ಹೆಜಮಾಡಿ ಮೊಗವೀರ ಸಭಾ ಮುಂಬಯಿ ವಿಶೇಷ ಸಭೆ
ಗ್ರಾಮಸಭೆಗಳು ಆಧುನಿಕ ಸಮಸ್ಯೆಗಳಿಗೆ ಸ್ಪಂದಿಸಲಿ: ಕರುಣಾಕರ ಹೆಜ್ಮಾಡಿ
Team Udayavani, May 1, 2019, 3:12 PM IST
ಮುಂಬಯಿ: ಒಂದು ಕಾಲದಲ್ಲಿ ಶಿಕ್ಷಣಾರ್ಥಿಗಳಾಗಿ, ಉದ್ಯೋಗಾ ರ್ಥಿಗಳಾಗಿ ಮುಂಬಯಿಗೆ ಆಗಮಿಸುವ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಆಶ್ರಯ ತಾಣವಾದ ಗ್ರಾಮ ಸಭೆಗಳು ಇಂದು ಅಸ್ತಿತ್ವವನ್ನು ಕಳೆದುಕೊಂಡಿವೆ. ಯಾಕೆಂದರೆ ಇಂದು ಎಲ್ಲ ಜನರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಹಾಗಾಗಿ ಇವರಿಗೆ ಗ್ರಾಮ ಸಭೆಗಳ ಸಹಾಯ ಬೇಕಾಗಿಲ್ಲ. ಆದರೆ ಹಿರಿಯರು ಒಳ್ಳೆಯ ಉದ್ದೇಶಕ್ಕಾಗಿ ಸ್ಥಾಪಿಸಿದ ಗ್ರಾಮ ಸಭೆಗಳನ್ನು ಮುಚ್ಚುವುದು ಸರಿಯಲ್ಲ. ಆಧುನಿಕ ಕಾಲದ ಆವಶ್ಯಕತೆಯಂತೆ ಗ್ರಾಮ ಸಭೆಗಳನ್ನು ಅರ್ಥಪೂರ್ಣವಾಗಿ ಬೆಳೆಸಬೇಕಾದ ಅಗತ್ಯವಿದೆ. ಇಂದಿನ ಸಮುದಾಯದ ಆಧುನಿಕ ಸಮಸ್ಯೆಗಳಿಗೆ ಗ್ರಾಮಸಭೆಗಳು ಸ್ಪಂದಿಸಬೇಕು ಎಂದು ಹೆಜಮಾಡಿ ಮೊಗವೀರ ಸಭಾದ ಅಧ್ಯಕ್ಷ ಕರುಣಾಕರ ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ಅಂಧೇರಿಯ ಮೊಗವೀರ ಭವನದಲ್ಲಿ ನಡೆದ ಹೆಜ ಮಾಡಿ ಮೊಗವೀರ ಸಭಾ ಮುಂಬಯಿ ಇದರ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಸಭೆಗಳು ತಾಯ್ನಾಡ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು.
ಸಮುದಾಯದ ಬಡವರ ಉದ್ಧಾರಕ್ಕಾಗಿ ಕೈಜೋಡಿಸಬೇಕು ಎಂದು ಹೇಳಿದರು. ಹೆಜಮಾಡಿ ಮೊಗವೀರ ಸಭಾ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಸುಂದರ ಪುತ್ರನ್ ಸ್ವಾಗತಿಸಿದರು.
ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಪ್ರತಾಪ್ ಸಾಲ್ಯಾನ್ ಅವರು ವಂದಿಸಿದರು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