ಜಿಎಸ್‌ಬಿ ಸ್ಕಾಲರ್‌ಶಿಪ್‌ ಲೀಗ್‌: ದಾನಿಗಳ ವಿಶೇಷ ಸಭೆ


Team Udayavani, Apr 22, 2018, 4:26 PM IST

2004mum02.jpg

ಮುಂಬಯಿ: ಗೌಡ ಸಾರಸ್ವತ ಬ್ರಾಹ್ಮಣ್‌ ಸ್ಕಾಲರ್‌ಶಿಪ್‌ ಲೀಗ್‌ ಮುಂಬಯಿ ಇದರ ವತಿಯಿಂದ ದಾನಿಗಳ ವಿಶೇಷ ಸಭೆಯ ಇತ್ತೀಚೆಗೆ ಮಂಗಳೂರಿನ ಕೆನರಾ ಹೈಸ್ಕೂಲ್‌ನ ಭುವನೇಂದ್ರ  ಸಭಾಗೃಹದಲ್ಲಿ ನಡೆಯಿತು.

ದಕ್ಷಿಣ ಕನ್ನಡದ ನೂರಾರು ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿ ವೇತನವನ್ನು ನೀಡಿ ಸಹಕರಿಸಲಾಯಿತು. ಮೆರಿಟ್‌ ಸ್ಟೂಡೆಂಟ್ಸ್‌ ಗಳನ್ನು ಈ ಸಂದರ್ಭದಲ್ಲಿ ಆಹ್ವಾನಿಸಿ ಗೌರವಿಸಲಾಯಿತು.

ಗೌಡ ಸಾರಸ್ವತ ಬ್ರಾಹ್ಮಣ್‌ ಸ್ಕಾಲರ್‌ಶಿಪ್‌ ಲೀಗ್‌ ಮುಂಬಯಿ ಇದರ ಕಾರ್ಯಾಧ್ಯಕ್ಷೆ ಗೀತಾ ಆರ್‌. ಪೈ ಇವರು ದಾನಿಗಳನ್ನು ಸ್ವಾಗತಿಸಿದರು. ಪ್ರಭು ಚಾರಿಟೆಬಲ್‌ ಟ್ರಸ್ಟ್‌ ಇದರ ಸಿಎಫ್‌ಒ ಸುರೇಶ್‌ ಇವರು ಪ್ರಭು ಚಾರಿಟೆಬಲ್‌ ಟ್ರಸ್ಟ್‌ನ

ಸಂಸ್ಥಾಪಕರಾದ ಅಜಿತ್‌ ಪ್ರಭು ದಂಪತಿಯನ್ನು ಪರಿಚಯಿಸಿ, ಸಂಸ್ಥೆಯ ಸಿದ್ದಿ-ಸಾಧನೆಗಳನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅಜಿತ್‌ ಪ್ರಭು ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡುವುದು ನಮ್ಮ ಟ್ರಸ್ಟ್‌ನ ಉದ್ದೇಶವಾಗಿದೆ. ಕಲಿಯುವ ತುಡಿತವಿದ್ದು, ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ. ಎಲ್ಲರು ಸುಶಿಕ್ಷಿತರಾದಾಗ ಮಾತ್ರ ಸಮಾಜ, ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಆದರ್ಶ ಪ್ರಜೆಗಳಾಗಿ ಬಾಳಬೇಕು ಎಂದು ಕರೆನೀಡಿದರು.

ವೇದಿಕೆಯಲ್ಲಿ ಬಮಿತಾ ಎ. ಪ್ರಭು, ಶೈನಿ ಪ್ರಭು ಇವರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಗಣೇಶ್‌ ಶ್ಯಾನ್‌ಭಾಗ್‌ ಇವರು ವಂದಿಸಿದರು. ಜಿಎಸ್‌ಬಿ ಸ್ಕಾಲ್‌ಶಿಪ್‌ ಲೀಗ್‌ ಸಂಸ್ಥೆಯ 100 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಪ್ರಾರಂಭದ ದಿನಗಳಿಂದಲೂ ಸಂಸ್ಥೆಯು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುತ್ತಾ ಬರುತ್ತಿದೆ.

ಯಾವುದೇ ರೀತಿಯ ಭೇದ-ಭಾವವನ್ನು ಮಾಡದೆ ಇಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆದಿದ್ದಾರೆ. ಕಾರ್ಮಿಕರು, ಟೈಲರ್‌ಗಳು, ಹೊಟೇಲ್‌ ಕಾರ್ಮಿಕರು, ರಿಕ್ಷಾ ಡ್ರೈವರ್‌ಗಳು, ಸಣ್ಣ ಮಂದಿರದ ಅರ್ಚಕರು, ರಸ್ತೆಬದಿಯಲ್ಲಿ ಟೀ ಮಾರುವರು, ರೈತರು ಸೇರಿದಂತೆ ಇನ್ನಿತರ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಂಸ್ಥೆಯು ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬರುತ್ತಿದೆ.

ಸಿಂಗಾಪುರದ ಅಜಿತ್‌ ಪ್ರಭು ಎಂಬವರ ನೇತೃತ್ವದ ಪ್ರಭು ಚಾರಿಟೇಬಲ್‌ ಟ್ರಸ್ಟ್‌ ಸಂಸ್ಥೆಯು ಇದೇ ಧ್ಯೇಯೋದ್ಧೇಶದಿಂದ ಹುಟ್ಟಿಕೊಂಡಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿದ್ದು, ಜಿಎಸ್‌ಬಿ ಸ್ಕಾಲರ್‌ಶಿಪ್‌ ಲೀಗ್‌ ಸಂಸ್ಥೆಗೂ ಸಹಕರಿಸುತ್ತಿದೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.