“ಸಂಘದ ಕಟ್ಟಡ ಪುನರ್ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ’
ಗೋರೆಗಾಂವ್ ಕರ್ನಾಟಕ ಸಂಘದಲ್ಲಿ 75ನೇ ಸ್ವಾತಂತ್ರ್ಯದಿನಾಚರಣೆ
Team Udayavani, Aug 22, 2021, 1:52 PM IST
ಮುಂಬಯಿ: ಗೋರೆಗಾಂವ್ ಕರ್ನಾಟಕ ಸಂಘದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆ. 15ರಂದು ನಡೆಯಿತು. ಸಂಘದ ಉಪಾಧ್ಯಕ್ಷೆ ಪದ್ಮಜಾ ಮಣ್ಣೂರು ಧ್ವಜಾರೋಹಣಗೈದು ಧ್ವಜವಂದನೆ ಸ್ವೀಕರಿಸಿದರು.
ಬಳಿಕ ಸಂಘದ ಕಿರು ಸಭಾಗೃಹದಲ್ಲಿ ನಡೆದ ಸಭಾ ಕಾರ್ಯಕ್ರಮವು ವಸಂತಿ ಕೋಟೆಕಾರ್, ಶಾಂತಾ ಶೆಟ್ಟಿ ಮತ್ತು ಸುಕನ್ಯಾ ನಾಯಕ್ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಗುಣೋದಯ ಎಸ್. ಐಲ್ ಸ್ವಾಗತಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಉಪಾಧ್ಯಕ್ಷೆ ಪದ್ಮಜಾ ಮಣ್ಣೂರು ಮಾತನಾಡಿ, ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಇಲ್ಲಿ ಸೇರಿದ್ದೇವೆ. ನಮ್ಮ
ದೇಶಕ್ಕೆ ಸ್ವಾತಂತ್ರ್ಯ ಒದಗಿಸಲು ಕಾರಣರಾದ ಎಲ್ಲರನ್ನೂ ಸ್ಮರಿಸೋಣ. ಸಂಘದ ಕಟ್ಟಡ ಪುನರ್ ನಿರ್ಮಾಣಕ್ಕೆ ನಮಗೆ ನಿಧಿಯ ಅಗತ್ಯವಿದ್ದು, ಕರ್ನಾಟಕ ಸರಕಾರದ ಸಹಕಾರವನ್ನು ಪಡೆಯ ಬೇಕಾಗಿದೆ ಎಂದರು.
ಇದನ್ನೂ ಓದಿ:ಗೋವಾ ವಿ.ಸ ಚುನಾವಣೆಯಲ್ಲಿ ಬಿಜೆಪಿ ಜೊತೆ ಎಂಜಿಪಿ ಮೈತ್ರಿ ಸಾಧ್ಯತೆಯ ಸುಳಿವು ಕೊಟ್ಟ ಧವಳೀಕರ್
ಸಂಘದ ಹಿರಿಯ ಸದಸ್ಯ ನಿತ್ಯಾನಂದ ಕೋಟ್ಯಾನ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯದೊರಕಿಸುವಲ್ಲಿ ಶ್ರಮಿಸಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಸ್ಮರಿಸಬೇಕಾಗಿದೆ. ನಮ್ಮ ಸಂಘದ ಕಟ್ಟಡವು ಬೇಗನೇ ಪುನರ್ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಸಚ್ಚೀಂದ್ರ ಕೋಟ್ಯಾನ್ ಮಾತನಾಡಿ, ಈ ಬಾರಿ ಓಲಿಂಪಿಕ್ಸ್ನಲ್ಲಿ ಭಾರತಕ್ಕೆ ಚಿನ್ನದ ಪದಕ ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಮಹಿಳೆಯರು ಇಲ್ಲಿ ತಮ್ಮ ಸಾಧನೆಯನ್ನು ತೋರಿಸಿದ್ದಾರೆ ಎಂದರು.
ಸಂಘದ ಪಾರುಪತ್ಯಗಾರ ಪಯ್ನಾರು ರಮೇಶ್ ಶೆಟ್ಟಿ ಅವರು ಸಂಘದ ಕಟ್ಟಡದ ಪುನರ್ನಿರ್ಮಾಣದ ಬಗ್ಗೆ ತಿಳಿಸಿ, ಹಿರಿಯರಾದ ಎಸ್. ಎಂ. ಶೆಟ್ಟಿ ಅವರು ಹೆಚ್ಚಿನ ಮಟ್ಟದಲ್ಲಿ ಶ್ರಮಿಸಿದ್ದು, ಕಟ್ಟಡದ ಶಂಕುಸ್ಥಾಪನೆಯ ಸಂದರ್ಭ ಅವರನ್ನು ಮುಖ್ಯ ಅತಿಥಿಯಾಗಿ ಆಮಂತ್ರಿಸಬೇಕೆಂದು ತಿಳಿಸಿದರು. ಶಾಂತಾ ಶೆಟ್ಟಿ, ನಿತ್ಯಾನಂದ ಕಾಂಚನ್ ಮೊದಲಾದವರು ಶುಭ ಹಾರೈಸಿದರು.
ಗೌರವ ಪ್ರಧಾನ ಕಾರ್ಯದರ್ಶಿ ಗುಣೋದಯ ಎಸ್. ಐಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