ಮುಲುಂಡ್‌ ಬಂಟ್ಸ್‌ನ ನೂತನ ಅಧ್ಯಕ್ಷರಾಗಿ ಎಚ್‌. ಪ್ರಕಾಶ್ಚಂದ್ರ ಶೆಟ್ಟಿ


Team Udayavani, Aug 3, 2017, 2:54 PM IST

01-Mum06.jpg

ಮುಂಬಯಿ: ಮುಲುಂಡ್‌ ಬಂಟ್ಸ್‌ ಇಂದು ಮುಂಬಯಿಯಲ್ಲಿ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿರುತ್ತದೆ. ಇದಕ್ಕೆ ಎಲ್ಲಾ ಸದಸ್ಯರ ಪರಿಶ್ರಮವೇ ಕಾರಣವಾಗಿದೆ. ಎಲ್ಲರೂಒಟ್ಟಾಗಿ ಸಂಘಟನೆಯಲ್ಲಿ ಶ್ರಮಿಸಬೇಕು. ಸಂಘಟನೆಯ ಮೂಲಕ ಸಮಾಜಪರ ಕಾರ್ಯಕ್ರಮಗಳು ನಿರಂತರ ಜರಗತ್ತಿರಬೇಕು. ಈ ಬಗ್ಗೆ ಮುಂದೆ ಬರುವ ನೂತನ ಆಡಳಿತ ಸಮಿತಿಯು ಮುಂದಾಗಬೇಕು ಎಂದು ಮುಲುಂಡ್‌ ಬಂಟ್ಸ್‌ನ ಅಧ್ಯಕ್ಷ ಎಸ್‌. ಬಿ. ಶೆಟ್ಟಿ ಅವರು ನುಡಿದರು.

ಜು. 30ರಂದು ಮುಲುಂಡ್‌ ಪೂರ್ವದ ಬಾನ್ಸೂರಿ ಹೊಟೇಲ್‌ ಸಭಾಗೃಹದಲ್ಲಿ ಜರಗಿದ ಮುಲುಂಡ್‌ ಬಂಟ್ಸ್‌ನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಹನ್ನೊಂದು ವರ್ಷಗಳಿಂದ ಮುಲುಂಡ್‌ ಪರಿಸರದಲ್ಲಿ ಸಮಾಜದ ಹಿತದೃಷ್ಟಿಯಿಂದ ಅನೇಕ ಕಾರ್ಯಚಟುವಟಿಕೆಗಳನ್ನು ಮುಲುಂಡ್‌ ಬಂಟ್ಸ್‌ ನಡೆಸಿಕೊಂಡು ಬಂದಿದೆ. ಇದಕ್ಕೆ ಸಮಾಜದ ದಾನಿಗಳ ಪ್ರೋತ್ಸಾಹವು ದೊರೆತಿರುವುದು ಅಭಿಮಾನದ ಸಂಗತಿ. ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಸಂಘಟನೆಯ ಬೆಳವಣಿಗೆಗೆ ಉತ್ತಮ ಕೊಡುಗೆ ನೀಡಿದ್ದಾರೆ. ನನ್ನ ಕಾರ್ಯಾವಧಿಯಲ್ಲಿ ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಿಸಲಾಯಿತು. ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಎಚ್‌. ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ನಿರ್ಗಮನ‌ ಅಧ್ಯಕ್ಷ ಎಸ್‌. ಬಿ. ಶೆಟ್ಟಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಸಭೆಯಲ್ಲಿ ಇತರ ಪದಾಧಿಕಾರಿಗಳ ಹೆಸರನ್ನು  ಘೋಷಿಸಿ ಸ್ವಾಗತಿಸಲಾಯಿತು.

