ಆಹಾರ್‌ನ ಕಾರ್ಯಕಾರಿ ಸಮಿತಿಯ 10ನೇ ಮಾಸಿಕ ಸಭೆ


Team Udayavani, Nov 7, 2017, 2:02 PM IST

05-Mum06a.jpg

ಮುಂಬಯಿ: ಆಹಾರ್‌ನ ಕಾರ್ಯಕಾರಿ ಸಮಿತಿಯ 10ನೇ ಮಾಸಿಕ ಸಭೆಯು ಅ. 26 ರಂದು ಕಾಂದಿವಲಿ ಪೂರ್ವದ ಹೊಟೇಲ್‌ ಅವೆನ್ಯೂ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ವಲಯ ಹತ್ತರ ಪ್ರಾಯೋಜಕತ್ವದಲ್ಲಿ, ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ಅವರ ತಂಡದ ಆಯೋಜನೆಯಲ್ಲಿ ನಡೆಯಿತು.

ವಲಯ-10ರ ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ಅವರು ಸ್ವಾಗತಿಸಿ, ಸಭೆಯ ಉದ್ದೇಶವನ್ನು ವಿವರಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಆಹಾರ್‌ನ ಅಧ್ಯಕ್ಷ ಆದರ್ಶ್‌ ಶೆಟ್ಟಿ ಅವರು ಅಕ್ಟೋಬರ್‌ನಲ್ಲಿ ಸಂಸ್ಥೆಯು ಕೈಗೊಂಡಿರುವ ಅನೇಕ ಅಭಿವೃದ್ಧಿಪರ ಕಾರ್ಯಗಳ ಬಗ್ಗೆ ವಿವರಿಸಿ ಮಾತನಾಡಿ, ಜಿಎಸ್‌ಟಿ ದರದಲ್ಲಿ ಶೇ. 18 ರಿಂದ ಶೇ. 12ಕ್ಕೆ ತಿದ್ದುಪಡಿ ಶೀಘ್ರದಲ್ಲೇ ಜಾರಿಯಾಗಲಿದೆ. ಈಗಾಗಲೇ ಜಿಎಸ್‌ಟಿ ಕೌನ್ಸಿಲ್‌ ಅಧ್ಯಕ್ಷ ಸುಶೀಲ್‌ ಕುಮಾರ್‌ ಮೋದಿ ಅವರ 5 ಮಂದಿಯ ಮಂಡಳಿಯಲ್ಲಿದ್ದು, ಶೀಘ್ರದಲ್ಲೇ ಜಾರಿಯಾಗಲಿದೆ. ಅದರಲ್ಲೂ 4 ಸಭಾ ಸದಸ್ಯರ ಸಹಕಾರ ತಮ್ಮೊಂದಿಗಿದ್ದು, ಆಹಾರ್‌ ನಿಯೋಗವು ಪ್ರತಿಯೋರ್ವರನ್ನು ಭೇಟಿಯಾಗಿ ವಿನಂತಿಸಿದೆ. ಒಣ ಮತ್ತು ಹಸಿ ತ್ಯಾಜ್ಯಗಳ ವಿಂಗಡಣೆ ಮತ್ತು ವಿಲೇವಾರಿಯ ಬಗ್ಗೆ ಮಾಹಿತಿ ನೀಡಿದ ಅವರು, ಈಗಾಗಲೇ ಒಣ ಮತ್ತು ಹಸಿ ತ್ಯಾಜ್ಯಗಳ ಬೇರ್ಪಡಿಸುವಿಕೆ ಮಾಡದಿರುವುದು ಬೇಸರದ ಸಂಗತಿ. ಇದರಿಂದಾಗಿ ನಮ್ಮ ನಿಯೋಗಕ್ಕೆ ನಗರ ಪಾಲಿಕೆಯಲ್ಲಿ ಹಿನ್ನಡೆಯಾಗಿದೆ. ಆದ್ದರಿಂದ ಪ್ರತಿಯೋರ್ವ ಹೊಟೇಲಿಗರೂ ಇದರಲ್ಲಿ ಕೈಜೋಡಿಸಬೇಕು. ಮಹಾನಗರ ಪಾಲಿಕೆಯ ಆಯುಕ್ತ ಅಜೋಯ್‌ ಮೆಹ್ತಾ ಹಾಗೂ ಉಪಾಯುಕ್ತ ರಮೇಶ್‌ ಪವಾರ್‌ ಜತೆ ನಮ್ಮ ಭೇಟಿಯು ಫಲಪ್ರದವಾಗಿದ್ದು, ನಮ್ಮ ಭೇಟಿಯ ಅನಂತರ ಅವರು ನಗರದ ಎಲ್ಲಾ ವಾರ್ಡ್‌ ಅಧಿಕಾರಿಗಳಿಗೆ ತ್ಯಾಜ್ಯ ವಿಲೇವಾರಿ ವಿಷಯದಲ್ಲಿ ಯಾವುದೇ ಹೊಟೇಲಿಗರಿಗೆ ತೊಂದರೆ ನೀಡದೆ ಅದನ್ನು ವಿಲೇವಾರಿ ಮಾಡುವಂತೆ ಸಂದೇಶ ರವಾನಿಸಿದ್ದಾರೆ. ಸಂಸತ್‌ ಸದಸ್ಯ ರಾಹುಲ್‌ 

