಹೇಳಿದರು.

ಸೇವಾ ಮಂಡಳದ ಕಾರ್ಯದರ್ಶಿ ಶಿವಾನಂದ ಭಟ್‌ ಇವರು ವಂದಿಸಿದರು. ಮುಂದಿನ ಪೂರ್ವಭಾವಿ ಸಭೆಯು ಜು. 21 ರಂದು ಸಂಜೆ 7.35 ಕ್ಕೆ ಜಿಎಸ್‌ಬಿ ಸೇವಾ ಮಂಡಲ ಶ್ರೀ ಗುರುಗಣೇಶ್‌ ಪ್ರಸಾದ್‌ ಸಭಾಗೃಹ ಸಯಾನ್‌ ಪೂರ್ವದಲ್ಲಿ ನಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು. ಸ್ವಯಂ ಸೇವಕರು, ಕಾರ್ಯಕರ್ತರು, ಭಕ್ತಾದಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.