ಟಿಕೆಟ್‌ ರಹಿತ ಪ್ರಯಾಣಿಕರ ಸಂಖ್ಯೆಏರಿಕೆ

ಉಪನಗರ ಲೋಕಲ್‌ ರೈಲು

Team Udayavani, Jan 9, 2021, 7:33 PM IST

Increase in number of passengers without tickets

ಮುಂಬಯಿ: ಉಪನಗರ ಲೋಕಲ್‌ ರೈಲುಗಳಲ್ಲಿ ಸೀಮಿತ ಸಂಖ್ಯೆಯ ಪ್ರಯಾಣಿಕರಿಗೆ ಅವಕಾಶವಿ ರುವ ಹಿನ್ನೆಲೆ ಟಿಕೆಟ್‌ ರಹಿತ, ಅನಧಿಕೃತ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿದೆ. ಇಂಥ ಅನಧಿಕೃತ ಪ್ರಯಾಣಿಕ ರನ್ನು ಪತ್ತೆಹಚ್ಚಲು ರೈಲ್ವೇ ಕಣ್ಗಾವಲು ಹೆಚ್ಚಿಸಿದ್ದು, ಟಿಕೆಟ್‌ ರಹಿತ ಪ್ರಯಾ ಣಿಕರಲ್ಲಿ ತೀವ್ರ ಏರಿಕೆ ಕಂಡುಬಂದಿದೆ. 2020ರ ಜುಲೈ ಮತ್ತು 2021ರ ಜ. 5ರ ನಡುವೆ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸಲು ಯತ್ನಿಸಿರುವ 77,500 ಅನಧಿಕೃತ ಪ್ರಯಾಣಿಕರ ವಿರುದ್ಧ ಮಧ್ಯ ರೈಲ್ವೇ ಕ್ರಮ ಕೈಗೊಂಡಿದೆ. ಲಾಕ್‌ಡೌನ್‌ಗೆ ಮುಂಚಿತವಾಗಿ 2020ರ ಮಾರ್ಚ್‌ನಲ್ಲಿ ದೈನಂದಿನ ಸುಮಾರು 4.5 ಮಿಲಿಯನ್‌ ಪ್ರಯಾ ಣಿಕರ ಪೈಕಿ ಟಿಕೆಟ್‌ ರಹಿತ ಪ್ರಯಾಣಿಕರ ಸಂಖ್ಯೆಯು 1,000ದಷ್ಟಿತ್ತು.

ಇದೀಗ ದೈನಂದಿನ ಪ್ರಯಾಣಿಕರ ಸಂಖ್ಯೆ 8,00,000ಕ್ಕೆ ಸೀಮಿತಗೊಳಿಸಿರುವಾಗ ಅನಧಿಕೃತ ಪ್ರಯಾಣಿಕರ ಸಂಖ್ಯೆ 1,500ಕ್ಕೆ ಏರಿಕೆಯಾಗಿದೆ. 2020ರ ಜುಲೈ ಮತ್ತು 2021ರ ಜ. 5ರ ನಡುವೆ ಟಿಕೆಟ್‌ ರಹಿತ ಪ್ರಯಾಣಿಕರಿಂದ 1.67 ಕೋಟಿ ರೂ.ಗಳ ದಂಡವನ್ನು ವಸೂಲಿ ಮಾಡಲಾಗಿದೆ. ಲಾಕ್‌ಡೌನ್‌ ಸಡಿಲ ಬಳಿಕ ಲೋಕಲ್‌ ರೈಲುಗಳಲ್ಲಿ ಅಗತ್ಯ ಸೇವಾ ಸಿಬಂದಿ, ವಿಶೇಷ ಚೇತನರು, ಕ್ಯಾನ್ಸರ್‌ ರೋಗಿಗಳಿಗೆ ಜು. 15ರಿಂದ ರೈಲು ಸೇವೆಗಳು ಪುನರಾರಂಭಗೊಂಡವು. ಮಹಿಳಾ ಮತ್ತು ವಕೀಲರಿಗೆ ಕೂಡ ನಿಗದಿತ ಸಮಯದಲ್ಲಿ ಪ್ರಯಾಣಿ ಸಲು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ:ಇಂಡೊನೇಷ್ಯಾ : ಟೇಕಾಫ್ ಆದ ಕೆಲಸಮಯದಲ್ಲೇ 62 ಪ್ರಯಾಣಿಕರನ್ನು ಹೊತ್ತ ವಿಮಾನ ನಾಪತ್ತೆ

ಆದಾಗ್ಯೂ ಅನಧಿಕೃತ ಪ್ರಯಾಣಿಕರ ಸಂಖ್ಯೆ ಇನ್ನೂ ದೊಡ್ಡದಾಗಿದ್ದು, ಇದೀಗ ಅಂಥ ಪ್ರಯಾಣಿಕರ ಸಂಖ್ಯೆ ಒಟ್ಟು ಪ್ರಯಾಣಿಕರಲ್ಲಿ ಶೇ. 30-40 ರಷ್ಟಿದೆ ಎಂದು ರೈಲ್ವೇ ಅಧಿಕಾರಿ ಗಳು ಹೇಳಿದ್ದಾರೆ. ವಲಯ ರೈಲ್ವೇಯು ಪ್ರಯಾಣಿಕರ ತಪಾಸಣೆಯನ್ನು ಹೆಚ್ಚಿಸಿದ್ದು, ಅನಿರೀಕ್ಷಿತ ಟಿಕೆಟ್‌ ಪರಿಶೀಲನೆಗಳನ್ನು ನಡೆಸುತ್ತಿದೆ.

ಜನವರಿಯಲ್ಲಿ ಮಧ್ಯ ರೈಲ್ವೇ ದೈನಂದಿನ 1,500 ಟಿಕೆಟ್‌ ರಹಿತ ಪ್ರಯಾಣದ ಪ್ರಕರಣಗಳನ್ನು ದಾಖಲಿಸಿದೆ. ನವೆಂಬರ್‌ನಿಂದ ಅನಧಿಕೃತ ಪ್ರಯಾಣದಲ್ಲಿ ಹೆಚ್ಚಳ ಕಂಡುಬಂದಿದೆ. ಸಾಮಾನ್ಯ ಜನರಿಗೆ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸಲು ರಾಜ್ಯ ಸರಕಾರವು ಅನುಮತಿ ನೀಡದ ಕಾರಣ ಜನರು ಬುಕಿಂಗ್‌ ಕಚೇರಿಯಲ್ಲಿ ಟಿಕೆಟ್‌ ನಿರಾಕರಿಸಿದ ಬಳಿಕವೂ ರೈಲಿನಲ್ಲಿ ಪ್ರಯಾಣಿಸುತ್ತಿರುವುದು ಕಂಡು ಬಂದಿದೆ. ಎಲ್ಲ ಉಪನಗರ ರೈಲ್ವೇ ತಪಾ ಸಣೆ ಹೆಚ್ಚಿಸಲಾಗಿದೆ ಎಂದು ಮಧ್ಯ ರೈಲ್ವೇ ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.