ಜಿಎಸ್ಬಿಎಸ್ ಮೆಡಿಕಲ್ ಟ್ರಸ್ಟ್ ವಡಾಲ: ಆರೋಗ್ಯವಂತ ಶಿಶು ಸ್ಪರ್ಧೆ
Team Udayavani, Oct 31, 2018, 3:30 PM IST
ಮುಂಬಯಿ: ಜಿಎಸ್ಬಿಎಸ್ ಮೆಡಿಕಲ್ ಟ್ರಸ್ಟ್ ವತಿಯಿಂದ ಗಣೇಶೋತ್ಸವದ ಅಂಗವಾಗಿ ಆರೋಗ್ಯವಂತ ಶಿಶು ಸ್ಪರ್ಧೆ ಕಾರ್ಯಕ್ರಮವು ಇತ್ತೀಚೆಗೆ ವಡಾಲ ಶ್ರೀ ರಾಮ ಮಂದಿರದ ದ್ವಾರಕನಾಥ ಭವನದಲ್ಲಿ ನಡೆಯಿತು.
ಸಮಾಜದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಒಂದು ವರ್ಷದೊಳಗಿನ ಮಕ್ಕಳ ವಿಭಾಗ, ಒಂದರಿಂದ ಮೂರು ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ಸ್ಪರ್ಧೆಯು ಜರಗಿತು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ತಜ್ಞ ವೈದ್ಯರು ಮಕ್ಕಳನ್ನು ಪರೀಕ್ಷಿಸಿ ವಿಜೇತ ಮಕ್ಕಳನ್ನು ಘೋಷಿಸಿದರು. ತೀರ್ಪುಗಾರರುಗಳಾಗಿ ಡಾ| ಸುಹಾಸ್ ಪ್ರಭು, ಡಾ| ಕೆ. ಸಿ. ಪತ್ರ, ಡಾ| ನಮೃತಾ ಶೇಣಿÌ ಮತ್ತು ಡಾ| ಅವಿನಾಶ್ ದೇಸಾಯಿ ಅವರು ಸಹಕರಿಸಿದರು.
ವಿಜೇತ ಸ್ಪರ್ಧಿಗಳಿಗೆ ಇಂಡೊಕೋ ರೆಮೇಡಿಯಸ್ ಪ್ರಾಯೋಜಕತ್ವದಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಒಂದು ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ಮಾ| ದೇವಾಂಶ್ ಸಾದ್ಫುಲೆ, 1 ವರ್ಷದಿಂದ ಮೂರು ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ನ್ಯಾಸಾ ಸದ್ಫುಲೆ ಅವರು ಪ್ರಶಸ್ತಿಯನ್ನು ಪಡೆದರು.
ಡಾ| ಸುಹಾಸ್ ಪ್ರಭು ಅವರು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಸುನೀತಾ ರಾವ್ ಅವರು ಪಾಲ್ಗೊಂಡು ಸ್ಪರ್ಧೆಗೆ ಸಹಕರಿಸುವುದರೊಂದಿಗೆ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಡಾ| ಪ್ರದೀಪ್ ಆಚಾರ್ಯ ಮಾತನಾಡಿ, ಜಿಎಸ್ಬಿಎಸ್ ಮೆಡಿಕಲ್ ಟ್ರಸ್ಟ್ ನಾಲ್ಕು ಶಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಂದಿನ ಸ್ಪರ್ಧೆಗೆ ಸಹಕರಿಸಿದ ಎಲ್ಲಾ ಕಾರ್ಯಕರ್ತರಿಗೆ, ವಡಾಲದ ಮಠದವರಿಗೆ, ಜಿಎಸ್ಬಿಎಸ್ ಮಹಿಳಾ ವಿಭಾಗದವರ ಸೇವೆಗೆ ಕೃತಜ್ಞತೆ ಸಲ್ಲಿಸಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು