ಸಾಹಿತಿ ಡಾ| ಜೀವಿ ಕುಲಕರ್ಣಿ ಅವರಿಗೆ ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ


Team Udayavani, Apr 4, 2019, 12:37 PM IST

0204mum07

ಮುಂಬಯಿ: ನಗರದ ಹಿರಿಯ ಸಾಹಿತಿ ಡಾ| ಜಿ. ವಿ. ಕುಲಕರ್ಣಿ ಅವರ ಕನ್ನಡ ಕಾವ್ಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಯನ್ನು ಗುರುತಿಸಿ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಸಂಸ್ಥೆಯ ವಾರ್ಷಿಕ ಪ್ರಶಸ್ತಿಯನ್ನು ಪ್ರಧಾನಿಸಿ ಗೌರವಿಸಲಾಯಿತು. ಹಲಸಂಗಿ ಗೆಳೆಯರ ಪ್ರತಿಷ್ಠಾನದವರು ಮಾ. 31ರಂದು ವಿಜಯಪುರದಲ್ಲಿ ಕಂದಗಲ್‌ ಹನುಮಂತರಾಯ ಸಭಾಗೃಹದಲ್ಲಿ ಆಯೋಜಿಸಿದ‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ| ಜಿ. ವಿ. ಕುಲಕರ್ಣಿ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯೊಂದಿಗೆ 51 ಸಾವಿರ ರೂ. ಗಳ ಹಮ್ಮಿಣಿಯೊಂದಿಗೆ ಸಮ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ| ಬಿರಾದಾರ, ನಿವೃತ್ತ ಐಎಎಸ್‌ ಅಧಿಕಾರಿ ಡಾ| ಶಿವಾನಂದ ಜಾಮದಾರ, ಸಾಹಿತಿಗಳಾದ ಡಾ| ಕೊಪ್ಪ, ಡಾ| ಗುರುಲಿಂಗ ಕಾಪಸೆ ಅವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸಂಶೋಧಕರಾದ ಡಾ| ವೀರಣ್ಣ ರಾಜೂರ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.
ಜೀವಿ ಎಂಬ ಕಾವ್ಯನಾಮದಿಂದ ಕನ್ನಡ ರಸಿಕರಿಗೆ ಚಿರಪರಿಚಿತರಾಗಿರುವ ಡಾ| ಜಿ. ವಿ. ಕುಲಕರ್ಣಿ ವಿಜಾಪುರ ಜಿಲ್ಲೆಯ ಡೊಮನಾಳದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣವನ್ನು ಗದಗ, ಕಾಲೇಜು ಶಿಕ್ಷಣವನ್ನು ಧಾರವಾಡದಲ್ಲಿ ಮುಗಿಸಿದರು. ಅನಂತರ ಮುಂಬಯಿಗೆ ಬಂದು ಶಿಕ್ಷಕ ವೃತ್ತಿಯಲ್ಲಿ ತೊಡಗಿದರು. ಕನ್ನಡ ಇನ್ನಿತರ ಪತ್ರಿಕೆಗಳೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದ ಅವರಿಗೆ ವರಕವಿ ಬೇಂದ್ರೆ ಅವರ ಅಂತೇವಾಸಿಯಾಗುವ ಸುಯೋಗ ದೊರಕಿತು. ಸಾಹಿತ್ಯದ ಈ ದಿಗ್ಗಜಗಳ ಒಡನಾಟದ ಫಲವಾಗಿ ಮೂಡಿ ಬಂದ ಅಪರೂಪದ ಕೃತಿ “ನಾ ಕಂಡ ಬೇಂದ್ರೆ’ ಹಾಗೂ “ನಾ ಕಂಡ ಗೋಕಾಕ’. ಈ ಎರಡು ಗ್ರಂಥಗಳು ಅವರಿಗೆ ಮನ್ನಣೆಯನ್ನು ದೊರಕಿಸಿಕೊಟ್ಟಿವೆೆ. ಜೀವಿಯವರು ಸ್ವಭಾವತಃ ಕವಿಗಳು. ಬೇಂದ್ರೆ ಅವರ ಸಂಪರ್ಕದಿಂದಾಗಿ ಅವರ ಕಾವ್ಯಕ್ಕೆ ಹೊಸ ಆಯಾಮ ದೊರೆಯಿತು. ಇನ್ನೂ ವಿದ್ಯಾರ್ಥಿಯಾಗಿರುವಾಗಲೇ ಅವರ “ಮಧುಸಂಚಯ’ ಪ್ರಥಮ ಕವನ ಸಂಕಲನವು ಪ್ರಕಟಗೊಂಡಿತು. ಇಲ್ಲಿನ ಹೆಚ್ಚಿನ ಕವನಗಳು ನಗರದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಜೀವಿಯವರು ಟೈಮ್ಸ್‌ ಆಫ್‌ ಇಂಡಿಯಾದಲ್ಲಿ ದೀರ್ಘ‌ ವಿಮಶಾì ಲೇಖನಗಳನ್ನು ಬರೆದಿದ್ದಾರೆ.

