ಕನ್ನಡ ವಿಭಾಗ ಮುಂಬಯಿ ವಿವಿಯ ಮುಖ್ಯಸ್ಥ ಡಾ| ಉಪಾಧ್ಯರಿಗೆ ಅಭಿನಂದನೆ


Team Udayavani, Feb 10, 2017, 4:48 PM IST

08-Mum08.jpg

ಮುಂಬಯಿ: ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ ಅವರ ಐವತ್ತನೆ ಹುಟ್ಟುಹಬ್ಬವನ್ನು ಫೆ. 7ರಂದು ವಿಭಾಗದ ವಿದ್ಯಾರ್ಥಿ ಮಿತ್ರರು ಆಚರಿಸಿ ಅವರನ್ನು ಅಭಿನಂದಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಭಾಗದ ಹಿರಿಯ ವಿದ್ಯಾರ್ಥಿ, ಮರಾಠಿ ಲೇಖಕ, ಅನುವಾದಕ ಅಪರ್ಣಾ ನಾಯಾYಂವಕರ ಅವರು ಪಾಲ್ಗೊಂಡು ಮಾತ ನಾಡಿ, ಡಾ| ಉಪಾಧ್ಯ ಅವರು ನಮಗೆ ಕನ್ನಡ ಕಲಿಸಿದ ಗುರುಗಳು. ಅವರ ಪ್ರೇರಣೆ ಪ್ರೋತ್ಸಾಹದಿಂದ ಕನ್ನಡ – ಮರಾಠಿ ಅನುವಾದ ಕಾರ್ಯದಲ್ಲಿ ನಿರತಳಾಗಿದ್ದೇನೆ. ಕನ್ನಡ ವಿಭಾಗದ ವಿದ್ಯಾರ್ಥಿ ಮಿತ್ರರು ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಇಲ್ಲಿನ ಗುರುಶಿಷ್ಯರ ಸಂಬಂಧವನ್ನು ಕಂಡು ಸಂತೋಷಪಟ್ಟಿದ್ದೇನೆ. ಮುಂದಿನ ವರ್ಷ ಕನ್ನಡೇತರ ವಿದ್ಯಾರ್ಥಿಗಳೂ ಇದರಲ್ಲಿ ಭಾಗವಹಿಸುವಂತೆ ಮಾಡುವೆ. ವಿಭಾಗದ ಮನೆಯ ವಾತಾವರಣವನ್ನು  ಕಂಡು ಸಂತೋಷವಾಗುತ್ತಿದೆ ಎಂದು ನುಡಿದು, ತಮ್ಮ ಅನುವಾದ ಕಾಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.

ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ ಅವರು ಮಾತನಾಡಿ,  ನಾನು ವ್ಯಕ್ತಿ ಪೂಜೆಯಲ್ಲಿ ನಂಬಿಕೆ ಇಟ್ಟವನಲ್ಲ. ಹುಟ್ಟು ಹಬ್ಬ ಆಚರಿಸಿಕೊಂಡವನೂ ಅಲ್ಲ. ಇಂದಿನ ಕಾರ್ಯಕ್ರಮ ವಿಭಾಗದ ವಿದ್ಯಾರ್ಥಿ ಮಿತ್ರರ ವಿಶ್ವಾಸದ ಪ್ರತೀಕ. ಇದು ಮುಂಬಯಿ ವಿಶ್ವವಿದ್ಯಾಲಯದ 160ರ  ಸಂಭ್ರಮ. ಕನ್ನಡ ವಿಭಾಗದ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ವಿಭಾಗದ ವಿದ್ಯಾರ್ಥಿ ಮಿತ್ರರು ವಿವಿಧ ಕ್ಷೇತ್ರಗಳಲ್ಲಿ ಮಿಂಚುತ್ತಿರುವುದು ಸಂತಸದ ಸಂಗತಿ. ವಿದ್ಯಾರ್ಥಿಗಳ ಕ್ರಿಯಾಶೀಲತೆ, ಪ್ರೀತಿ ವಿಶ್ವಾಸಕ್ಕೆ ನಾನು ಮೂಕನಾಗಿದ್ದೇನೆ ಎಂದು ನುಡಿದು ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ವಿಭಾಗದ ಸಂಶೋಧನ ವಿದ್ಯಾರ್ಥಿ ಖಾಜಪ್ಪ ಮದಾಳ ಅವರು ಬರೆದು ಸಲ್ಲಿಸಿದ ಎಂ. ಬಿ .ಕುಕ್ಯಾನ್‌ ಜೀವನ ಸಾಧನೆ ಎಂಬ ಎಂ.ಫಿಲ್‌ ಸಂಪ್ರಬಂಧವನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದರು. ವಿಭಾಗದ ಸಹಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಶೆಟ್ಟಿ ಅವರು ಇವತ್ತಿನ ಕಾರ್ಯಕ್ರಮಕ್ಕೆ ವಿಶೇಷವಾದ ಮಹತ್ವವಿದೆ. ಮುಂಬಯಿ ವಿಶ್ವವಿದ್ಯಾಲಯ 160ನೇ ವರ್ಷದ ಸಂಭ್ರಮದಲ್ಲಿರುವಾಗಲೇ ವಿಭಾಗದ ಮುಖ್ಯಸ್ಥರಾದ ಡಾ| ಜಿ. ಎನ್‌. ಉಪಾಧ್ಯ ಅವರ 50ನೇ ಹುಟ್ಟುಹಬ್ಬದ ಸಂಭ್ರಮ. ಎರಡನ್ನೂ ಜೊತೆಯಾಗಿ ಆಚರಿಸುವ ಸದವಕಾಶ ದೊರೆತಿದೆ. ಕನ್ನಡ ವಿಭಾಗದಲ್ಲಿ ವಿದ್ಯಾರ್ಥಿಗಳ ಪ್ರೀತಿಪಾತ್ರಾರಾದ ಗುರುಗಳ 50ನೇ ಹುಟ್ಟುಹಬ್ಬವನ್ನು ಆಚರಿಸುವ ಭಾಗ್ಯ ವಿದ್ಯಾರ್ಥಿಗಳಾದ ನಮಗೆ ಸಿಕ್ಕಿರುವುದು ನಮ್ಮ ಸುದೈವ. ಇದು ಕನ್ನಡದ ಕೀರ್ತಿಯನ್ನು ಹೆಚ್ಚಿಸಿದ, ವಿಸ್ತರಿಸಿದ ಗುರುವಂದನ ಕಾರ್ಯಕ್ರಮ ಎಂದು ನುಡಿದು ಡಾ| ಉಪಾಧ್ಯ ಅವರಿಗೆ ಶುಭ ಹಾರೈಸಿದರು.

ವಿಭಾಗದ ಸಹ ಸಂಶೋಧಕ ಶಿವರಾಜ್‌ ಎಂ. ಜಿ. ಹಾಗೂ ರಮಾ ಉಡುಪ, ಪರೀûಾ ವಿಭಾಗದ  ಹಿರಿಯ ಅಧಿಕಾರಿ ವಿಭಾಗದಿಂದ ಇತ್ತೀಚೆಗೆ ಎಂ.ಫಿಲ್‌ ಪದವಿ ಪಡೆದ ಸುಗಂಥಾ ಸತ್ಯಮೂರ್ತಿ, ಕನ್ನಡ ವಿಭಾಗದ ರೂಪೇಶ್‌, ರಮಾಕಾಂತ್‌ ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸಿದರು.  ಕಾರ್ಯಕ್ರಮವನ್ನು ಕನ್ನಡ ವಿಭಾಗದ ವಿದ್ಯಾರ್ಥಿಗಳಾದ  ಸುರೇಖಾ ದೇವಾಡಿಗ, ಗೀತಾ ಆರ್‌. ಎಸ್‌., ಅನಿತಾ ಶೆಟ್ಟಿ, ನಳಿನಾ ಪ್ರಸಾದ್‌, ಜ್ಯೋತಿ ಶೆಟ್ಟಿ, ಕುಮುದಾ ಆಳ್ವ, ಸುರೇಖಾ ಶೆಟ್ಟಿ, ದಿನಕರ ನಂದಿ, ಜಯಕರ ಪಾಲನ್‌ ಮೊದಲಾದವರು ಪಾಲ್ಗೊಂಡಿದ್ದರು. ಹೇಮಾ ಸದಾನಂದ ಅಮೀನ್‌ ವಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.