ಪ್ರಾರಂಭದಲ್ಲಿ ಕಾರ್ಯದರ್ಶಿ ಅನಂತ್‌ ಅಡ್ಯಂತಾಯ ಅವರು  ಕಳೆದ ಸಾಲಿನ ವಾರ್ಷಿಕ ಮಹಾಸಭೆಯ ವರದಿ ಮಂಡಿಸಿದರು. ಕೋಶಾಧಿಕಾರಿ ಉದಯ ಎನ್‌. ಶೆಟ್ಟಿ ಅವರು ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ಎನ್‌. ವಿವೇಕ್‌ ಶೆಟ್ಟಿ ಮತ್ತು ಡಾ| ಸತ್ಯಪ್ರಕಾಶ್‌ ಶೆಟ್ಟಿ ಅವರು ಸಂಘಟನೆಯ ಬೆಳವಣಿಗೆಯನ್ನು ವಿವರಿಸಿ, ಎಸ್‌. ಬಿ. ಶೆಟ್ಟಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಅಧ್ಯಕ್ಷ ಎಸ್‌. ಬಿ. ಶೆಟ್ಟಿ ಅವರನ್ನು ಗೌರವಿಸಲಾಯಿತು. ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಉಪಸ್ಥಿತರಿದ್ದ ಸದಸ್ಯರು, ಪದಾಧಿಕಾರಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಎಚ್‌. ಪಿ. ಶೆಟ್ಟಿ, ಅನಂತ ಅಡ್ಯಂತಾಯ, ಉದಯ ಎನ್‌. ಶೆಟ್ಟಿ, ಶಂಕರ ಎ. ಶೆಟ್ಟಿ, ರತ್ನಾಕರ ಶೆಟ್ಟಿ, ಕರುಣಾಕರ ಬಿ. ಶೆಟ್ಟಿ, ಮಮತಾ ಎಂ. ಶೆಟ್ಟಿ, ಅಲೋಕ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ನೂತನ ಉಪಾಧ್ಯಕ್ಷ ವಸಂತ್‌ ಪಿ. ಶೆಟ್ಟಿ, ಕಾರ್ಯದರ್ಶಿ ಉದಯ ಎನ್‌. ಶೆಟ್ಟಿ, ಕೋಶಾಧಿಕಾರಿ ಹರ್ಷವರ್ಧನ್‌ ಎ. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ  ಹರಿ ಪ್ರಸಾದ್‌ ಎನ್‌. ಶೆಟ್ಟಿ ಮತ್ತು  ಸುಧಾಕರ ಶೆಟ್ಟಿ ಮತ್ತು ಜತೆ ಕೋಶಾಧಿಕಾರಿ ಪ್ರಸಾದ್‌ ಪಿ. ಶೆಟ್ಟಿ,  ಸಾಮಾಜಿಕ ಸಮಿತಿಯ ರತ್ನಾಕರ ಶೆಟ್ಟಿ, ಕಾರ್ಯಾಧ್ಯಕ್ಷ ವಿಜಯಕುಮಾರ್‌ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ವೇಣುಗೋಪಾಲ್‌ ಶೆಟ್ಟಿ, ಕ್ರೀಡಾ ಸಮಿತಿಯ ಹೇಮಂತ್‌ ವಿ. ಶೆಟ್ಟಿ, ಕ್ಯಾಟರಿಂಗ್‌ ಸಮಿತಿಯ ವಿಟuಲ್‌ ಶೆಟ್ಟಿ, ಲೀಗಲ್‌ ಸಮಿತಿಯ ನ್ಯಾಯವಾದಿ ಜಯಂತ್‌ ಶೆಟ್ಟಿ, ವಿವಾಹ ಸಮಿತಿಯ ಶಶಿಕಾಂತ್‌ ಶೆಟ್ಟಿ, ಕಾರ್ಯಕ್ರಮ ಸಮಿತಿಯ ಜಯ ಸೂಡ, ಕಟ್ಟಡ ಸಮಿತಿಯ ಸದಾನಂದ ಶೆಟ್ಟಿ, ಪ್ರಚಾರ ಸಮಿತಿಯ ಟಿ. ಆರ್‌. ಶೆಟ್ಟಿ, ಮಹಿಳಾ ವಿಭಾಗದ ವಿನುತಾ ಎಸ್‌. ಶೆಟ್ಟಿ, ಯುವ ವಿಭಾಗದ ಮೋಹಿತ್‌ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.