ಶೆವಾಲೆ ಅವರು ನಮಗೆ ತ್ಯಾಜ್ಯ ವಿಲೇವಾರಿಹಾಗೂ ರೂಫ್‌ಟಾಪ್‌ ರೆಸ್ಟೋರೆಂಟ್‌ ವಿಷಯದಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ಎಫ್‌ಎಸ್‌ಎಸ್‌ಐ ಸಮಿತಿಯ ಉಪಾಧ್ಯಕ್ಷ ಪ್ರಮೋದ್‌ ನಾಯಕ್‌ ಹಾಗೂ ನಂದು ಶೆಟ್ಟಿ ಅವರ ಅವಿರತ ಪ್ರಯತ್ನದಿಂದ ಎಫ್‌ಒಎಸ್‌ಟಿಸಿ ಕಾರ್ಯಕ್ರಮವು ಹೊಟೇಲ್‌ ಮಾಲಕರು ಮತ್ತು ಕಾರ್ಮಿಕರು ಭಾಗಿಯಾಗುವುದರೊಂದಿಗೆ ತುಂಬಾ ಯಶಸ್ಸು ಕಂಡಿದೆ. ಸುಮಾರು 1412 ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಇದರ ಲಾಭವನ್ನು ಗಳಿಸಿದ್ದಾರೆ. ಆಹಾರ್‌ ನಿಯೋಗವು ವೆಸ್ಟರ್ನ್ ಇಂಡಿಯಾ ಸಂಸ್ಥೆ ಮತ್ತು ವೈನ್‌ಶಾಪ್‌ ಸಂಘಟನೆಗಳ ಜೊತೆಗೂಡಿ ಸಾಂತಾಕ್ರೂಜ್‌ ಪೊಲೀಸ್‌ ಠಾಣೆಯ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೊಟೇಲ್‌ಗ‌ಳ ಡ್ರೈಡೇಯದ್ದು ರದ್ದು ಮಾಡುವಲ್ಲಿ ಯಶಸ್ವಿಯಾಗಿದೆ. ಆದರೆ ಛs…ಪೂಜೆ ಪ್ರಯುಕ್ತ ಡ್ರೈಡೇಯನ್ನು ಜಿಲ್ಲಾಧಿಕಾರಿ ಘೋಷಿಸಿದ್ದರು ಎಂದು ನುಡಿದರು.

