ನಾಳೆ ನವೀಕೃತ ಬಂಟ್ಸ್ ಸೆಂಟರ್ ಕಟ್ಟಡ, ಕಿರು ಸಭಾಗೃಹ ಉದ್ಘಾಟನೆ
ಬೋಂಬೆ ಬಂಟ್ಸ್ ಅಸೋಸಿಯೇಶನ್
Team Udayavani, Jul 6, 2019, 4:34 PM IST
ಮುಂಬಯಿ: ನಗರದ ಪ್ರತಿಷ್ಠಿತ ಸಂಘ-ಸಂಸ್ಥೆಗಳಲ್ಲೊಂದಾದ ಬೋಂಬೆ ಬಂಟ್ಸ್ ಅಸೋಸಿಯೇಶನ್ ಇದರ ಬಂಟ್ಸ್ ಸೆಂಟರ್, ಬಂಟ್ಸ್ ಸೆಂಟರ್ ಮಾರ್ಗ, ಸೆಕ್ಟರ್-24, 3ನೇ ಮಹಡಿ, ಪ್ಲಾಟ್ ನಂಬರ್ 6-ಜಿ ಇಲ್ಲಿ ಪುನರ್ ನಿರ್ಮಾಣಗೊಂಡ ಬಂಟ್ಸ್ ಸೆಂಟರ್ ಕಟ್ಟಡದ ಉದ್ಘಾಟನಾ ಸಮಾರಂಭವು ಜು. 7ರಂದು ಅಪರಾಹ್ನ 2ರಿಂದ ಅಸೋಸಿಯೇಶನ್ನ ಅಧ್ಯಕ್ಷ ನ್ಯಾಯವಾದಿ ಸುಭಾಷ್ ಬಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ.
ಈ ಸಂದರ್ಭದಲ್ಲಿ ಕಿರು ಸಭಾಂಗಣದ ಉದ್ಘಾಟನೆಯು ನಡೆಯಲಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹೊಟೇಲ್ ಅವೆನ್ಯೂ ಕಾಂದಿವಲಿ ಸಿಎಂಡಿ, ಬೋಂಬೆ ಬಂಟ್ಸ್ ಅಸೋಸಿಯೇಶನ್ ವಿಶ್ವಸ್ತ ರಘುರಾಮ ಕೆ. ಶೆಟ್ಟಿ, ಶಿವಾನಿ ಮದರ್ ಆ್ಯಂಡ್ ಚೈಲ್ಡ್ ಕೇರ್ ಹಾಸ್ಪಿಟಲ್ ಮುಲುಂಡ್ ಇದರ ಸಿಎಂಡಿ ಡಾ| ಸತ್ಯಪ್ರಕಾಶ್ ಶೆಟ್ಟಿ, ಸೋನಿ ಸ್ಟೀಲ್ ಆ್ಯಂಡ್ ಎಪ್ಲೈಯನ್ಸಸ್ ಪ್ರೈವೇಟ್ ಲಿಮಿಟೆಡ್ ಗೋರೆಗಾಂವ್ ಇದರ ಸಿಎಂಡಿ ಪಾಂಡುರಂಗ ಶೆಟ್ಟಿ, ಬಂಟರ ಸಂಘ ಮುಂಬಯಿ ಪೊವಾಯಿ ಶಿಕ್ಷಣ ಸಂಸ್ಥೆಯ ಮಾಜಿ ಕಾರ್ಯಾಧ್ಯಕ್ಷ ಜಯರಾಮ ಎನ್. ಶೆಟ್ಟಿ, ನ್ಯಾಯವಾದಿ ಪ್ರದೀಪ್ ಕೆ. ಶೆಟ್ಟಿ ಅವರು ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಅಸೋಸಿ ಯೇಶನ್ನ ಮಾಜಿ ಅಧ್ಯಕ್ಷರಾದ ಶ್ಯಾಮ್ ಎನ್. ಶೆಟ್ಟಿ, ಹೆಜಮಾಡಿ ದಿ| ವಿಟuಲ ಶೆಟ್ಟಿ, ಸರ್ವೋತ್ತಮ ಎಚ್. ಶೆಟ್ಟಿ, ದಿ| ಬಾಬು ಎನ್. ಶೆಟ್ಟಿ, ದಿ| ಹಿರಿಯಣ್ಣ ವೈ. ಶೆಟ್ಟಿ, ತೋಕೂರುಗುತ್ತು ಭಾಸ್ಕರ ವೈ. ಶೆಟ್ಟಿ, ತೋಕೂರುಗುತ್ತು ಭಾಸ್ಕರ್ ಶೆಟ್ಟಿ, ಎನ್. ಸಿ. ಶೆಟ್ಟಿ, ಜಯರಾಮ ಎಸ್. ಮಲ್ಲಿ, ನ್ಯಾಯವಾದಿ ಕೆ. ಪಿ. ಪ್ರಕಾಶ್ ಎಲ್. ಶೆಟ್ಟಿ, ನ್ಯಾಯವಾದಿ ದಿ| ಆನಂದ ವಿ. ಶೆಟ್ಟಿ, ಮಧ್ಯಗುತ್ತು ಜಯ ಎನ್. ಶೆಟ್ಟಿ, ಜಯ ಕೆ. ಶೆಟ್ಟಿ, ನ್ಯಾಯವಾದಿ ಅಶೋಕ್ ಡಿ. ಶೆಟ್ಟಿ, ಜಯಂತ್ ಕೆ. ಶೆಟ್ಟಿ, ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ, ಶ್ಯಾಮ್ ಎನ್. ಶೆಟ್ಟಿ, ನ್ಯಾಯವಾದಿ ಉಪ್ಪೂರು ಶೇಖರ್ ಶೆಟ್ಟಿ, ನ್ಯಾಯವಾದಿ ಸುಭಾಷ್ ಬಿ. ಶೆಟ್ಟಿ ಇವರ ಭಾವಚಿತ್ರಗಳನ್ನು ಅನಾವರಣಗೊಳಿಸಲಾಗುವುದು.
ಕಾರ್ಯಕ್ರಮವು ಬೆಳಗ್ಗೆ 8.30 ರಿಂದ ಗಣಹೋಮದೊಂದಿಗೆ ಆರಂಭಗೊಂಡು ಪೂರ್ವಾಹ್ನ 10.30ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ಅನಂತರ ಅನ್ನ ಪ್ರಸಾದ ಕಾರ್ಯಕ್ರಮವು ಜರಗಲಿದೆ. ಅಪರಾಹ್ನ 3ರಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಂಗವಾಗಿ ಊರಿನ ನುರಿತ ಕಲಾವಿದರಿಂದ ಹಾಗೂ ಅಸೋಸಿಯೇಶನ್ನ ಸದಸ್ಯರಿಂದ ಕರ್ಣಾವಸಾನ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಂಸ್ಥೆಯ ಅಧ್ಯಕ್ಷ ನ್ಯಾಯವಾದಿ ಸುಭಾಷ್ ಬಿ. ಶೆಟ್ಟಿ, ಉಪಾಧ್ಯಕ್ಷ ಮುರಳಿ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಎಸ್. ಶೆಟ್ಟಿ,. ಜತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ್ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಶ್ಯಾಮಸುಂದರ್ ಎಸ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾರದಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಚರಣ್ ಆರ್. ಶೆಟ್ಟಿ ಅವರು ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು