ಮುಂಬಯಿ ಕನ್ನಡಿಗರು ಮಾತೃತ್ವ ಉಳಿಸಿದ್ದಾರೆ: ಸುಬ್ರಾಯ ಚೊಕ್ಕಾಡಿ


Team Udayavani, May 27, 2018, 3:56 PM IST

2605mum07.jpg

ಮುಂಬಯಿ: ಗ್ರಾಮೀಣ ಮತ್ತು ಹೊರನಾಡ ಕನ್ನಡಿಗರು ಮಾತ್ರ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಆದರೆ ಒಳನಾಡ ಕನ್ನಡಿಗರಲ್ಲಿ ಇದು ಮರೆಯಾಗುತ್ತಿರುವುದು ದುರದೃಷ್ಟಕರ. ಹೊರನಾಡಿನ ಜನರಿಂದಲೇ ಭಾಷೆ, ಸಂಸ್ಕೃತಿಯ ಉಳಿವು ಸ್ತುತ್ಯರ್ಹ. ಮುಂಬಯಿ ಕನ್ನಡಿಗರು ಮಾತೃತ್ವವನ್ನು ಉಳಿಸಿದ್ದಾರೆ. ನಾನು ನನಗಾಗಿ, ಬದುಕಿಗಾಗಿ ಬರೆಯುತ್ತಿದ್ದವ. ಆದರೆ ನನ್ನ ಬರವಣಿಗೆ ಓದುವ ಸಾಹಿತ್ಯಾಸಕ್ತ ಸ್ನೇಹಿತರಿಂದ ಈ ಮಟ್ಟಕ್ಕೆ ಬೆಳೆದಿದ್ದೆನೆ. ರಾತ್ರಿ ಬೆಳಗಾಗುವ ಒಳಗೆ ಪುಸ್ತಕಗಳನ್ನು ನಾಡಿನಾದ್ಯಂತ ಹೊತ್ತು ಮಾರಿದ ಕಾರಣ ನನ್ನ ಬರವಣಿಗೆಯು ವಿಸ್ತಾರವಾಯಿತು. ಜೊತೆಗೆ ನನ್ನ ಓದಿನ ಪ್ರೀತಿ ಸಂಪಾದನೆ ಆಯಿತು. ಇವೆಲ್ಲವುಗಳ ಫಲವೇ ಈ ಪ್ರಶಸ್ತಿಯಾಗಿದೆ ಎಂದು ಸಾಹಿತಿ,  ಕವಿ, ವಿಮರ್ಶಕ ಹಾಗೂ ಶಿಕ್ಷಕ ಸುಬ್ರಾಯ ಚೊಕ್ಕಾಡಿ  ತಿಳಿಸಿದರು.

ಮೇ 26ರಂದು ಸಂಜೆ ಸಾಂತಾಕ್ರೂಜ್‌ ಪೂರ್ವ  ಬಿಲ್ಲವರ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮುಖವಾಣಿ ಅಕ್ಷಯ ಮಾಸಿಕದ ಮಾಜಿ ಗೌರವ ಪ್ರಧಾನ ಸಂಪಾದಕ ಎಂ. ಬಿ. ಕುಕ್ಯಾನ್‌ ಪ್ರಾಯೋಜಿತ ಶ್ರೀ ಗುರು ನಾರಾಯಣ ಸಾಹಿತ್ಯ ಪ್ರಶಸ್ತಿ-2018ನ್ನು ಸ್ವೀಕರಿಸಿ ಅವರು ಮಾತನಾಡಿ ಕೃತಜ್ಞತೆ ಸಲ್ಲಿಸಿದರು. ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭಕ್ಕೆ ಚೊಕ್ಕಾಡಿ ದೀಪ ಬೆಳಗಿಸಿ ಚಾಲನೆಯನ್ನಿತ್ತರು. ಬಿಲ್ಲವರ ಮಹಾಮಂಡಲ ಅಧ್ಯಕ್ಷ ಜಯ ಸಿ. ಸುವರ್ಣ ಪ್ರಧಾನ ಅಭ್ಯಾಗತರಾಗಿದ್ದು ಚೊಕ್ಕಾಡಿ ಅವರಿಗೆ 25,000 ರೂ.  ನಗದು, ಪ್ರಶಸ್ತಿ ಫಲಕ, ಸಮ್ಮಾನ ಪತ್ರದೊಂದಿಗೆ ಪ್ರಶಸ್ತಿಯನ್ನು ಪ್ರದಾನಿಸಿ ಅಭಿನಂದಿಸಿದರು.

ನಾಡಿನ ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ಅವರು ಅಕ್ಷಯ ಮಾಸಿಕದ ಸಂಪಾದಕ ಡಾ| ಈಶ್ವರ ಅಲೆವೂರು ರಚಿತ  “ಪ್ರಗತಿಪರ ಚಿಂತನೆಯ ಸಾಹಿತಿ ಎಂ.ಬಿ ಕುಕ್ಯಾನ್‌’ ಕೃತಿಯನ್ನು ಬಿಡುಗಡೆಗೊಳಿಸಿದರು.
ನನ್ನನ್ನು ಸಾಹಿತಿಯಾಗಿಸಿದ್ದೇ ಜಯ ಸುವರ್ಣರು. ಅವರಿಂದಾಗಿ ಸರಸ್ವತಿಯನ್ನು, ಸ್ವಂತಿಕೆಯಿಂದ ಲಕ್ಷ್ಮೀಯನ್ನು ಒಲಿಸಿಕೊಂಡಿ ದ್ದೇನೆ. ಅಕ್ಷಯದೊಂದಿಗೆ ನಾನೂ ಬೆಳೆದಿದ್ದೇನೆ. ನಾರಾಯಣ ಗುರುಗಳಿಂದ ಪ್ರೇರಿತನಾಗಿ ನಾನು ಬಹಳಷ್ಟು ಸಂಪಾದಿಸಿದ್ದೇನೆ. ಅದ್ದ ರಿಂದ ಈ ಪ್ರಶಸ್ತಿಯನ್ನು ನಾನು ಗುರು ಗಳಿಗೆ ಸಮರ್ಪಿಸಿದ್ದೇನೆ ಎಂದು ಪ್ರಶಸ್ತಿ ಯ ಪ್ರಾಯೋಜಕ ಎಂ. ಬಿ. ಕುಕ್ಯಾನ್‌ ಅಭಿಪ್ರಾಯಿಸಿದರು.

ಈ ಬಾರಿಯೂ ಯೋಗ್ಯ ವ್ಯಕ್ತಿಗೆ ಈ ಪ್ರಶಸ್ತಿ ಸಂದಿದೆ ಎಂದ ಸುನೀತಾ ಶೆಟ್ಟಿ ಅವರು, ಚೊಕ್ಕಾಡಿಯವರ ಬರಹ, ಕವಿತೆಗಳ ಬಗ್ಗೆ ಮೆಲುಕು ಹಾಕಿದರು. ಅಂತೆಯೇ ಎಂ. ಬಿ. ಕುಕ್ಯಾನ್‌ ಬಗ್ಗೆ ಅಲೆವೂರು ಬರೆದ ಕೃತಿಯೂ ಶ್ಲಾಘನೀಯವಾಗಿದೆ. ಸಮಾಜದಲ್ಲಿ ಸರ್ವೋತ್ಕೃಷ್ಟ ಸೇವೆಗೈದ ಮಹಾನೀಯರನ್ನು ಗುರುತಿಸುವ ಅಗತ್ಯವಿದೆ ಎಂದು ನುಡಿದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಿಲ್ಲವರ ಭವನದಲ್ಲಿ ಈ ಹಿಂದೆ ಸೇವಾನಿರತರಾಗಿದ್ದು, ಇತ್ತೀಚೆಗೆ ಮುಂಬಯಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್‌ ಪದವಿ ಪಡೆದ  ಡಾ| ಮೋಹನ್‌ ಬೊಳ್ಳಾರು ಅವರನ್ನು ಅಭಿನಂದಿಸಿ ಗೌರವಿಸಿದರು.
ಅಸೋಸಿಯೇಶನ್‌ನ ಉಪಾಧ್ಯಕ್ಷರುಗಳಾ ದ ನ್ಯಾಯವಾದಿ ರಾಜ ವಿ. ಸಾಲ್ಯಾನ್‌, ಶಂಕರ ಡಿ. ಪೂಜಾರಿ, ಡಾ| ಯು. ಧನಂಜಯ ಕುಮಾರ್‌, ಗೌ| ಪ್ರ| ಕೋಶಾಧಿಕಾರಿ ಮಹೇಶ್‌ ಸಿ. ಕಾರ್ಕಳ, ಮಹಿಳಾ ವಿಭಾಗಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಮತಾ ಆರ್‌. ನಾಯಕ್‌ ಪ್ರಾರ್ಥನೆಗೈದರು. ಅಸೋಸಿಯೇಶನ್‌ನ ಗೌ| ಪ್ರ| ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಜಯರಾಮ ಜಿ. ನಾಯಕ್‌ ಪುರಸ್ಕೃತರನ್ನು ಪರಿಚಯಿಸಿದರು. ಅಕ್ಷಯ ಸಹ ಸಂಪಾದಕ ಹರೀಶ್‌ ಹೆಜ್ಮಾಡಿ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ನ್ಯಾಯವಾದಿ ಸತೀಶ್‌ ಎನ್‌.ಬಂಗೇರ ವಂದಿಸಿದರು.

ಮನೋರಂಜನಾ ಕಾರ್ಯಕ್ರಮವಾಗಿ ಗುರುನಾರಾಯಣ ರಾತ್ರಿ ಶಾಲಾ ಹಳೆ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಮತ್ತು  ಮರಾಠಿ ಮೂಲದ ಕಾವ್ಯಾ ಕಣಂಜಾರ್‌ ತುಳು ಭಾಷೆಗೆ ಅನುವಾದಿಸಿದ “ಕುಡೊಂಜಿ ಕತೆ’ ತುಳು ನಾಟಕ‌ವನ್ನು ಮಧುಕರ್‌ ಮಾನೆ ನಿರ್ದೇಶನ ಹಾಗೂ ಸದಾಶಿವ ಎ. ಕರ್ಕೇರ ಮತ್ತು ಗಣೇಶ ಸುವರ್ಣ ಇವರ ಪ್ರಾಯೋಜಕತ್ವದಲ್ಲಿ ಅಸೋ ಸಿಯೇಶನ್‌ನ ನಲ್ಲಸೋಪರ – ವಿರಾರ್‌ ಸ್ಥಳೀ ಯ ಸಮಿತಿಯ ಸದಸ್ಯರು ಪ್ರದರ್ಶಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಧರ್ಮೇಶ್‌ ಎಸ್‌. ಸಾಲ್ಯಾನ್‌ ಕಾರ್ಯಕ್ರಮ ನಿರೂಪಿಸಿದರು.

  ಗುರುನಾರಾಯಣ ಅವರ ತತ್ವಾನುಸಾರ ಮುನ್ನಡೆಯುವ ಬಿಲ್ಲವ ಸಮಾಜ ಗುರುಗಳ ಅನುಗ್ರಹದಿಂದ ಸಾಹಿತ್ಯ ಸೇವೆಯಲ್ಲಿ ತೊಡಗಿಸಿಕೊಂಡು ಅರ್ಹ ಸಾಹಿತಿಗಳನ್ನು ಗುರುತಿಸಿ ಗೌರವಿಸುತ್ತಿದೆ. ಇಂತಹ ಪ್ರಶಸ್ತಿ ಒಂದು ಉತ್ತಮ ಮತ್ತು ಆದರ್ಶವಾದ ಕಾಯಕವಾಗಿದೆ. ಭವಿಷ್ಯತ್ತಿನುದ್ದಕ್ಕೂ ಈ ಪ್ರಶಸ್ತಿ ಯೋಗ್ಯವ್ಯಕ್ತಿಗಳಿಗೆ ಪ್ರಾಪ್ತಿಯಾಗಲಿ. ಇದು ಯುವ ಪೀಳಿಗೆಯೂ ಮಾದರಿಯಾಗಬೇಕು. ಬಿಲ್ಲವ ಸಂಸ್ಥೆಯೂ, ಸಮಾಜವು ಸಾಹಿತ್ಯಕವಾಗಿಯೂ ಸಾಮರಸ್ಯವಾಗಿ ಮುನ್ನಡೆಯುತ್ತಿರಲಿ 
– ನಿತ್ಯಾನಂದ ಡಿ. ಕೋಟ್ಯಾನ್‌ 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.