ಆಹಾರ್‌ನ ಚುನಾವಣಾಧಿಕಾರಿ ಡಿ. ಕೆ. ಶೆಟ್ಟಿ ಅವರು ಮುಂಬರುವ ಅಸೋಸಿಯೇಶನ್‌ನಚುನಾವಣೆ  ದಿನಾಂಕ, ಸಿದ್ಧತೆಗಳ ಬಗ್ಗೆ ವಿವರಿಸಿದರು. ಸಂಸದ ಗೋಪಾಲ್‌ ಶೆಟ್ಟಿ ಅವರು ಆಗಮಿಸಿ,  ಹೊಟೇಲ್‌ ಉದ್ಯಮದ ಮುಂದಿರುವ ಸಮಸ್ಯೆಗಳನ್ನು ಆಹಾರ್‌ ಉತ್ತಮವಾಗಿ ನಿವಾರಿಸುವಲ್ಲಿ ಯಶಸ್ಸನ್ನು ಕಾಣುತ್ತಿದೆ. ಹೊಟೇಲಿಗರ ಸಮಸ್ಯೆಗಳಿಗೆ ಹಗಲಿರುಳು ಶ್ರಮಿಸುತ್ತಿರುವ ಆಹಾರ್‌ನ ಪದಾಧಿಕಾರಿಗಳ ಕಾರ್ಯವೈಖರಿ ಅಭಿನಂದನೀಯವಾಗಿದೆ. ಜಿಎಸ್‌ಟಿ ದೇಶದ ಪ್ರಗತಿಗೆ ಇಟ್ಟ ಒಂದು ಹೆಜ್ಜೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಸಂಸದ ಗೋಪಾಲ್‌ ಶೆಟ್ಟಿ ಅವರನ್ನು ಗೌರವಿಸಲಾಯಿತು. ಮಾಜಿ ಅಧ್ಯಕ್ಷರು ಹಾಗೂ ಸಲಹೆಗಾರರಾದ ಚಂದ್ರಹಾಸ್‌ ಕೆ. ಶೆಟ್ಟಿ ಸಲಹೆ ಸೂಚನೆಗಳನ್ನು ನೀಡಿದರು. ವಲಯ ಒಂದರ ಉಪಾಧ್ಯಕ್ಷ ಮಹೇಂದ್ರ ಕರ್ಕೇರ, ವಲಯ ಎರಡರ ಉಪಾಧ್ಯಕ್ಷ ಕೆ. ವಿ. ಶೆಟ್ಟಿ, ವಲಯ ಮೂರರ ಉಪಾಧ್ಯಕ್ಷ ವಿಜಯ ಶೆಟ್ಟಿ, ವಲಯ 4ರ ಉಪಾಧ್ಯಕ್ಷ ಸುನೀಲ್‌ ಶೆಟ್ಟಿ, ವಲಯ 5ರ ಉಪಾಧ್ಯಕ್ಷ ರವೀಂದ್ರನಾಥ ನೀರೆ, ವಲಯ 6ರ ಉಪಾಧ್ಯಕ್ಷ ಅಮರ್‌ ಶೆಟ್ಟಿ, ವಲಯ 7 ರಉಪಾಧ್ಯಕ್ಷ ರಾಜನ್‌ ಶೆಟ್ಟಿ, ವಲಯ 8ರ ಉಪಾಧ್ಯಕ್ಷ ಜಗದೀಶ್‌ ಶೆಟ್ಟಿ, ವಲಯ 9ರ ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ವಲಯ ಹತ್ತರ ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ಅವರು ನೂತನ ಸದಸ್ಯರ ಸೇರ್ಪಡೆ ಮತ್ತು ಆಯಾಯ ವಲಯಗಳ ಸಾಧನೆಗಳನ್ನು ವಿವರಿಸಿದರು.

ವಿಶ್ವಪಾಲ್‌ ಶೆಟ್ಟಿ ಅವರು ಸಭೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಂಪೆನಿಗಳ ಸ್ಟಾಲ್‌ಗ‌ಳ ಮುಖ್ಯಸ್ಥರನ್ನು ಪರಿಚಯಿಸಿದರು. ವಲಯ 10ರ ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ಸ್ವಾಗತಿಸಿದರು. ಸಂತೋಷ್‌ ಶೆಟ್ಟಿ ವಂದಿಸಿದರು. ಸದಸ್ಯ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.