ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ


Team Udayavani, Oct 18, 2021, 12:14 PM IST

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ನವಿಮುಂಬಯಿ: ರಕ್ತದಾನ ಶ್ರೇಷ್ಠ ದಾನ. ರಕ್ತದಾನದಿಂದ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಿದೆ. ಈ ದಾನಕ್ಕೆ ಯಾವುದೇ ಜಾತಿ, ಧರ್ಮಗಳ ಭೇದದ ಬಂಧನವಿಲ್ಲ. ಇಲ್ಲಿ ಒಬ್ಬ ವ್ಯಕ್ತಿಯ ಆರೋಗ್ಯ ಕಾಪಾಡುವ, ಜೀವ ಉಳಿಸುವ ಕೆಲಸ ಮಾತ್ರ ಮುಖ್ಯವಾಗಿರುತ್ತದೆ. ಇದೊಂದು ಮಾನವೀಯತೆಯನ್ನು ಸಾರುವ ಪುಣ್ಯದ ಕೆಲಸ ಎಂದು ಬಂಟರ ಸಂಘ ಮುಂಬಯಿ ಹೆಲ್ತ್‌ ಕೇರ್‌ ಸಮಿತಿಯ ಕಾರ್ಯಾಧ್ಯಕ್ಷ ಡಾ| ಸತ್ಯಪ್ರಕಾಶ್‌ ಶೆಟ್ಟಿ ತಿಳಿಸಿದರು.

ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿ ಆಶ್ರಯದಲ್ಲಿ ಥಿಂಕ್‌ ಫೌಂಡೇಶನ್‌ ಹಾಗೂ ಎಂಜಿಎಂ ಹಾಸ್ವಿಟಲ್‌ ಕಾಮೋಟೆ ಇವರ ಸಹಯೋಗದಲ್ಲಿ  ಅ. 10ರಂದು ನೆರೂಲ್‌ ಶ್ರೀ ಶನೀಶ್ವರ ಮಂದಿರದ ಆವರಣದಲ್ಲಿ  ಬೆಳಗ್ಗೆಯಿಂದ ಸಂಜೆಯವರೆಗೆ ನಡೆದ ಬೃಹತ್‌ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಂಟ್ಸ್‌ ಹೆಲ್ತ್‌ ಕೇರ್‌ ಆಶ್ರಯದಲ್ಲಿ ಇದು ನಾಲ್ಕನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಈಗಾಗಲೇ ಜರಗಿದ ಎಲ್ಲ ಶಿಬಿರಗಳು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿವೆ. ಈ ಶಿಬಿರದ ಹಿಂದೆ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ  ಪಡುಬಿದ್ರೆ ಬಹಳಷ್ಟು  ಶ್ರಮ ವಹಿಸುತ್ತಿ¨ªಾರೆ. ಅವರ ಬಳಗ ಈ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ತಿಳಿಸಿ ಅಭಿನಂದಿಸಿದರು.

ಡಾ| ಸತ್ಯಪ್ರಕಾಶ್‌ ಶೆಟ್ಟಿ ಅವರನ್ನು ಬಂಟರ ಸಂಘ ಮುಂಬಯಿ ನವಿ ಮುಂಬಯಿ ಪ್ರಾದೇಶಿಕ ಸಮಿತಿ ವತಿಯಿಂದ ಗಣ್ಯರು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯೊಂದಿಗೆ ಸಮ್ಮಾನಿಸಿ ಅಭಿನಂದಿಸಿದರು.

ನೆರೂಲ್‌ ಶ್ರೀ ಶನೀಶ್ವರ ಮಂದಿರದ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಮಾತನಾಡಿ, ನಮ್ಮ ದೇಹದಲ್ಲಿ ಹರಿಯುವ ರಕ್ತಕ್ಕೆ ಯಾವ ಜಾತಿಯೂ ಇಲ್ಲ. ಮನುಷ್ಯರ ಜೀವನದಲ್ಲಿ ಅಮೂಲ್ಯವಾದ ಈ ರಕ್ತದ ಸಂಗ್ರಹಕ್ಕೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಯಶಸ್ವಿಯಾಗಲಿ, ಅಗತ್ಯವಿರುವವರಿಗೆ ಉಪಯೋಗಕ್ಕೆ ಬರಲಿ ಎಂದು ಶುಭ ಹಾರೈಸಿದರು.

