ದೂರದೃಷ್ಟಿ, ತ್ಯಾಗ, ಸಮರ್ಪಣೆ ಇದ್ದಲ್ಲಿ ಪರಿವಾರದ ಬೇರು ಸದೃಢ: ಅಶೋಕ್‌ ಸುವರ್ಣ

ನಮ್ಮ ಸತ್ಸಂಪ್ರದಾಯಗಳತ್ತ ಗಮನ ಹರಿಸುವುದು ಒಳಿತು

Team Udayavani, Jul 8, 2023, 5:58 PM IST

ದೂರದೃಷ್ಟಿ, ತ್ಯಾಗ, ಸಮರ್ಪಣೆ ಇದ್ದಲ್ಲಿ ಪರಿವಾರದ ಬೇರು ಸದೃಢ: ಅಶೋಕ್‌ ಸುವರ್ಣ

ಮುಂಬಯಿ: ಯಾವಾಗ ಗಂಡ- ಹೆಂಡತಿ, ಮಕ್ಕಳೇ ಪರಿವಾರ ಎಂಬ ಸಂಸ್ಕೃತಿ ಹುಟ್ಟಿತೋ ಅಲ್ಲಿಂದ ಮದುವೆಯಲ್ಲಿ ಸ್ವಾರ್ಥ ಪ್ರಾರಂಭವಾಗಿ ಪರಿವಾರದ ಘನತೆ ಹಾಗೂ ಸಂಸ್ಕಾರ ಮಾಯವಾಯಿತು. ತಂದೆ- ತಾಯಿ, ಅಕ್ಕ-ತಂಗಿ, ಅಣ್ಣ-ತಮ್ಮ, ಸೋದರ ಮಾವ -ಅತ್ತೆ ಹೀಗೆ ಇವರೊಡನಿದ್ದ ಅನ್ಯೋನ್ಯತೆ ಮಾಯವಾಗಿ ಪರಿವಾರ ಎಂಬ ಮೂಲ ಸಂಸ್ಕಾರಯುತ ಪದ್ಧತಿ ಸವ
ಕಳಿಯಾಯಿತು. ಇಂದಿನ ಶಿಕ್ಷಣ ಪದ್ಧತಿ ಯಲ್ಲಿ ಸಂಪಾದನೆಗಾಗಿ ಬೋಧನೆ ವಿನಾ ವಿಶಾಲ ತಿಳುವಳಿಕೆಗೆ ಆಸ್ಪದವಿಲ್ಲ. ಎಲ್ಲಿ
ದೂರದೃಷ್ಟಿ, ತ್ಯಾಗ, ಸಮರ್ಪಣ ಮನೋ ಭಾವನೆ ಇರುತ್ತದೆಯೋ ಅಲ್ಲಿ ಪರಿವಾರದ ಬೇರುಗಳು ಬಲವಾಗಿರುತ್ತವೆ ಎಂದು
ಮೊಗವೀರ ಮಾಸಿಕದ ಸಂಪಾದಕ ಅಶೋಕ್‌ ಸುವರ್ಣ ತಿಳಿಸಿದರು.

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ವತಿಯಿಂದ ಘಾಟ್‌ಕೋಪರ್‌ ಕನ್ನಡ ವೆಲ್ಫೆàರ್‌ ಸೊಸೈಟಿಯ ಸಭಾಗೃಹ
ದಲ್ಲಿ ಜು. 2ರಂದು ನಡೆದ “ಮದುವೆ, ಪರಿವಾರ ಹಾಗೂ ಸಂಸ್ಕಾರ’ ಎಂಬ ವಿಚಾರ ಸಂಕಿರಣದಲ್ಲಿ ಅವರು ಅಧ್ಯಕ್ಷತೆ ವಹಿಸಿ
ಮಾತನಾಡಿ, ಸಂಸಾರದ ದೀರ್ಘ‌ ಬಾಳಿಕೆಗೆ ಬುನಾದಿ ಈ ಅನುಭವ ಸಂಪನ್ನ ಪರಿವಾರದಿಂದ ಸಾಧ್ಯ ಹಾಗೂ ಅದರ
ಆವಶ್ಯಕತೆಯಿದೆ. ಇಂದು ಅಂತಹ ವಾತಾವರಣವೇ ಇಲ್ಲವಾಗಿವೆ. ಸೊಬಗು, ಪ್ರಲೋಭನೆ, ಸಂಭ್ರಮ, ಆಕರ್ಷಣೆಗಳಿಗೆ
ಒಳಗಾಗಿ ತಮ್ಮ ಬದುಕನ್ನು ಪರಿವಾರ ದಿಂದ ದೂರ ಮಾಡಿಕೊಳ್ಳುತ್ತಾ ಸಮಸ್ಯೆಗೆ ಒಳ ಗಾಗುತ್ತಿದ್ದು, ಇದಕ್ಕೆ ಸಮೃದ್ಧ ಪರಿವಾರದ
ಮಾರ್ಗದರ್ಶನದ ಕೊರತೆ ಕಾರಣವಾಗಿದೆ ಎಂದು ತಿಳಿಸಿದರು.

