ಎರಡು ತಿಂಗಳಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಅಪರಾಧಗಳು


Team Udayavani, Mar 26, 2021, 11:28 AM IST

ಎರಡು ತಿಂಗಳಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಅಪರಾಧಗಳು

ಥಾಣೆ: ಈ ವರ್ಷದ ಮೊದಲ ಎರಡು ತಿಂಗಳಲ್ಲಿ ಥಾಣೆ ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯಲ್ಲಿ  ಹತ್ಯೆ, ಅತ್ಯಾಚಾರ ಮತ್ತು ಅಪಹರಣ ಸಹಿತ ಅಪರಾಧಗಳ ಸಂಖ್ಯೆ ಹೆಚ್ಚಾಗಿದ್ದು, ಸುಮಾರು 1,500ಕ್ಕೂ ಹೆಚ್ಚು ಅಪರಾಧಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿಯಲ್ಲಿ  878 ಪ್ರಕರಣಗಳ ಪೈಕಿ 482 ಅಂದರೆ ಶೇ. 55ರಷ್ಟು ಪರಿಹರಿಸಲಾಗಿದ್ದರೆ, ಫೆಬ್ರವರಿಯಲ್ಲಿ 796 ಪ್ರಕರಣಗಳಲ್ಲಿ 462 ಅಂದರೆ ಶೇ. 58ರಷ್ಟು ಪರಿಹರಿಸುವಲ್ಲಿ ಥಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆಚ್ಚುತ್ತಿರುವ ಅಪರಾಧವನ್ನು  ನಿಗ್ರಹಿಸಲು ಥಾಣೆ ಪೊಲೀಸರು ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸ್‌ ಇಲಾಖೆಯು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಥಾಣೆ ಪೊಲೀಸರು ಅನೇಕ ಪ್ರಮುಖ ಅಪರಾಧಗಳನ್ನು ಭೇದಿಸಿದ್ದಾರೆ. ಆದರೆ 2021 ವರ್ಷ ಪ್ರಾರಂಭದಿಂದ ಅಪರಾಧಗಳು ಮತ್ತೆ ಹೆಚ್ಚುತ್ತಿವೆ. ಕಳೆದ ಎರಡು ತಿಂಗಳಲ್ಲಿ ಥಾಣೆ ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಹಲವಾರು ಗಂಭೀರ ಪ್ರಕರಣಗಳು ನಡೆದಿವೆ. ಜನವರಿಯಲ್ಲಿ 8 ಮತ್ತು ಫೆಬ್ರವರಿಯಲ್ಲಿ 14 ಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 12 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಹತ್ಯೆ ಯತ್ನ ಪ್ರಕರಣಗಳ ಸಂಖ್ಯೆ 17ರಷ್ಟಿದ್ದು ಇದರಲ್ಲಿ 15 ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಜನವರಿಯಲ್ಲಿ 25 ಅತ್ಯಾಚಾರ ಪ್ರಕರಣಗಳು, ಫೆಬ್ರವರಿಯಲ್ಲಿ  16 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಜನವರಿಯಲ್ಲಿ 22 ಪ್ರಕರಣ ಗಳನ್ನು ಮತ್ತು ಫೆಬ್ರವರಿಯಲ್ಲಿ 12 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಎರಡು ದರೋಡೆ ಪ್ರಕರಣಗಳು ದಾಖಲಾಗಿದ್ದು, ಎರಡೂ ಪ್ರಕರಣಗಳನ್ನು ಭೇದಿಸಲಾಗಿದೆ.

ಕಳ್ಳತನ ಪ್ರಕರಣಗಳು ಹೆಚ್ಚಳ :

ಕಳೆದ ಎರಡು ತಿಂಗಳಲ್ಲಿ ಕಳ್ಳತನಗಳ ಪ್ರಕರಣಗಳು ಹೆಚ್ಚಳಗೊಂಡಿವೆ. ಜನವರಿಯಲ್ಲಿ ಪಿಕ್‌ಪಾಕೆಟ್‌ 37 ಪ್ರಕರಣ, ಮನೆಗಳಿಗೆ ನುಗ್ಗಿ ಕಳ್ಳತನದ 51 ಪ್ರಕರಣ ಮತ್ತು ಇತರ ಕಳ್ಳತನದ 218 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ ಕ್ರಮವಾಗಿ 24, 17 ಮತ್ತು 48 ಪ್ರಕರಣಗಳನ್ನು ಮಾತ್ರ ಭೇದಿಸಲಾಗಿದೆ. ಫೆಬ್ರವರಿಯಲ್ಲಿ ಪಿಕ್‌ಪಾಕೆಟ್‌ 31 ಪ್ರಕರಣ, ಮನೆಗೆ ನುಗ್ಗಿ ಕಳ್ಳತನದ 60 ಪ್ರಕರಣ ಮತ್ತು ಇತರ ಕಳ್ಳತನದ 188 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಪೈಕಿ 13 ಪಿಕ್‌ಪಾಕೆಟ್‌, 23 ಮನೆಗೆ ನುಗ್ಗಿ ಕಳವು ಹಾಗೂ ಇತರ ಕಳ್ಳತನದ 48 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಎರಡು ತಿಂಗಳಲ್ಲಿ 115 ವಂಚನೆ ಪ್ರಕರಣಗಳು ದಾಖಲಾಗಿದ್ದು, 33 ಪ್ರಕರಣಗಳನ್ನು ಮಾತ್ರ ಪೊಲೀಸರು ಬಗೆಹರಿಸಿದ್ದಾರೆ. ಅಪಹರಣ ಪ್ರಕರಣಗಳ ಸಂಖ್ಯೆ ಕ್ರಮವಾಗಿ 80 ಮತ್ತು 60 ಆಗಿದ್ದು, ಈ ಪೈಕಿ 50 ಮತ್ತು 39 ಪ್ರಕರಣಗಳು ಪತ್ತೆಯಾಗಿವೆ. ಜನವರಿಯಲ್ಲಿ 51 ಕಿರುಕುಳ ಪ್ರಕರಣಗಳು ಮತ್ತು ಫೆಬ್ರವರಿಯಲ್ಲಿ 40 ಕಿರುಕುಳದ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಕ್ರಮವಾಗಿ 39 ಮತ್ತು 36 ಪ್ರಕರಣಗಳನ್ನು ಬಗೆಹರಿಸಿ¨ªಾರೆ.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.