ಹೆಗ್ಗಡೆ ಸೇವಾ ಸಂಘ ಮುಂಬಯಿ: ವಾರ್ಷಿಕ ಶ್ರೀ ಹನುಮಾನ್‌ ಜಯಂತಿ ಉತ್ಸವ


Team Udayavani, Apr 21, 2019, 4:39 PM IST

2004MUM06A

ನವಿಮುಂಬಯಿ: ನಗರದ ಪ್ರತಿಷ್ಠಿತ ಜಾತೀಯ ಸಂಸ್ಥೆಯಲ್ಲೊಂದಾದ ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಆಶ್ರಯದಲ್ಲಿ ಎ. 19 ಅಪರಾಹ್ನ 3ರಿಂದ ಐರೋಲಿಯ ಸೆಕ್ಟರ್‌ 15ರ ಗುರುದ್ವಾರದ ಸಮೀಪವಿರುವ ಹೆಗ್ಗಡೆ ಭವನದ ಸಭಾಂಗಣದಲ್ಲಿ ಸಮಾಜದ ಕುಲದೇವರಾದ ಶ್ರೀ ಹನುಮಾನ್‌ ಜಯಂತಿ ಮಹೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಅಪರಾಹ್ನ 3ರಿಂದ ದೇವತಾ ಪ್ರಾರ್ಥನೆ ಮತ್ತು ಕಲಶ ಪ್ರತಿಷ್ಠೆ, ಅಪರಾಹ್ನ 3.30ಕ್ಕೆ ಶ್ರೀ ಶನೀಶ್ವರ ಭಜನಾ ಮಂಡಳಿ ನೆರೂಲ್‌ ಇವರ ಬಳಗದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ 5ರಿಂದ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನೆರವೇರಿತು. ಹೆಗ್ಗಡೆ ಸೇವಾ ಸಂಘದ ಸಂತೋಷ್‌ ಹೆಗ್ಡೆ ಮತ್ತು ಪ್ರಮೀಳಾ ಎಸ್‌. ಹೆಗ್ಡೆ ದಂಪತಿ ವಿವಿಧ ಪೂಜಾ ಕೈಂಕರ್ಯಗಳ ಯಜಮಾನತ‌Ìವನ್ನು ವಹಿಸಿ ಸಹಕರಿಸಿದರು.

ಪುರೋಹಿತ ರಮಾಕಾಂತ್‌ ಕುಂಜರಾಯ ಅವರ ಪೌರೋಹಿ ತ್ಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಗ್ಗಡೆ ಸೇವಾ ಸಂಘದ ವತಿಯಿಂದ ಅಧ್ಯಕ್ಷ ವಿಜಯ್‌ ಬಿ. ಹೆಗ್ಡೆ, ಗೌರವಾಧ್ಯಕ್ಷ ಸಂಜೀವ ಪಿ. ಹೆಗ್ಡೆ, ಉಪಾಧ್ಯಕ್ಷ ಸುರೇಶ್‌ ಎಸ್‌. ಹೆಗ್ಡೆ, ಗೌರವ ಪ್ರಧಾನ ಕಾರ್ಯದರ್ಶಿ ಶಂಕರ್‌ ಆರ್‌. ಹೆಗ್ಡೆ, ಕೋಶಾಧಿಕಾರಿ ರಮೇಶ್‌ ಎಂ. ಹೆಗ್ಡೆ, ಜೊತೆ ಕಾರ್ಯದರ್ಶಿ ರವಿ ಎಸ್‌. ಹೆಗ್ಡೆ, ಜೊತೆ ಕೋಶಾಧಿಕಾರಿ ಚಂದ್ರಶೇಖರ್‌ ಬಿ. ಹೆಗ್ಡೆ ಮತ್ತು ಆಡಳಿತ ಮಂಡಳಿ ಸದಸ್ಯರು ಮಹಿಳಾ ವಿಭಾಗದವರು, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು.

ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ, ಐರೋಲಿ ತುಳುಕೂಟದ ಅಧ್ಯಕ್ಷ ಕೆ. ಕೆ. ಹೆಬ್ಟಾರ್‌ ಅವರು ಉಪಸ್ಥಿತರಿದ್ದರು. ರಂಗಕರ್ಮಿ ಅನಿಲ್‌ ಕುಮಾರ್‌ ಹೆಗ್ಡೆ ಅವರಿಂದ ಶೃಂಗರಿಸಲ್ಪಟ್ಟ ದೇವರ ಮಂಟಪ ಭಕ್ತಾದಿಗಳನ್ನು ಆಕರ್ಷಿಸಿತು. ಹೆಗ್ಗಡೆ ಸೇವಾ ಸಂಘದ ಮಾಜಿ ಅಧ್ಯಕ್ಷರುಗಳಾದ ವಿ. ಎಸ್‌. ಹೆಗ್ಡೆ ಮತ್ತು ರತ್ನಾಕರ ಹೆಗ್ಡೆ ಅವರು ಉಪಸ್ಥಿತರಿದ್ದರು.
ಸಂಜೆ 5.30ರಿಂದ ರಾತ್ರಿ 8ರ ವರೆಗೆ ತವರೂರ ಬಹುಮುಖ ಪ್ರತಿಭಾನ್ವಿತ, ನಾಮಾಂಕಿತ ಕಲಾವಿದ, ಹರಿದಾಸ ಪುಷ್ಕಲ್‌ ಕುಮಾರ್‌ ತೋನ್ಸೆ ಇವರಿಂದ ಮತ್ತು ಬಳಗದ ಸದಸ್ಯರ ಕೂಡುವಿಕೆಯಲ್ಲಿ ಸೀತಾ-ಸ್ವಯಂವರ ಹರಿಕಥಾಮೃತ ಪ್ರಸ್ತುತಗೊಂಡಿತು. ಕಾರ್ಯಕ್ರಮದ ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಇದೇ ವೇಳೆ ಮಹಿಳಾ ವಿಭಾಗದವರ ಆಶ್ರಯದಲ್ಲಿ ಉಮಾ ಕೆ. ಶೆಟ್ಟಿ ಅವರ ನೇತೃತ್ವದ ವೈಶಾಲಿ ಸಿಲ್ಕ್ ಸಾರಿ ಇವರ ದಕ್ಷಿಣ ಭಾರತೀಯ ಸೀರೆಗಳ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮ ಜರಗಿತು. ಬೆಳಗ್ಗೆ 11ರಿಂದ ರಾತ್ರಿ 9ರ ವರೆಗೆ ಈ ಸೀರೆಗಳ ಮಾರಾಟ ಮತ್ತು ಪ್ರದರ್ಶನವು ಜರಗಿದ್ದು, ದಕ್ಷಿಣ ಭಾರತೀಯ ಸಿಲ್ಕ… ಸೀರೆಗಳು, ಡ್ರೆಸ್‌ಪೀಸ್‌ಗಳು, ಕಾಂಜೀವರಂ ಸಿಲ್ಕ್, ಕಾಟನ್‌ ಇನ್ನಿತರ ಸೀರೆಗಳನ್ನು ಪ್ರದರ್ಶನ ಮತ್ತು ಮಾರಾಟದಲ್ಲಿ ಇಡಲಾಗಿತ್ತು.

ಸಂಘದ ಆಶ್ರಯದಲ್ಲಿ ಜರಗಿದ ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಮಹಿಳಾ ವಿಭಾಗದವರ ಸಂಪೂರ್ಣ ಮುಂದಾಳತ್ವದಲ್ಲಿ ನಡೆದ ಸೀರೆಗಳ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು, ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸಮಾಜ ಬಾಂಧವರಲ್ಲದೆ, ಸ್ಥಳೀಯ ವಿವಿಧ ಜಾತೀಯ, ಕನ್ನಡಪರ ಹಾಗೂ ಧಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು, ಮಹಿಳಾ ವಿಭಾಗದವರು, ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ದಾನಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.