ಜಿಎಸ್ಬಿಎಸ್ ಮೆಡಿಕಲ್ ಟ್ರಸ್ಟ್ : ವೈದ್ಯಕೀಯ ತಪಾಸಣಾ ಶಿಬಿರ
Team Udayavani, Mar 26, 2019, 7:26 PM IST
ಮುಂಬಯಿ: ದಾದರ್ ಪೂರ್ವದ ಜಿಎಸ್ಬಿಎಸ್ ಮೆಡಿಕಲ್ ಟ್ರಸ್ಟ್ ವತಿಯಿಂದ ವೈದ್ಯಕೀಯ ತಪಾಸಣಾ ಶಿಬಿರವು ಇತ್ತೀಚೆಗೆ ಸಂಸ್ಥೆಯ ಮೆಡಿಕಲ್ ಸೆಂಟರ್ನಲ್ಲಿ ನಡೆಯಿತು. ಸಮಾಜದ ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ತುಳು-ಕನ್ನಡಿಗರಿಗಾಗಿ ಈ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರದಲ್ಲಿ ರಕ್ತದೊತ್ತಡ, ಸಕ್ಕರೆ ಕಾಯಿಲೆ ತಪಾಸಣೆ, ನೇತ್ರ ಮತ್ತು ಹಲ್ಲಿನ ತಪಾಸಣೆ ಹಾಗೂ ಚರ್ಮ ರೋಗಗಳ ತಪಾಸಣೆ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಸಮಾಜದ ಹಾಗೂ ಸ್ಥಳೀಯ ತುಳು-ಕನ್ನಡಿಗರು ಹಾಗೂ ಇನ್ನಿತರ ಭಾಷಿಕ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು ಪಡೆದರು.
ಸುಮಾರು 200 ಶಿಬಿರಾರ್ಥಿಗಳು ಪಾಲ್ಗೊಂಡು ವಿವಿಧ ಕಾಯಿಲೆಗಳ ಬಗ್ಗೆ ತಪಾಸಣೆಗೊಳಪಟ್ಟು ಕಾಯಿಲೆಗಳ ಬಗ್ಗೆ ಮಾಹಿತಿ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರ ಪಡೆದರು. ಜಿಎಸ್ಬಿಎಸ್ ಮೆಡಿಕಲ್ ಟ್ರಸ್ಟ್ ಇದರ ಪ್ರಸಿದ್ಧ ವೈದ್ಯಾಧಿಕಾರಿಗಳು, ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಸಹಕರಿಸಿದರು.
ಶಿಬಿರದಲ್ಲಿ ವಿವಿಧ ಕಾಯಿಲೆಗಳ ತಜ್ಞ ವೈದ್ಯರು ಪಾಲ್ಗೊಂಡಿದ್ದರು. ಜಿಎಸ್ಬಿಎಸ್ ಮೆಡಿಕಲ್ ಟ್ರಸ್ಟ್ ದಾದರ್ ಪೂರ್ವ, ಮುಂಬಯಿ ಮರಾಠಿ ಗ್ರಂಥ ಸಂಗ್ರಹಾ
ಲಯ, ದಸ್ತುರ್ವಾಡಿ, ಶಿಲ್ಪಾ ಅಪಾರ್ಟ್ಮೆಂಟ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯು ವರ್ಷಪೂರ್ತಿ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ, ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…