ಮೊಗವೀರ ಕೋ.ಆ.ಬ್ಯಾಂಕಿನ ಬೊರಿವಲಿ ಸ್ಥಳಾಂತರಿತ ಶಾಖೆ ಉದ್ಘಾಟನೆ


Team Udayavani, Feb 5, 2018, 4:55 PM IST

0302mum02.jpg

ಮುಂಬಯಿ: ನಗರದ  ಕನ್ನಡಿಗರ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‌ಗಳಲ್ಲಿ ಒಂದಾದ ಮೊಗವೀರ ಕೋ. ಆಪರೇಟಿವ್‌ ಬ್ಯಾಂಕಿನ ಬೊರಿವಲಿ ಪಶ್ಚಿಮದ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭವು ಜ.  29 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ನಗರದ ಪ್ರಖ್ಯಾತ ವೈದ್ಯರಾದ ಡಾ| ಹರ್ಷದ್‌ ಜರಿವಾಲಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷರಾದ ಕೆ. ಎಲ್‌. ಬಂಗೇರರವರು  ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದರು. ಅತಿಥಿಗಳು ರಿಬ್ಬನ್‌ ಕತ್ತರಿಸಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.  ಬ್ಯಾಂಕಿನ ಕಾರ್ಯಾಧ್ಯಕ್ಷರಾದ  ಸದಾನಂದ ಎ. ಕೋಟ್ಯಾನ್‌ ಈ ಸಂದರ್ಭದಲ್ಲಿ ಮಾತನಾಡಿ,  ಬ್ಯಾಂಕಿನ ಇತಿಹಾಸ ಹಾಗೂ ನಡೆದು ಬಂದ ದಾರಿಯಲ್ಲಿ ಸಾಧಿಸಿದ ಸಾಧನೆಗಳನ್ನು ಪ್ರಸ್ತಾಪಿಸಿ ಮುಂದಿನ ಯೋಜನೆಗಳಿಗೆ ಸರ್ವರ ಸಹಕಾರ ಇರಲಿ ಎಂದರು.

ಮುಖ್ಯ ಅತಿಥಿ ಡಾ| ಹರ್ಷದ್‌ ಜರಿವಾಲಾ ಮತ್ತು ಗೌರವ ಅತಿಥಿಗಳಾದ ಕೆ. ಎಲ್‌. ಬಂಗೇರ ಅವರು ಮಾತನಾಡಿ, ತಾವು ಇಂತಹ ಉತ್ತಮ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹರ್ಷವಾಗುತ್ತದೆ ಹಾಗೂ ಪ್ರಸ್ತುತ  ಆಡಳಿತ ಮಂಡಳಿ ಬ್ಯಾಂಕಿನ ಪ್ರಗತಿಗೆ ಶಕ್ತಿಮೀರಿ ದುಡಿಯುತ್ತಿರುವುದು ಹಾಗೂ ಉತ್ತಮ ಯೋಜನೆಗಳನ್ನು ರೂಪಿಸಿ ಧನಾತ್ಮಕ ಚಿಂತನೆಗಳನ್ನು ಹೊಂದಿರುವುದು ಶ್ಲಾಘನೀಯ ಎಂದರು.

ಉಪಾಧ್ಯಕ್ಷರಾದ ಧರ್ಮಪಾಲ ಅವರು ಮಾತನಾಡಿ, ಈಗಿನ  ಸ್ಪರ್ಧಾತ್ಮಕ ಯುಗದಲ್ಲಿ ಬ್ಯಾಂಕ್‌ ಸರ್ವ ರೀತಿಯಿಂದಲೂ ಉನ್ನತಿಗಾಗಿ ಶ್ರಮಿಸುತ್ತಿದೆ. ಮುಂದಿನ  ದಿನಗಳಲ್ಲಿ ಬ್ಯಾಂಕ್‌ ಮತ್ತಷ್ಟು ಪ್ರಗತಿ ಪಥದಲ್ಲಿ ಸಾಗುವ ಭರವಸೆ ಇದೆ ಎಂದರು. ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಡಿ. ಶಿರಾಲಿ ಅವರು ಬ್ಯಾಂಕ್‌ ಈಗ ಹೊಸತಾದ ಹಾಗೂ ಉನ್ನತ ಮಟ್ಟದ ಸಾಫ್ಟ್‌ವೇರ್‌ ಅಳವಡಿಸಿದೆ. ಇದರಿಂದ ಗ್ರಾಹಕರಿಗೆ ಶೀಘ್ರ ಮತ್ತು ಮೌಲ್ಯಯುತ ಸೇವೆ ಲಭ್ಯವಾಗಲಿದೆ ಎಂದರು.

ಬೊರಿವಲಿಯ ಸಂಸದರಾದ ಗೋಪಾಲ ಶೆಟ್ಟಿ ಅವರು  ಆಗಮಿಸಿ  ಶುಭ ಹಾರೈಸಿದರು. ಅವರನ್ನು ಉಪ ಕಾರ್ಯಾಧ್ಯಕ್ಷ ಧರ್ಮಪಾಲ ಅವರು ಗೌರವಿಸಿದರು. ಬ್ಯಾಂಕಿನ ನಿರ್ದೇಶಕರಾದ ಜನಾರ್ದನ ಮುಲ್ಕಿ ಮಾಜಿ ಕಾರ್ಯ  ನಿರ್ವಹಣಾಧಿಕಾರಿ ಎಂ. ಸಿ. ಶೆಟ್ಟಿ, ಉದ್ಯಮಿಗಳಾದ ಏಕನಾಥ ಅಮೀನ್‌, ಜಿಜುಭಾಯಿ ಪಟೇಲ್‌ ಬ್ಯಾಂಕಿನ ಪ್ರಗತಿ ಕುರಿತು ಪ್ರಶಂಶಿಸಿದರು.

ಅತಿಥಿಗಳನ್ನು ಸದಾನಂದ ಕೋಟ್ಯಾನ್‌ ಅವರು, ಶಾಲು ಹೊದೆಸಿ ಫಲಪುಷ್ಪ ನೀಡಿ ಗೌರವಿಸಿದರು. ಸಹಾಯಕ ಜನರಲ್‌ ಮ್ಯಾನೇಜರ್‌  ರೋಹಿತ್‌ ದೇಸಾಯಿ ಸರ್ವರನ್ನು ಸ್ವಾಗತಿಸಿದರು. ನಿರ್ದೇಶಕರಾದ ಜಯಶೀಲ ತಿಂಗಳಾಯ ವಂದಿಸಿದರು. ಮುಂಜಾನೆ ಪೂಜಾ ವಿಧಿಯಿಂದ ಆರಂಭವಾದ ಕಾರ್ಯಕ್ರಮದಲ್ಲಿ ಗ್ರಾಹಕರು, ಹಿತೈಷಿಗಳು,  ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.