ಬಂಟರ ಸಂಘ ಮುಂಬಯಿ ಇದರ ಪೂರ್ವ ವಲಯದ ಸಮನ್ವಯಕ ಸುಬ್ಬಯ್ಯ ಎ. ಶೆಟ್ಟಿ  ಮಾತನಾಡಿ, ಬಂಟ್ಸ್‌ ಹೆಲ್ತ್‌ ಕೇರ್‌ ಇದರ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಡಾ| ಸತ್ಯಪ್ರಕಾಶ್‌ ಶೆಟ್ಟಿ ಅವರು ಅಲ್ಲಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿ ಉತ್ತಮ ಕೆಲಸವನ್ನು ಮಾಡುತ್ತಿ¨ªಾರೆ. ಈಗಾಗಲೇ 560 ಯುನಿಟ್‌ ರಕ್ತವನ್ನು ಸಂಗ್ರಹಿಸಿರುವುದು ಮಹತ್ತರ ಸಾಧನೆ. ಇವರಿಂದ ಇನ್ನೂ ಹೆಚ್ಚಿನ ಈ ರೀತಿಯ ಕಾರ್ಯ ನಡೆಯಲಿ ಎಂದು ಹಾರೈಸಿದರು.

ರಕ್ತದಾನ ಶಿಬಿರದ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿರುವ ಥಿಂಕ್‌ ಫೌಂಡೇಶನ್‌ನ ವಿನಯ್‌ ಶೆಟ್ಟಿ  ಮಾತನಾಡಿ, ಡಾ| ಸತ್ಯಪ್ರಕಾಶ್‌ ಶೆಟ್ಟಿ ನೇತೃತ್ವದಲ್ಲಿ  ಬಂಟರ ಸಂಘ ಮುಂಬಯಿ ಇದರ ಆಶ್ರಯದಲ್ಲಿ ರಕ್ತದಾನ ಶಿಬಿರದ ಆಯೋಜನೆಯಂತಹ ಒಳ್ಳೆಯ ಕಾರ್ಯ ನಡೆಯುತ್ತಿದೆ. ಅವರ ಈ ಯೋಜನೆಗೆ ಎಲ್ಲ ಬಂಟ ಸಮುದಾಯದವರಿಂದ ಹೆಚ್ಚಿನ  ಪ್ರೋತ್ಸಾಹ ಸಿಗುತ್ತಿರುವುದು ಅಭಿನಂದ ನಾರ್ಹ ಎಂದು ತಿಳಿಸಿ, ಕಾರ್ಯಕ್ರಮ ವನ್ನು ಆಯೋಜಿಸಿದ ನವಿಮುಂಬಯಿ  ಪ್ರಾದೇಶಿಕ ಸಮಿತಿಯ ಎಲ್ಲ ಪದಾಧಿಕಾರಿ ಗಳಿಗೆ ಕೃತಜ್ಞತೆ ಸಲ್ಲಿಸಿದರು.

ಬಂಟರ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ  ಪಡುಬಿದ್ರೆ  ಮುಂದಾಳತ್ವ ವಹಿಸಿದ್ದರು.

ಸಮಾರಂಭದಲ್ಲಿ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್‌ ಡಿ. ಶೆಟ್ಟಿ, ಭಾಸ್ಕರ್‌  ಶೆಟ್ಟಿ ತಾಳಿಪಾಡಿಗುತ್ತು, ಪ್ರಾದೇಶಿಕ ಸಮಿತಿಯ ಹೆಲ್ತ್‌ ಕೇರ್‌ ಸಮಿತಿಯ ಕಾರ್ಯಾಧ್ಯಕ್ಷ ಬಾಲೇಶ್‌ ಅರಿಗ, ಜತೆ ಕಾರ್ಯದರ್ಶಿ ನಾಗೇಶ್‌ ಶೆಟ್ಟಿ ಬೈಕಾಡಿ ಹೆದ್ದಾರಿ ಮನೆ, ಜತೆ ಕೋಶಾಧಿಕಾರಿ ಭಾಸ್ಕರ್‌ ಶೆಟ್ಟಿ ಪದ್ಮ, ಸಲಹೆಗಾರರಾದ ದಯಾನಂದ ಶೆಟ್ಟಿ  ಶಿಮಂತೂರುಭಾವ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಮಹಿಳಾ ವಿಭಾಗದ ಸಲಹಾ ಸಮಿತಿಯ ಕಾರ್ಯಾಧ್ಯಕ್ಷೆ ರೂಪಾ ಡಿ. ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಗುಣವತಿ ವೈ. ಶೆಟ್ಟಿ, ವೀಣಾ ಎ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನವಿಮುಂಬಯಿ ಪ್ರಾದೇಶಿಕ ಸಮಿತಿಯ ವತಿಯಿಂದ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರಿ ಅವರು ರಕ್ತದಾನಗೈದು ಶಿಬಿರಕ್ಕೆ ಚಾಲನೆ ನೀಡಿದರು. ಸಮನ್ವಯಕರಾದ ಜಗದೀಶ್‌ ಶೆಟ್ಟಿ ನಂದಿಕೂರು, ಸಲಹಾ ಸಮಿತಿ ಕಾರ್ಯಾಧ್ಯಕ್ಷ ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಉಪಕಾರ್ಯಾಧ್ಯಕ್ಷ ಭಾಸ್ಕರ್‌ ಶೆಟ್ಟಿ ದಕ್ಷಿಣ್‌, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅದ್ಯಪಾಡಿ, ಕೋಶಾಧಿಕಾರಿ ರವೀಶ್‌ ಜಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ನಿಶ್ಮಿತಾ ಎಸ್‌. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷರಾದ ಸಂತೋಷ್‌ ಡಿ. ಶೆಟ್ಟಿ, ಸಂಜೀವ ಎನ್‌. ಶೆಟ್ಟಿ, ಸಲಹೆಗಾರರಾದ ಧರ್ಮದರ್ಶಿ ಆಣ್ಣಿ ಸಿ. ಶೆಟ್ಟಿ, ರವಿ ಆರ್‌. ಶೆಟ್ಟಿ, ದಯಾನಂದ ಶೆಟ್ಟಿ ಶಿಮಂತೂರುಭಾವ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಬಂಟ್ಸ್‌ ಹೆಲ್ತ… ಕೇರ್‌ ಸಮಿತಿಯ ಕಾರ್ಯಾಧ್ಯಕ್ಷ ಬಾಲೇಶ್‌ ಅರಿಗ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ರೇಣುಕಾ ಭಂಡಾರಿ, ಸಲಹೆಗಾರರಾದ ಸರಿತಾ ಕೆ. ಶೆಟ್ಟಿ, ಅನಿತಾ ಎಸ್‌. ಶೆಟ್ಟಿ, ಸ್ಮಿತಾ ಎಚ್‌. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು. ಒಟ್ಟು 175 ಯುನಿಟ್‌ ರಕ್ತವನ್ನು ಸಂಗ್ರಹಿಸಲಾಯಿತು.

ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ  ಪಡುಬಿದ್ರೆ ಅವರು ಬಂಟರ ಸಂಘದ ಎಲ್ಲ ಪದಾಧಿಕಾರಿಗಳನ್ನು ಪರಿಚಯಿಸಿ, ಸ್ವಾಗತಿಸಿ, ಗೌರವಿಸಿದರು. ಪ್ರಾದೇಶಿಕ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ  ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ರಕ್ತ ಮನುಷ್ಯನ ಪಾಲಿಗೆ ಅದೆಷ್ಟು ಮುಖ್ಯವಾಗಿದೆ ಎನ್ನುವುದನ್ನು ಎಲ್ಲರೂ ಕೊರೊನಾ ಮಹಾಮಾರಿಯ ಸಮಯದಲ್ಲಿ ಅರ್ಥೈಸಿಕೊಂಡಿದ್ದಾರೆ. ಒಂದು ಯುನಿಟ್‌ ರಕ್ತ ಓರ್ವ ವ್ಯಕ್ತಿಯ ಪ್ರಾಣವನ್ನು ಉಳಿಸಬಲ್ಲದು. ಅಂತಹ ಒಂದು ಉತ್ತಮ ಕೆಲಸವನ್ನು ಇಂದು ಬಂಟರ ಸಂಘದ ಹೆಲ್ತ್‌ ಕೇರ್‌ ಸಮಿತಿಯ ಕಾರ್ಯಾಧ್ಯಕ್ಷ ಡಾ| ಸತ್ಯಪ್ರಕಾಶ್‌ ಶೆಟ್ಟಿಯವರು ಮಾಡುತ್ತಿದ್ದಾರೆ. ನಿಜವಾಗಿಯೂ ಇದು ದೇವರು ಮೆಚ್ಚುವ ಕೆಲಸ. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರಿಯವರ ಪರಿಶ್ರಮವನ್ನು ಮೆಚ್ಚಲೇಬೇಕು. ಬಹಳಷ್ಟು ಶ್ರದ್ಧೆಯಿಂದ ಶ್ರಮಿಸುತ್ತಿದ್ದಾರೆ ಎನ್ನುವುದಕ್ಕೆ ಈ ಶಿಬಿರದ ಆಯೋಜನೆಯೇ ನಿದರ್ಶನವಾಗಿದೆ. ಈ ಸಮಿತಿಯಯವರಿಂದ ಹರೀಶ್‌ ಶೆಟ್ಟಿ ಪಡುಬಿದ್ರೆಯವರ ಮುಂದಾಳತ್ವದಲ್ಲಿ ಇನ್ನಷ್ಟು ಈ ರೀತಿಯ ಸಮಾಜಪರ ಸೇವಾ ಕಾರ್ಯ ನಡೆಯುತ್ತಿರಲಿ.-ಡಾ| ಆರ್‌. ಕೆ. ಶೆಟ್ಟಿ , ಗೌರವ ಪ್ರಧಾನ ಕಾರ್ಯದರ್ಶಿ, ಬಂಟರ ಸಂಘ ಮುಂಬಯಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.