ಕರ್ನಾಟಕ ಸಂಘದ ಕಲಾಭಾರತಿಯಲ್ಲಿ ಹಿಂದುಸ್ತಾನಿ ಸಂಗೀತ ಕಾರ್ಯಕ್ರಮ


Team Udayavani, Mar 4, 2020, 6:54 PM IST

mumbai-tdy-1

ಮುಂಬಯಿ, ಮಾ. 3: ಕರ್ನಾಟಕ ಸಂಘದ ಕಲಾ ವೇದಿಕೆ ಕಲಾಭಾರತಿಯಲ್ಲಿ ಭವಾನಿ – ಮೀರ್‌ಮಿರಾ ಪರಿವಾರದ ಪ್ರಯೋಜಕತ್ವದಲ್ಲಿ ಲಕ್ಷ್ಮೀ ಸುಧೀಂದ್ರ ಇವರ ಸ್ಮರಣಾರ್ಥ ಫೆ. 19ರಂದು ಬೆಳಗ್ಗೆ 10.30ಕ್ಕೆ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ವಿದು ಡಾ|ಅಶ್ವಿ‌ನಿ ಭಿಡೆ – ದೇಶಪಾಂಡೆ ಅವರ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಕಿಕ್ಕಿರಿದ ರಸಿಕ ಶ್ರೋತೃವೃಂದದ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.

ಡಾ| ಅಶ್ವಿ‌ನಿ ಅವರು ತಮ್ಮ ಹಾಡುಗಾರಿಕೆಯನ್ನು ಮೊದಲಿಗೆ “ಬೈರಾಗಿ ತೋಡಿ’ ರಾಗದಲ್ಲಿ “ಚರಣಧ್ಯಾನ ಗುರುಜನ ಅಪಾರ’ ಎಂಬ ವಿಲಂಬಿತ ಬಂದಿಶನ್ನು ವಿಸ್ತೃತವಾಗಿ ಹಾಡಿ, “ಲಗನಲಾಗಿ’ ಎಂಬ ದ್ರುತ ಬಂದಿಶನ್ನು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಮುಂದೆ “ಬೃಂದಾವನ ಸಾರಂಗ’ದಲ್ಲಿ “ಬನ ಬನ ಬಸಂತ’ ಎಂಬ ಬಂದಿಶನ್ನು ಬಹಳ ಸೊಗಸಾಗಿ ಹಾಡಿದರು. ಅನಂತರ ‘ಶ್ಯಾಮ ರಂಗ ಖೇಲತ ಹೋರಿ’ ಎಂಬ ಪಾರಂಪರಿಕ ಹೋಲಿ ಗೀತೆಯನ್ನು ಸಾದರೀಕರಿಸಿ ಕೊನೆಗೆ ಪ್ರೇಮಿಗಳ ಮಿಲನ ಸಂಕೇತದ ಲೋಕಗೀತೆಯನ್ನು ‘ಭೈರವಿ’ ಯಲ್ಲಿ ಮುಕ್ತಾಯಗೊಳಿಸಿದರು.

ಡಾ| ಅಶ್ವಿ‌ನಿ ಅವರಿಗೆ ತಬಲಾದಲ್ಲಿ ಪಂಡಿತ ವಿಶ್ವನಾಥ್‌ ಶಿರೋಡ್ಕರ್‌ ಮತ್ತು ಸಂವಾದಿನಿಯಲ್ಲಿ ಸೀಮಾ ಶಿರೋಡ್ಕರ್‌ ಅವರು ಸಾಥ್‌ ನೀಡಿದರು. ಕುಮಾರಿ ಸ್ವರಾಂಗಿ ಮರಾಠೆ ಹಾಗೂ ಋತುಜಾ ಲಾಡ್‌ ಶಿಷ್ಯೆಯರು ಅಶ್ವಿ‌ನಿ ಅವರಿಗೆ ತಾನ್‌ಪುರಾ ಮತ್ತು ಸ್ವರ ಸಾಥ್‌ ಅನ್ನು ಸಮರ್ಪಕವಾಗಿ ನೀಡಿ ಸಹಕರಿಸಿದರು.

ವಿದು ಅಶ್ವಿ‌ನಿ ಅವರನ್ನು ಸುಧಾ ಮಾಧವ ಜೋಶಿ ಅವರು ಸತ್ಕರಿಸಿದರೆ, ಪಂಡಿತ ವಿಶ್ವನಾಥ್‌ ಅವರನ್ನು ಪಂಡಿತ ಬಾಲಕೃಷ್ಣ ಅಯ್ಯರ್‌ ಮತ್ತು ಸೀಮಾ ಅವರನ್ನು ಗಾಯಕಿ ಸುನೀತಾ ಟಿಕಾರೆ ಸಮ್ಮಾನಿಸಿದರು. ಆಶಾ ಪುರಂದರ್‌ ಅವರು ಋತುಜಾ ಲಾಡ್‌ ಮತ್ತು ಸ್ವರಾಂಗಿ ಮರಾಠೆ ಅವರನ್ನು ಸತ್ಕರಿಸಿದರು.

ಡಾ| ಸುಧೀಂದ್ರ ಭವಾನಿ ಅವರು ಗಾಯಕ ವೃಂದವನ್ನು ಮತ್ತು ಸಮಸ್ತ ರಸಿಕ ಕೇಳುಗರನ್ನು ಹಾರ್ದಿಕವಾಗಿ ಸ್ವಾಗತಿಸಿ, ವಂದನಾರ್ಪಣೆಗೈದರು. ಭೋಜನದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.