ಬಂಟ್ಸ್‌ ಫೋರಂ ಮೀರಾಭಾಯಂದರ್‌ ನೂತನ ಕಚೇರಿ ಉದ್ಘಾಟನೆ


Team Udayavani, Mar 14, 2017, 4:54 PM IST

13mum04a.jpg

ಮುಂಬಯಿ: ನಾವು ಮೊದಲು ಸ್ವಾವಲಂಬಿಗಳಾಗಬೇಕು. ಅನಂತರ, ಸ್ವಜಾತಿ ಬಾಂಧವರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಆವಾಗ ಮಾತ್ರ ಸಮುದಾಯ ಸಂಘಟನೆಗಳು ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ. ಹಲವಾರು ಕಾರ್ಯಯೋಜನೆಗಳ ಮೂಲಕ ಪ್ರಸಿದ್ಧಿ ಹೊಂದಿರುವ ಬಂಟ್ಸ್‌ ಫೋರಂ ಮೀರಾ ಭಾಯಂದರ್‌ ಸಮಾಜದ ಅತ್ಯಂತ ಕೆಳಸ್ತರದ ಸದಸ್ಯರನ್ನು ಮುಖ್ಯವಾಹಿನಿಗೆ ಜೋಡಿಸಬೇಕು. ಇಂದು ಶುಭಾರಂಭಗೊಂಡ ಸ್ವಂತ ಕಚೇರಿ ಭದ್ರತೆಯ ಕೇಂದ್ರವಾಗಲಿ, ಜನಸಾಮಾನ್ಯರ ಅಭಯದ ತಾಣವಾಗಲಿ ಎಂದು ಮಹಾರಾಷ್ಟ್ರದ ಮಾಜಿ ಎಂಎಲ್‌ಸಿ ಮುಜಾಫರ್‌ ಹುಸೇನ್‌ ಅವರು ಅಭಿಪ್ರಾಯಪಟ್ಟರು.

ಮಾ. 12ರಂದು ಮೀರಾರೋಡ್‌ ಪೂರ್ವದ ಪಲಿಮಾರು ಮಠದ ಎದುರಿನ ನ್ಯೂಪ್ರಿಯಾಂಕ ಅಪಾರ್ಟ್‌ಮೆಂಟ್‌ನ ತಳಮಹಡಿಯಲ್ಲಿರುವ ಬಂಟ್ಸ್‌ ಫೋರಂ ಮೀರಾಭಾಯಂದರ್‌ ಇದರ  ಸ್ವಂತ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು,  ನಿಸ್ವಾರ್ಥ ಸೇವಾಕರ್ತರ ಅವಿರತ ಶ್ರಮ ಇಂದು ಫಲ ನೀಡಿತು. ನೂತನ ಕಚೇರಿ ದಿನ ನಿತ್ಯದ ಸಾಮಾಜಿಕ ಚಿಂತನ ಮಂಥನಗಳ ವೇದಿಕೆಯಾಗಲಿ ಎಂದು ಶುಭ ಹಾರೈಸಿದರು.

ಅಧ್ಯಕ್ಷ ಜಯಪ್ರಕಾಶ್‌ ಭಂಡಾರಿ ಅವರು ಮಾತನಾಡಿ, ಬಹುದಿನಗಳ ಕನಸು ಇಂದು ಸಾಕಾರಗೊಂಡಿತು. ನೂತನ ಕಚೇರಿಯಲ್ಲಿ  ಪ್ರತಿಯೊಬ್ಬ ಕಾರ್ಯಕರ್ತರ ಉಪಸ್ಥಿತಿ ಅನಿವಾರ್ಯವಾಗಿದೆ. ಬಂಟರ ಮೂಲ ಸಂಸ್ಕೃತಿಗಳು, ಕಲಾರಾಧನೆಯ ವಿಷಯಗಳ ಬಗ್ಗೆ ಅರಿವನ್ನು ಒದಗಿಸುವ ಕಾರ್ಯಕ್ಕೆ ನಮ್ಮ ಕಚೇರಿ ಹೆಚ್ಚಿನ ಪ್ರಾಧಾನ್ಯ ನೀಡುತ್ತಿದೆ. ನಿರಂತರ ಕಾರ್ಯಕ್ರಮಗಳ ಜೊತೆಗೆ ಪ್ರತಿ ತಿಂಗಳ ಸಂಕ್ರಾಂತಿ
ಯಂದು ಭಜನೆಯನ್ನು ಆಯೋಜಿಸಲಾಗಿದೆ ಎಂದರು.

