ದಹಿಸರ್‌ ಶ್ರೀ ಕಾಶೀ ಮಠದಲ್ಲಿ ಗುರುಕೃಪಾ ಕಲಾರಂಗ ಸಂಸ್ಥೆಯ ಉದ್ಘಾಟನೆ


Team Udayavani, May 30, 2018, 4:26 PM IST

2905mum02a.jpg

ಮುಂಬಯಿ: ಯಾವುದೇ ಒಂದು ಸಂಸ್ಥೆ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆ ಸುತ್ತಿದ್ದರೆ, ಆ ಸಂಸ್ಥೆಯು ತನ್ನ ಸಮಾಜದ ಮುಂದಿನ ನವಪೀಳಿಗೆಗೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ-ಬೆಳೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ದಹಿಸರ್‌ ಶ್ರೀ ಕಾಶಿ ಮಠವು ಗುರುಕೃಪಾ ಕಲಾರಂಗವನ್ನು ಸ್ಥಾಪಿಸಿ ಅದರ ಮುಖಾಂತರ ಜಾನಪದ ಕಲೆಯಲ್ಲಿ ಮೇರು ಕಲೆಯಾದ ಯಕ್ಷಗಾನವನ್ನು ಆಡಿತೋರಿಸಿ ಮಕ್ಕಳ ಮನಸ್ಸಿನಲ್ಲಿ ಧಾರ್ಮಿಕತೆಯನ್ನು ಮೂಡಿಸುತ್ತಿ ರುವುದು ಹೆಮ್ಮೆಯ ವಿಷಯವಾಗಿದೆ. ನಮ್ಮಿà ಸಮಾಜ ಬಾಂಧವರು ಇದರ ಸದುಪಯೋಗವನ್ನು ಪಡೆದುಕೊಳ್ಳುವ ಅಗತ್ಯವೂ, ಅನಿವಾರ್ಯವೂ ಇದೆ ಎಂದು ನಾಟಕಕಾರ, ನಿರ್ದೇಶಕ ಸಿ. ಎನ್‌. ಶೆಣೈ ಅವರು ನುಡಿದರು.

ಮೇ 20 ರಂದು ದಹಿಸರ್‌ ಕಾಶೀ ಮಠದ ಸಭಾಗೃಹದಲ್ಲಿ ಗುರುಕೃಪಾ ಕಲಾರಂಗವನ್ನು ಉದ್ಘಾಟಿಸಿ ಮಾತನಾಡಿದ ಇವರು, ಕಾಶೀ ಮಠಾಧೀಶ ಶ್ರೀಮದ್‌ ಸ್ವಯಂ ಮೀಂದ್ರ ಸ್ವಾಮೀಜಿ ಅವರ ಅಭಯ ಹಸ್ತ ಹಾಗೂ ನಮ್ಮಿà ಸಮಾಜದ ಅಧ್ಯಕ್ಷ ಮೋಹನ್‌ದಾಸ್‌ ಪಿ. ಮಲ್ಯ ಅವರ ಪ್ರೇರಣೆಯಿಂದ ಈ ಕಲಾರಂಗವು ಉದ್ಘಾಟನೆ ಗೊಂಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಗುರುಕೃಪಾ ಕಲಾರಂಗದ ಪರವಾಗಿ ಯಕ್ಷಗಾನ ಸಂಘಟಕ, ಅರ್ಥದಾರಿ ವಿಠuಲ್‌ ಪ್ರಭು ಕುಕ್ಕೆಹಳ್ಳಿ ಇವರು ಮಾತನಾಡಿ, ಸಂಗೀತ, ನೃತ್ಯ, ತಾಳ, ಮದ್ದಳೆಯೊಂದಿಗೆ ಜರಗುವ ಯಕ್ಷಗಾನ ಪುರಾತನವೂ, ಸಚ್ಚಾರಿತ್ರÂವುಳ್ಳ ಶ್ರೇಷ್ಟ ಕಲೆಯಾಗಿದ್ದು, ಅದರ ಆರಾಧನೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುವ ನಮ್ಮ ಯುವ ಪೀಳಿಗೆ ಇಂತಹ ಯಕ್ಷಗಾನವನ್ನು ವೀಕ್ಷಿಸಿ, ಹುರಿದುಂಬಿಸುವ ಕಾರ್ಯ ವನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾಶೀ ಮಠವು ಗುರುಕೃಪಾ ಕಲಾರಂಗವನ್ನು ಸ್ಥಾಪಿಸಿ ಅದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೇರಕಶಕ್ತಿಯಾಗಿ ಮಾರ್ಪಡಬೇಕು. ಪಂಢರಾಪುರ್‌ ಚಿ ಕ್ಷೇತ್ರ ಮಹಾತೆ¾ ಎಂಬ ಮರಾಠಿ ಯಕ್ಷಗಾನವು ಇಂದು ಪ್ರದರ್ಶನಗೊಂಡಿರುವುದು ದೈವಿಚ್ಛೆಯಾಗಿದೆ. ಯಕ್ಷಗಾನವನ್ನು ಕಲಿಯುವ ಆಸಕ್ತಿಯುಳ್ಳ ಸಮಾಜ ಬಾಂಧವರು ಕಾಶೀ ಮಠದಲ್ಲಿ ಹೆಸರು ನೋಂದಾಯಿಸಿಕೊಂಡರೆ ಅವರಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸಿಕೊಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪಂಢರಾಪುರ ಚೀ ಕ್ಷೇತ್ರ ಮಹಾತೆ¾ ಪ್ರಸಂಗದ ಕೃತಿಯನ್ನು ಸಿ. ಎನ್‌. ಶೆಣೈ ಬಿಡುಗಡೆಗೊಳಿಸಿದರು. 

ಕೃತಿಕಾರ ರಾದ ಎಂ. ಟಿ. ಪೂಜಾರಿ ಇವರನ್ನು ಸಮ್ಮಾನಿಸಲಾಯಿತು. ಸಮ್ಮಾನ ಸ್ವೀಕರಿಸಿದ ಎಂ. ಟಿ. ಪೂಜಾರಿ ಕೃತಜ್ಞತೆ ಸಲ್ಲಿಸಿದರು. ದಹಿಸರ್‌ ಶ್ರೀ ಕಾಶೀ ಮಠದ ವ್ಯವಸ್ಥಾಪಕ ಮಂಡಳಿಯವರಾದ ಮಧುಸೂದನ್‌ ಪೈ, ಕೆ. ವಿ. ಪಡಿಯಾರ, ಚಂದ್ರಶೇಖರ್‌ ಶೆಣೈ, ಉದಯ ಮಲ್ಯ, ಕುಕ್ಕೆಹಳ್ಳಿ ವಿಠಲ ಪ್ರಭು, ಜಿ. ವಿ. ಶೆಣೈ ಹಾಗೂ ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಗುರುಕೃಪಾ ಕಲಾರಂಗ ಸಂಸ್ಥೆಯನ್ನು ಉದ್ಘಾಟಿಸಿದರು.

ಗುರುಕೃಪಾ ಕಲಾರಂಗದ ಉದ್ಧೇಶವನ್ನು ವರದರಾಯ ಮಲ್ಯ ಸಭೆಗೆ ತಿಳಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಿಠuಲ ಪ್ರಭು ಅವರ ನೇತೃತ್ವದಲ್ಲಿ ಪಂಢರಾಪುರಚೀ ಕ್ಷೇತ್ರ ಮಹಾತೆ¾ ಮರಾಠಿ ಯಕ್ಷಗಾನ ಪ್ರದರ್ಶನಗೊಂಡಿತು. ಅಧಿಕ ಸಂಖ್ಯೆಯಲ್ಲಿ ಗೌಡ ಸಾರಸ್ವತ ಮತ್ತು ರಾಜಾಪುರ ಸಾರಸ್ವತ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.