ಕರ್ನಾಟಕ ಮಹಾಮಂಡಲ ಮೀರಾ- ಭಾಯಂದರ್‌ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಮಾತನಾಡಿ, ಮನುಷ್ಯ
ನಾಗರಿಕತೆ ಅರಿಯದ ಆ ಕಾಲದಲ್ಲಿ ಪ್ರಾಣಿಗಳಂತೆ ಜೀವಿಸುತ್ತಿದ್ದ. ಆಗ ಹೆಣ್ಣಿಗೆ ರಕ್ಷಣೆಯೇ ಇರಲಿಲ್ಲ. ಅದನ್ನರಿತ ನಮ್ಮ
ಹಿರಿಯರು, ಋಷಿಮುನಿಗಳು ಅದಕ್ಕೊಂದು ಪರಿಹಾರ ಹುಡುಕಿದರು. ಹೆಣ್ಣಿಗೆ ರಕ್ಷಣೆ ಜತೆಗೆ ಭದ್ರತೆ ಒದಗಿಸುವುದರೊಂದಿಗೆ
ಸಮೃದ್ಧ ಸಮಾಜಕ್ಕಾಗಿ ಒಂದು ಹೆಣ್ಣಿಗೆ ಒಂದೇ ಗಂಡು. ಅದು ಪವಿತ್ರ ಹಾಗೂ ಜೀವನ ಪರ್ಯಂತದ ಸಂಬಂಧವಾಗಿರಲು
ವ್ಯವಸ್ಥಿತ, ಯೋಜನಾಬದ್ಧ ಕಟ್ಟುಪಾಡುಗಳನ್ನು ಜಾರಿಗೆ ತಂದರು. “ಮದುವೆ’ ಎಂಬ ಸಂಸ್ಕಾರ, ಸುಸಂಸ್ಕೃತ ಶಿಸ್ತುಬದ್ಧ
ದೀರ್ಘ‌ ಬಾಳಿಕೆ ಬರುವ ನಿಯಮಗಳನ್ನು ರೂಪಿಸಿದರೂ ಅವೆಲ್ಲ ಇಂದು ಸವಕಳಿಯಾಗುತ್ತ ವಿಭಜನೆಯತ್ತ ಸಾಗುತ್ತಿದೆ. ಎರಡು
ಪವಿತ್ರ ಆತ್ಮಗಳ ಹಾಗೂ ಪರಿವಾರಗಳ ಮಿಲನದೊಂದಿಗೆ ಬಲಿಷ್ಠ ಸಮಾಜ ನಿರ್ಮಾಣಕ್ಕೆ ನಮ್ಮ ಹಿರಿಯರು ನಾಂದಿ
ಹಾಡಿದರು ಎಂದರು.