ಗೌರವ ಅಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ, ಸಂಚಾಲಕ ರಂಜನ್‌ ಶೆಟ್ಟಿ, ಉಪಾಧ್ಯಕ್ಷರಾದ ದಿವಾಕರ ಎಂ. ಶೆಟ್ಟಿ ಮತ್ತು ಆನಂದ್‌ ಶೆಟ್ಟಿ ಕುಕ್ಕುಂದೂರು, ಕಾರ್ಯದರ್ಶಿ ಹರ್ಷ ಕುಮಾರ್‌ ಡಿ. ಶೆಟ್ಟಿ,  ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ,  ಜತೆ ಕಾರ್ಯದರ್ಶಿ ವಿಜಯ ಲಕ್ಷ್ಮೀ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಶರ್ಮಿಳಾ ಕೆ. ಶೆಟ್ಟಿ, ಸಲಹೆಗಾರರಾದ ಮಧುಕರ ಕೆ. ಶೆಟ್ಟಿ, ಮನ್ಮಥ ಕಡಂಬ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರತಿಭಾ ರವಿ  ಶೆಟ್ಟಿ,  ಯುವ ವಿಭಾಗದ ಕಾರ್ಯಾಧ್ಯಕ್ಷ ಸೀತಾರಾಮ್‌ ಶೆಟ್ಟಿ ಅಮಾಸೆಬೈಲು ಹಾಗೂ ಸದಸ್ಯರು ಅತಿಥಿಗಳನ್ನು ಗೌರವಿಸಿದರು.

ಬಿಲ್ಲವರ ಅಸೋಸಿಯೇಶನ್‌ ಮೀರಾರೋಡ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಸಾಲ್ಯಾನ್‌, ಹನುಮಾನ್‌ ಭಜನಾ ಮಂಡಳಿಯ ಅಧ್ಯಕ್ಷ ಜಯರಾಮ್‌ ಶೆಟ್ಟಿ, ಮೊಗವೀರ ಕೋ  ಆಪರೇಟಿವ್‌ ಬ್ಯಾಂಕಿನ ನಿರ್ದೇಶಕ ಜಯಶೀಲ ತಿಂಗಳಾಯ, ಬಂಟ್ಸ್‌ ಸಂಘದ ಮುಂಡಪ್ಪ ಪಯ್ಯಡೆ, ಪದ್ಮನಾಭ ಪಯ್ಯಡೆ, ಕಾಶೀಮೀರಾ ಭಾಸ್ಕರ ಶೆಟ್ಟಿ, ಎಲುಬು ತಜ್ಞ ಡಾ| ಭಾಸ್ಕರ ಶೆಟ್ಟಿ, ಮೀರಾ ಭಾಯಂದರ್‌ ಹೊಟೇಲ್‌ ಅಸೋಸಿಯೇಶನ್‌ನ ಅಧ್ಯಕ್ಷ ರತ್ನಾಕರ ಶೆಟ್ಟಿ, ಕುಲಾಲ ಸಂಘ, ಮೊಗವೀರ ವ್ಯವಸ್ಥಾಪಕ ಮಂಡಳಿ, ದೇವಾಡಿಗ ಸಂಘ, ತುಳುನಾಡ ಸಮಾಜ,  ತುಳುನಾಡ ವೆಲ್ಫೆàರ್‌ ಅಸೋಸಿಯೇಶನ್‌ ಹಾಗೂ ಇತರ ತುಳು ಕನ್ನಡ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ಶುಭ ಹಾರೈಸಿದರು. 

 ಚಿತ್ರ-ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.