ರಾಷ್ಟ್ರದ ಅಭಿವೃದ್ಧಿ ಚಿಂತನೆ ಪ್ರತಿ ಮನೆಯಿಂದಲೇ ಆರಂಭವಾಗಲಿ: ನರೇಶ್‌ ದೇವಾಡಿಗ

ದೇವಾಡಿಗ ಸಂಘ ಮುಂಬಯಿ: ನೆರೂಲ್‌ ದೇವಾಡಿಗ ಭವನದಲ್ಲಿ ಸ್ವಾತಂತ್ರ್ಯೋತ್ಸವ

Team Udayavani, Aug 29, 2021, 2:21 PM IST

ರಾಷ್ಟ್ರದ ಅಭಿವೃದ್ಧಿ ಚಿಂತನೆ ಪ್ರತಿ ಮನೆಯಿಂದಲೇ ಆರಂಭವಾಗಲಿ: ನರೇಶ್‌ ದೇವಾಡಿಗ

ನವಿಮುಂಬಯಿ: ರಾಷ್ಟ್ರದ ಬೆಳವಣಿಗೆ, ರಾಷ್ಟ್ರದ ಹಿತಾಸಕ್ತಿ ಎಲ್ಲವೂ ನಮ್ಮ ನಮ್ಮ ಮನೆಯಿಂದಲೇ ಪ್ರಾರಂಭಗೊಳ್ಳುತ್ತದೆ. ಮನೆಯಲ್ಲಿ, ಸಮಾಜದಲ್ಲಿ ಪ್ರಾರಂಭಗೊಂಡ ಒಮ್ಮತ, ಒಗ್ಗಟ್ಟು, ಬೆಳವಣಿಗೆ ಮುಂದುವರಿದು ದೇಶದ ಭದ್ರತೆಗೆ ನೆರವಾಗುವುದು. ಅದಕ್ಕಾಗಿ ನಾವು ನಮ್ಮ ಮನೆ, ಕೇರಿ, ಸಮಾಜಗಳಿಂದಲೇ ದೇಶದ ಬೆಳವಣಿಗೆ, ದೇಶದ ಸಂರಕ್ಷಣೆ ಮತ್ತು ದೇಶದ ಪ್ರಗತಿ ಬಗ್ಗೆ ಚಿಂತನೆಯನ್ನು ಮುಂದುವರಿಸುತ್ತಿರ ಬೇಕು ಎಂದು ದೇವಾಡಿಗ ಸಂಘ ಮುಂಬಯಿ ಇದರ ಉಪಾಧ್ಯಕ್ಷ ನರೇಶ್‌ ದೇವಾಡಿಗ ಹೇಳಿದರು.

ಆ. 15 ರಂದು ಐರೋಲಿಯ ದೇವಾಡಿಗ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯದಿನಾಚರಣೆಯ ಸಂದರ್ಭ ಧ್ವಜಾರೋಹಣಗೈದು ಮಾತನಾಡಿದ ಅವರು, ದೇಶದ ಸ್ವಾತಂತ್ರಕ್ಕಾಗಿ ಬಲಿದಾನ ಮಾಡಿದ ಹೋರಾಟಗಾರರನ್ನು ಸ್ಮರಿಸಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವುದು ಎಲ್ಲರ ಧರ್ಮ ಎಂದರು.

ಸಂಘದ ಮಾಜಿ ಅಧ್ಯಕ್ಷ ಎಸ್‌. ಪಿ. ಕರ್ಮರನ್‌ ಮಾತನಾಡಿ, ಭಾರತದಲ್ಲಿ ಇಂದು ನಾವು ಶಾಂತಿಯುತವಾಗಿ ಬಾಳಲು ಕಾರಣ ನಮಗೆ ದೊರಕಿದ ಸ್ವಾತಂತ್ರ್ಯವಾಗಿದೆ. ಈ ಸ್ವಾತಂತ್ರ್ಯಪಡೆಯಲು ಅದೆಷ್ಟೋ ವೀರರು ಹೋರಾಟ ನಡೆಸಿದ ಕಾರಣ ಈಗ ನಾವು ಯಾವುದೇ ಚಿಂತೆಯಿಲ್ಲದೆ ಸುರಕ್ಷಿತವಾಗಿ ಬದುಕಲು ಸಾಧ್ಯವಾಗಿದೆ. ಅವರ ಬಲಿದಾನದಿಂದ ಬಂದಂತಹ ಈ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಅದನ್ನು ಪ್ರಬಲವಾಗಿಸುವಲ್ಲಿ ಭಾರತದ ಪ್ರತಿ ಪ್ರಜೆಗಳು ದುಡಿಯಬೇಕಾಗಿದೆ. ನಮ್ಮ ಮನೆಯಲ್ಲಿ, ಸಮಾಜದಲ್ಲಿ ನಾವು ಒಗ್ಗಟ್ಟಿನಿಂದ ಬಾಳಿ ಬದುಕಿದರೆ ಅದೇ ದೇಶದ ಉನ್ನತಿಗೆ ಸಾಧನ ಎಂದು ಹೇಳಿದರು.

ಸಂಘದ ಮಹಿಳಾ ಉಪಾಧ್ಯಕ್ಷೆ ಪೂರ್ಣಿಮಾ ಡಿ. ದೇವಾಡಿಗ ಮಾತನಾಡಿ, ಸಂಘ ಬೆಳೆಯಲು ಕಾರಣವಾದ ಎಲ್ಲ ಬಾಂಧವರಿಗೆ ಸಂಘದ ಪರವಾಗಿ ಧನ್ಯವಾದಗಳು. ಸಂಘದ ಶ್ರೇಯಸ್ಸಿಗೆ, ಸಂಘದ ಬೆಳವಣಿಗೆಗಾಗಿ ಎಲ್ಲರೂ ಮುಂದೆ ಬಂದು ಒಮ್ಮತದಿಂದ ಕೆಲಸ ಮಾಡಿದರೆ ಅದೇ ನಿಜವಾದ ಸಮಾಜಸೇವೆ ಮತ್ತು ದೇಶಸೇವೆ ಎಂದು ಹೇಳಿ ಶುಭ ಹಾರೈಸಿದರು.

ಸಂಘದ ಮಾಜಿ ಕೋಶಾಧಿಕಾರಿ ದಯಾನಂದ ದೇವಾಡಿಗ, ಹಿರಿಯ ಸದಸ್ಯ ಚಂದ್ರಶೇಖರ್‌ ದೇವಾಡಿಗ, ಸಂಘದ ಸ್ಥಳೀಯ ಸದಸ್ಯರಾದ ಭೋಜ ದೇವಾಡಿಗ, ಮಹಿಳಾ ಸದಸ್ಯೆಯರಾದ ಸುನಂದಾ ಕರ್ಮರನ್‌, ಧನವತಿ ದೇವಾಡಿಗ, ಶಾಂತಾ ಪಿ. ದೇವಾಡಿಗ, ಶಾಂತಾ ಎಸ್‌. ದೇವಾಡಿಗ, ಆಶಾ ದೇವಾಡಿಗ, ವೈಷ್ಣವಿ ಎನ್‌. ದೇವಾಡಿಗ, ತನ್ವಿ ಡಿ. ದೇವಾಡಿಗ, ಸ್ವಾತಿ ದೇವಾಡಿಗ, ವಿಮಲಾ ದೇವಾಡಿಗ, ಧನುಷ್‌ ಎನ್‌. ದೇವಾಡಿಗ, ರೋಹನ್‌ ಡಿ. ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.ಸಂಘದ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಪ್ರಭಾಕರ್‌ ದೇವಾಡಿಗ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.