ಶಾಲೆಯಲ್ಲಿ ಉದ್ಯಮಶೀಲತೆ ಕುರಿತು ಮಕ್ಕಳಿಗೆ ಮಾರ್ಗದರ್ಶನ


Team Udayavani, Jun 6, 2021, 1:01 PM IST

vcZSx

ಪುಣೆ: ಶಾಲಾ ಹಂತದಿಂದಲೇ ಇನೋವೇಶನ್‌ ಮತ್ತು ಉದ್ಯಮಶೀಲತೆ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯು ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಮತ್ತು ಶಿಕ್ಷಣ ಇಲಾಖೆಯ ಇನ್ನೋವೇಶನ್‌ ಘಟಕದ ಸಹಯೋಗದೊಂ ದಿಗೆ ಇನೋವೇಶನ್‌ ಅಂಬಾಸಿಡರ್‌ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ.

ಈ ಯೋಜನೆಯಡಿಯಲ್ಲಿ ಸಿಬಿಎಸ್‌ಇ ಅಂಗಸಂಸ್ಥೆ ಶಾಲೆಗಳ 50,000 ಶಿಕ್ಷಕರಿಗೆ ನಾವೀನ್ಯತೆ ಪಾಠಗಳ ತರಬೇತಿ ನೀಡಲಾ ಗುವುದು. ಇವರ ಮೂಲಕ ಶಾಲಾ ಮಟ್ಟದಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಗೆ ಅನು ಕೂಲಕರ ವಾತಾವರಣವನ್ನು ಸೃಷ್ಟಿಸಲು ಒತ್ತು ನೀಡಲಾಗುತ್ತದೆ. ತರಬೇತಿಯು ಚಿಂತನೆ ಮತ್ತು ನಾವೀನ್ಯತೆ, ನಾವೀನ್ಯತೆ ಮತ್ತು ಸಹಯೋಗ, ಬೌದ್ಧಿಕ ಆಸ್ತಿ ಹಕ್ಕುಗಳು, ಉತ್ಪಾದನೆ ಮತ್ತು ಮಾದರಿ ರಚನೆಯನ್ನು ಒಳಗೊಂಡಿದೆ.

ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ

ತರಬೇತಿ ಪಡೆದ ಶಿಕ್ಷಕರು ಶಾಲೆಯಲ್ಲಿ ಹೊಸತನ, ಉದ್ಯಮಶೀಲ ವಾತಾವರಣವನ್ನು ಸೃಷ್ಟಿಸುವುದು, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದು, ಹತ್ತಿರದ ಶಾಲೆಗಳಿಗೆ ಸಹಕರಿಸುವುದು ಮತ್ತು ಮಾರ್ಗದರ್ಶನ ನೀಡುವುದು, ರಾಷ್ಟ್ರಮಟ್ಟದ ನಾವೀನ್ಯತೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಚಟುವಟಿಕೆಗಳನ್ನು ಮಾಡಲಿದ್ದಾರೆ. ಶಾಲಾ ಹಂತದಿಂದ ವಿದ್ಯಾರ್ಥಿಗಳಲ್ಲಿ ಹೊಸತನವನ್ನು ಬೆಳೆಸುವುದು ಅವಶ್ಯಕ. ಇದನ್ನು ಪ್ರೋತ್ಸಾಹಿಸಲು ಈ ಯೋಜನೆಯನ್ನು ತರಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ಮುಖ್ಯ ಆವಿಷ್ಕಾರ ಅಧಿಕಾರಿ ಡಾ| ಅಭಯ್‌ ಜೆರೆ ಅವರು ಹೇಳಿದ್ದಾರೆ.

ಇನೋವೇಶನ್‌ ಅಂಬಾಸಿಡರ್‌ ಯೋಜನೆಗೆ ಶಿಕ್ಷಕರ ಆಯ್ಕೆ

ಇನೋವೇಶನ್‌ ಅಂಬಾಸಿಡರ್‌ ಯೋಜನೆಗೆ ಶಿಕ್ಷಕರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಈ ಶಿಕ್ಷಕರಿಗೆ ತರಬೇತಿ ಮುಂದಿನ ತಿಂಗಳುಗಳಲ್ಲಿ ಪ್ರಾರಂಭವಾಗಲಿದೆ. ಇಲ್ಲಿಯವರೆಗೆ ಶಾಲೆಗಳಲ್ಲಿ ಕೆ-ಟರ್ನ್ ಫಲಿತಾಂಶ ಸ್ಪರ್ಧೆ ಇತ್ತು. ಆದರೆ ಈಗ ಶಾಲೆಗಳು ಎಷ್ಟು ಕ್ರೀಯಾಶಿಲವಾಗಿವೆ, ಎಷ್ಟು ಹೊಸ ಆವಿಷ್ಕಾರಗಳನ್ನು ರಚಿಸಿದೆ, ಎಷ್ಟು ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದೆ ಎನ್ನವುದರಲ್ಲಿ ಸ್ಪರ್ದಿಸಬೇಕಾಗಿದೆ ಎಂದು ಜೆರೆ ಅವರು ಹೇಳಿದ್ದಾರೆ.

ಉದ್ಯಮಶೀಲತೆಯ ಅಭಿವೃದ್ಧಿ

10, 12 ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಿಂದ ನಮ್ಮ ವಿದ್ಯಾರ್ಥಿಗಳ ಸೃಜನಶೀಲತೆಗೆ ಅಡ್ಡಿಯಾಗಿದೆ. ಪ್ರಸ್ತುತ ಇಂತಹ ಪ್ರಯೋಗಗಳಿಗೆ ಶಾಲಾ ಪಠ್ಯಕ್ರಮದಲ್ಲಿ ಸ್ಥಾನವಿಲ್ಲ. ವಿದ್ಯಾರ್ಥಿಗಳ ಗುಣಮಟ್ಟ, ಬುದ್ಧಿವಂತಿಕೆ, ಕೌಶಲ ಮತ್ತು ಸೃಜನಶೀಲತೆಯ ಮೂಲಕ ನವೀನ ಉತ್ಪನ್ನಗಳು, ಉದ್ಯಮಶೀಲತೆಯನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ. ಶಾಲೆಗಳಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ಗಳನ್ನು ರಚಿಸಲಾಗಿದ್ದರೂ, ಅವರಿಗೆ ಮಾರ್ಗದರ್ಶನ ನೀಡಲು ಸಮರ್ಥ ಶಿಕ್ಷಕರು ಇರಬೇಕು. ಆ ಅಗತ್ಯವನ್ನು ಪೂರೈಸಲು ಇನ್ನೋವೇಶನ್‌ ಅಂಬಾಸಿಡರ್‌ ಯೋಜನೆ ಮುಖ್ಯವಾಗಿರುತ್ತದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.