ಜೀವಿಯವರು ಅನೇಕ ಕತೆಗಳು, ಲಲಿತ ಪ್ರಬಂಧಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಅವರು ಬರೆದ ಏಕಾಂಕ ನಾಟಕಗಳು ಅಂತರ್‌ಕಾಲೇಜು ಸ್ಪರ್ಧೆಗಳಲ್ಲಿ ಬಹುಮಾನ ಗಳನ್ನು ಬಾಚಿಕೊಂಡಿವೆ. ಕನ್ನಡ ಸಾಹಿತ್ಯ ಸಮ್ಮೇಳನ, ಅಂತರ್‌ ಭಾಷಾ ಕವಿ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಅವರ ಅಸಂಖ್ಯಾತ ವಿಮಶಾì ಲೇಖನಗಳು ಪ್ರಕಟಗೊಂಡಿವೆ. 2006ರಲ್ಲಿ ಅಮೆರಿಕಾದಲ್ಲಿ ಹ್ಯೂಸ್ಟನ್‌ನಲ್ಲಿ ನಡೆದ ವಿಶ್ವಸಹಸ್ರಮಾನ ಕನ್ನಡ ಸಮ್ಮೇಳನದ ಆಮಂತ್ರಣ ಪಡೆದು ಅಲ್ಲಿ ಕಾವ್ಯವಾಚನ ಮಾಡಿದ್ದಾರೆ. ನಾಲ್ಕು ತಿಂಗಳು ಅಮೆರಿಕಾದಲ್ಲಿ ನೆಲೆಸಿ ಅಲ್ಲಿ ಹಲವಾರು ಕನ್ನಡಪರ ಕಾರ್ಯಕ್ರಮಗಳಲ್ಲಿ ಕಾವ್ಯವಾಚನ ಮಾಡಿದ ಹೆಮ್ಮೆ ಅವರಿಗಿದೆ. ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿಯಂತೆ ಐದು ದಶಕ
ಗಳಿಂದ ಮುಂಬಯಿಯಲ್ಲಿ ಕನ್ನಡ ನಾಡು-ನುಡಿಯ ಸೇವೆ ಯನ್ನು ಮಾಡುತ್ತಿದ್ದಾರೆ. ಅವರಿಗೆ ಹೊರನಾಡ ಕನ್ನಡಿಗರಲ್ಲಿ ಅನನ್ಯ ಸ್ಥಾನವಿದೆ. ಪ್ರಸ್ತುತ ಅವರ ಸಾಧನೆಗೆ ಮತ್ತೂಂದು ಪ್ರಶಸ್ತಿಯ ಗರಿ ಲಭಿಸಿರುವುದು ಹೆಮ್ಮೆಯ ವಿಷಯವಾಗಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.