ವಿಶೇಷ ಅಭ್ಯಾಗತರಾಗಿ ಉಡುಪಿಯಿಂದ ಆಗಮಿಸಿದ್ದ ಸಂಶೋಧನ ಲೇಖಕಿ ಶರೋನಾ ಶೆಟ್ಟಿ ಮಾತನಾಡಿ, “ಮದುವೆ, ಪರಿವಾರ
ಹಾಗೂ ಸಂಸ್ಕಾರ’ ಇದು ಒಂದೇ ದಾರದಲ್ಲಿ ಪೋಣಿಸಿದ ಮಣಿಗಳಂತೆ. ಪರಿವಾರ ಇಲ್ಲದ ಮದುವೆ ದುಷ್ಯಂತ-ಶಕುಂತಲೆಯರ
ಮದುವೆಯಂತೆ ಕಷ್ಟಕ್ಕೆ ಸಿಲುಕಬಹುದು. ಮದುವೆ ವಿಷಯದಲ್ಲಿ ಶ್ರೀರಾಮನ ನಡೆ ನಮಗೆಲ್ಲ ಆದರ್ಶ. ಸ್ವಯಂವರದಲ್ಲಿ ಶಿವ
ಧನಸ್ಸನ್ನು ಮುರಿದು ಸೀತೆಯನ್ನು ಗೆದ್ದ ರಾಮ ಮದುವೆ ಮಾತುಕತೆಗೆ ತನ್ನ ತಂದೆ ದಶರಥ ಮತ್ತು ಪರಿವಾರವನ್ನು ಕೇಳಬೇಕು
ಎನ್ನುತ್ತಾನೆ. ಶ್ರೀರಾಮನ ಆ ನಡೆ ಇಂದಿಗೂ ಪ್ರಸ್ತುತ. ಸಮಾಜದಲ್ಲಿ ಹೆಚ್ಚುತ್ತಿರುವ ವಿಚ್ಛೇದನಗಳಿಗೆ ಸದೃಢ ಪರಿವಾರ ಹಾಗೂ
ಸಂಸ್ಕಾರದ ಕೊರತೆ ಕಾರಣ ಇರಬಹುದು ಎಂಬ ಅಭಿಮತ ವ್ಯಕ್ತಪಡಿಸಿದರು.

ಅತಿಥಿ ಲೇಖಕಿ ಶಾರದಾ ಅಂಚನ್‌ ಅವರು ಕರಾವಳಿ ಹಾಗೂ ಕರ್ನಾಟಕದಲ್ಲಿನ ಮದುವೆ ಸಂಪ್ರದಾಯ, ಸಂಭ್ರಮದ ವಿಶೇಷತೆ
ಹಾಗೂ ಅವುಗಳ ಮಹತ್ವ ತಿಳಿಸಿ, ನಮ್ಮ ಹಿರಿಯರು ಹಾಕಿಕೊಟ್ಟ ಸಂಪ್ರದಾಯದಂತೆ ಮದುವೆ ನಡೆದರೆ ವಿಭಜನೆಗೆ ಯಾವುದೇ
ಅವಕಾಶ ಇರುವುದಿಲ್ಲ. ನಮ್ಮ ಹಿರಿಯರು ರೂಪಿಸಿದ ಮದುವೆ ಕ್ರಮ ದೀರ್ಘ‌ ಬಾಳಿಕೆಯನ್ನು ಪ್ರೋತ್ಸಾಹಿಸುತ್ತಿದ್ದವು. ಹಾಗಾಗಿ
ವಿಚ್ಛೇದನದ ಪ್ರಮೇಯವೇ ಬರುತ್ತಿರಲಿಲ್ಲ. ಹಿರಿಯರು ರೂಪಿಸಿದ್ದ ನಿಯಮಗಳನ್ನು ಮುಂದುವರಿಸೋಣ. ಇಂದಿನ
ಮದುವೆಯಲ್ಲಿನ ಮೆಹಂದಿ, ಫೋಟೋಗ್ರಾ ಫರ್‌, ವೀಡಿಯೋ ಚಿತ್ರೀಕರಣಕ್ಕೆ ಅಧಿಕ ಮಹತ್ವ ನೀಡಲಾಗುತ್ತದೆ. ನಮ್ಮ ಅರ್ಥ
ವತ್ತಾದ ಸಂಪ್ರದಾಯಗಳು ಆಧುನಿಕತೆಯ ಭರಾಟೆಯಲ್ಲಿ ಮಸುಕಾಗುತ್ತಿರುವುದು ಒಳ್ಳೆ ಯ ಬೆಳವಣಿಗೆಯಲ್ಲ. ಮದುವೆ ಜೀವನ
ಪರ್ಯಂತದ ಸಂಬಂಧವಾಗಿರಬೇಕಾದರೆ ನಮ್ಮ ಸತ್ಸಂಪ್ರದಾಯಗಳತ್ತ ಗಮನ ಹರಿಸುವುದು ಒಳಿತು ಎಂದರು.

ಲೇಖಕಿ ಶಾಂತಾ ಶಾಸ್ತ್ರಿ ಮಾತನಾಡಿದರು. ಹಿರಿಯ ಲೇಖಕಿ ಡಾ| ಶೈಲಜಾ ಹೆಗಡೆ ಅವರು ವೇದವ್ಯಾಸರ ಕುರಿತು ಮಾಹಿತಿ
ನೀಡಿದರು. ಕನ್ನಡ ವೆಲ್ಫೇರ್‌ ಸೊಸೈಟಿಯ ವೀಣಾ ಶೆಟ್ಟಿ ಪ್ರಾರ್ಥನೆಗೈದರು. ಅತಿಥಿಗಳು ದೀಪ ಪ್ರಜ್ವಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಲತಾ ಸಂತೋಷ್‌ ಮುದ್ದುಮನೆ ಅತಿಥಿಗಳನ್ನು ಸ್ವಾಗತಿಸಿದರು.

ಪ್ರತಿಷ್ಠಾನದ ಕಾರ್ಯದರ್ಶಿ ವಿಶ್ವನಾಥ ದೊಡ್ಮನೆ ಪ್ರಾಸ್ತಾವಿಸಿ, ಇಂತಹ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳುವ ಉದ್ದೇಶ ಹಾಗೂ
ಪ್ರತಿಷ್ಠಾನದ ಕುರಿತು ವಿವರಿಸಿದರು. ಪ್ರತಿಷ್ಠಾನದ ಉಪಾಧ್ಯಕ್ಷ ರಾಜೇಶ ಗೌಡ ಸಿಂಧೂರ, ಕಾರ್ಯಕ್ರಮಕ್ಕೆ ಸಹಕರಿಸಿದ
ಕನ್ನಡ ವೆಲ್ಫೇರ್‌ ಸೊಸೈಟಿಯ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನ ಬಾಳಿಕೆ, ನಾರಾಯಣ ರಾವ್‌, ಸವಿತಾ ಎಸ್‌. ಶೆಟ್ಟಿ, ಜಿ. ವಿ. ಹೆಗಡೆ ಹಾಗೂ ಗೀತ ಗಾಯನದಲ್ಲಿ ಪಾಲ್ಗೊಂಡ ವೀಣಾ ಶೆಟ್ಟಿ, ಮಾಲತಿ ಪುತ್ರನ್‌, ಉಮಾ ಭಟ್‌ ಘನ್ಸೋಲಿ ಮೊದಲಾದವರನ್ನು ಗೌರವಿಸಲಾಯಿತು. ಸುರೇಶ್‌ ಶೆಟ್ಟಿ ಕಣಂಜಾರು ಕಾರ್ಯಕ್ರಮ ನಿರೂಪಿಸಿದರು.

“ಮದುವೆ, ಪರಿವಾರ ಹಾಗೂ ಸಂಸ್ಕಾರ’ ಶಬ್ದಗಳು ಪ್ರಪಂಚದ ನಿರಂತರತೆಯ ಅಸ್ತಿತ್ವವನ್ನು ಹೇಳುವ ಸಂಕೇತಗಳು. ಮದುವೆ ಶಬ್ದದಲ್ಲಿ ಎರಡು ಜೀವಾತ್ಮಗಳು ಅಡಕವಾಗಿವೆ. ಮದುವೆ ಎಂಬುದು ಒಂದು ಗಂಡು-ಹೆಣ್ಣಿನ “ಬಂಧನ’ ಮಾತ್ರವಲ್ಲ, ಅದು ಎರಡು ಕುಟುಂಬಗಳನ್ನು ಬೆಸೆಯುತ್ತವೆ. ಶತ್ರುತ್ವ ಅಳಿಸಿ ಮಿತ್ರತ್ವ ಬೆಳೆಸುವ ಶಕ್ತಿ ಮದುವೆಗಿದೆ. ವಿವಾಹ ನಮ್ಮ ಸಾಮಾಜಿಕ ವ್ಯವಸ್ಥೆಯ ಭದ್ರ ಬುನಾದಿಯಲ್ಲೊಂದಾಗಿದೆ.
ಶಾಂತಾ ಶಾಸ್ತ್ರೀ , ಲೇಖಕಿ

ಗುರಿ ತಲುಪಬೇಕಾದರೆ ಗುರು ಬೇಕು. ಗುರಿ ತಲುಪಿದ ಮೇಲೆಯೂ ಗುರುವನ್ನು ಮರೆಯದೆ ಗುರುವನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ವೇದವನ್ನು ವಿಂಗಡಿಸಿ ಅದನ್ನು ಜನಮಾಸಾನ್ಯರಿಗೆ ತಲುಪಿಸುವಲ್ಲಿ ಶ್ರಮಿಸಿದ ವೇದವ್ಯಾಸರ ಜಯಂತಿ ಹಲವು ವಿಶೇಷತೆಯಿಂದ ಕೂಡಿದೆ.
ಡಾ| ಶೈಲಜಾ ಹೆಗಡೆ, ಹಿರಿಯ ಲೇಖಕಿ

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.